AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manmohan Singh: ಎಂದೂ ಈಡೇರದೇ ಉಳಿದ ಮನಮೋಹನ್​ ಸಿಂಗ್​ರ ಕನಸೇನು?

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಹಲೋಕ ತ್ಯಜಿಸಿದ್ದಾರೆ, ಅವರ ಸಾವಿನ ಸುದ್ದಿ ಕೇಳುತ್ತಿದ್ದಂತೆ ಇಡೀ ದೇಶವೇ ಶೋಕ ಸಾಗರದಲ್ಲಿ ಮುಳುಗಿದೆ. ಹಾಗೆಯೇ ಅವರ ಈಡೇರದ ಕನಸಿನ ಬಗ್ಗೆಯೂ ಮಾತುಗಳು ಕೇಳಿಬಂದಿದೆ. ಮನಮೋಹನ್ ಸಿಂಗ್ ಅವರ ಆಶಯವನ್ನು ಕಾಂಗ್ರೆಸ್​ ನಾಯಕ ರಾಜೀವ್ ಶುಕ್ಲಾ ಅವರು ತಮ್ಮ ಸಂದರ್ಶನವೊಂದರಲ್ಲಿ ಉಲ್ಲೇಖಿದ್ದಾರೆ, ಸಿಂಗ್​ ಅವರಿಗೆ ಯಾವ ವಿಷಯದ ಬಗ್ಗೆ ವಿಷಾದವಿತ್ತು ಎಂಬುದರ ಕುರಿತು ಮಾಹಿತಿ ಇಲ್ಲಿದೆ.

Manmohan Singh: ಎಂದೂ ಈಡೇರದೇ ಉಳಿದ ಮನಮೋಹನ್​ ಸಿಂಗ್​ರ ಕನಸೇನು?
ಮನಮೋಹನ್ ಸಿಂಗ್ Image Credit source: Times Of India
Follow us
ನಯನಾ ರಾಜೀವ್
|

Updated on: Dec 27, 2024 | 7:31 AM

ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ಗುರುವಾರ ಸಂಜೆ ಹಠಾತ್ ಪ್ರಜ್ಞೆ ತಪ್ಪಿ ಬಿದ್ದಿದ್ದರು, ಅವರನ್ನು ಕೂಡಲೇ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಯಿತು, ಕೊನೆಗೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅವರ ಸಾವಿನ ಸುದ್ದಿ ಕೇಳುತ್ತಿದ್ದಂತೆ ಅವರ ನೆರವೇರದ ಆಸೆಯ ಬಗ್ಗೆಯೂ ಚರ್ಚೆ ನಡೆಯಿತು. ಆದರೆ ತಮ್ಮ ಈಡೇರದ ಕನಸಿನ ಬಗ್ಗೆ ಜೀವನದುದ್ದಕ್ಕೂ ವಿಷಾದ ವ್ಯಕ್ತಪಡಿಸಿದ್ದರು.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಸೆಪ್ಟೆಂಬರ್ 26, 1932ರಲ್ಲಿ ಜನಿಸಿದ ಮನಮೋಹನ್ ಸಿಂಗ್ ಅವರ ಕುಟುಂಬ ವಿಭಜನೆಯ ಬಳಿಕ ಭಾರತಕ್ಕೆ ಬಂದಿತು. ಆದರೆ ತಾವು ಬೆಳೆದ ಸ್ಥಳವನ್ನು ಅವರಿಗೆ ಎಂದೂ ಮರೆಯಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಅವರು ತಮ್ಮ ಸಂದರ್ಶನವೊಂದರಲ್ಲಿ ಮನಮೋಹನ್ ಸಿಂಗ್​ ಅವರ ಕನಸುಗಳ ಬಗ್ಗೆ ಪ್ರಸ್ತಾಪಿಸಿದ್ದರು.

ಮನಮೋಹನ್​ ಸಿಂಗ್​ಗೆ ಇದ್ದ ವಿಷಾದವೇನು? ಸಂದರ್ಶನವೊಂದರಲ್ಲಿ ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಅವರು ಮನಮೋಹನ್ ಸಿಂಗ್ ಅವರ ಆಸೆಯನ್ನು ಬಹಿರಂಗಪಡಿಸಿದ್ದರು. ಮನಮೋಹನ್ ಸಿಂಗ್ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾಗ ತಮ್ಮ ಪಾಕಿಸ್ತಾನಿ ಸ್ನೇಹಿತರೊಂದಿಗೆ ರಾವಲ್ಪಿಂಡಿಗೆ ಹೋಗಿದ್ದರು. ಆ ಪ್ರವಾಸದ ಸಮಯದಲ್ಲಿ ಅವರು ಬೈಸಾಖಿಯ ದಿನದಂದು ಗುರುದ್ವಾರಕ್ಕೆ ಹೋಗಿದ್ದರು, ಆದರೆ ತಮ್ಮ ಹಳ್ಳಿಗೆ ಹೋಗಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಓದಿ: Dr Manmohan Singh Schemes: ಮನಮೋಹನ್ ಸಿಂಗ್ ಅವರನ್ನ ಮರೆತರೂ ಅವರ ಯೋಜನೆಗಳನ್ನ ಮರೆಯಲಾಗದು..!

ತಾಯಿ ತೀರಿಕೊಂಡಾಗ ಸಿಂಗ್ ಇನ್ನೂ ಚಿಕ್ಕವರು ಮನಮೋಹನ್ ಸಿಂಗ್ ತಾಯಿ ತೀರಿಕೊಂಡಾಗ ಅವರಿನ್ನೂ ತುಂಬಾ ಚಿಕ್ಕವರು. ಅರ ಅಜ್ಜನ ಜತೆಯಲ್ಲಿ ಬೆಳೆದಿದ್ದರು, ಯಾವುದೋ ಒಂದು ಗಲಭೆಯಲ್ಲಿ ಅಜ್ಜನನ್ನು ಕೂಡ ಕಳೆದುಕೊಂಡರು. ಈ ಘಟನೆ ಅವರ ಮನಸ್ಸಿನಲ್ಲಿ ಆಳವಾದ ಪರಿಣಾಮ ಬೀರಿತ್ತು.

ಈ ಘಟನೆ ಬಳಿಕ ಅವರು ಪೇಶಾವರದಲ್ಲಿರುವ ತನ್ನ ತಂದೆಯ ಬಳಿಗೆ ಮರಳಿದರು. ಭಾರತದ ವಿಭಜನೆಯ ಸಮಯದಲ್ಲಿ ಅವರು ಹೈಸ್ಕೂಲ್​ನಲ್ಲಿದ್ದಾಗ ಪಾಕಿಸ್ತಾನವನ್ನು ತೊರೆದು ತನ್ನ ತಂದೆಯೊಂದಿಗೆ ಭಾರತಕ್ಕೆ ಬರಬೇಕಾಯಿತು. ರಾಜೀವ್ ಶುಕ್ಲಾ ಪ್ರಕಾರ, ಸಿಂಗ್ ಭಾರತದ ಪ್ರಧಾನಿಯಾಗಿದ್ದಾಗ ಒಮ್ಮೆ ಪಾಕಿಸ್ತಾನಕ್ಕೆ ಹೋಗಬೇಕೆಂದು ಬಯಸಿದ್ದರು. ತಾನು ಬೆಳೆದ ಹಳ್ಳಿಯನ್ನು ನೋಡಬೇಕೆಂಬ ಆಸೆ ಇತ್ತು. ಅವರು ಪ್ರಾಥಮಿಕ ಶಿಕ್ಷಣ ಪಡೆದ ಶಾಲೆಯನ್ನು ನೋಡಲು ಬಯಸಿದ್ದರು.

ಒಮ್ಮೆ ನಾನು ಅವರ ಜತೆ ಪಿಎಂ ಹೌಸ್​ನಲ್ಲಿ ಕುಳಿತಿದ್ದೆ. ಹೀಗೆ ಮಾತನಾಡುತ್ತಿದ್ದಾಗ ಅವರು ತಮಗೆ ಪಾಕಿಸ್ತಾನಕ್ಕೆ ಹೋಗುವ ಆಸೆ ಇದೆ ಎಂದಿದ್ದರು. ನಾನು ಎಲ್ಲಿ ಎಂದು ಕೇಳಿದಾಗ ತಮ್ಮ ಹಳ್ಳಿಗೆ ಹೋಗಬೇಕು ಎಂದು ಹೇಳಿದ್ದಾಗಿ ರಾಜೀವ್ ಶುಕ್ಲಾ ಸಂದರ್ಶನವೊಂದರಲ್ಲಿ ತಿಳಿಸಿದ್ದರು.

ಅವರು ತಮ್ಮ ಆರಂಭಿಕ ಶಿಕ್ಷಣವನ್ನು ಪಡೆದ ಶಾಲೆಯನ್ನು ನೋಡುವ ಅವಕಾಶ ಅವರಿಗೆ ಎಂದಿಗೂ ಇರಲಿಲ್ಲ, ಆದರೆ ಅವರು ಪಾಕಿಸ್ತಾನದ ಗಾಹ್ ಗ್ರಾಮದಲ್ಲಿ ಕಲಿತ ಶಾಲೆಯನ್ನು ಈಗ ಮನಮೋಹನ್ ಸಿಂಗ್ ಸರ್ಕಾರಿ ಬಾಲಕರ ಶಾಲೆ ಎಂದು ಕರೆಯಲಾಗುತ್ತಿದೆ.

ಇದೇ ಗಾಹ್ ಗ್ರಾಮದಲ್ಲಿ ವಾಸವಾಗಿದ್ದ ಹಾಗೂ ಮನಮೋಹನ್ ಸಿಂಗ್ ಅವರ ಸಹಪಾಠಿಯಾಗಿದ್ದ ರಾಜಾ ಮೊಹಮ್ಮದ್ ಅಲಿ ಅವರು ಮನಮೋಹನ್ ಅವರೊಂದಿಗೆ ನಾಲ್ಕನೇ ತರಗತಿಯವರೆಗೆ ಓದಿರುವುದಾಗಿ ಮಾಧ್ಯಮ ವರದಿಯಲ್ಲಿ ತಿಳಿಸಿದ್ದಾರೆ. ನಂತರ ಮನಮೋಹನ್ ಸಿಂಗ್ ಅಧ್ಯಯನಕ್ಕಾಗಿ ಚಕ್ವಾಲ್ ಪಟ್ಟಣಕ್ಕೆ ಹೋದರು. ದೇಶ ವಿಭಜನೆಯ ನಂತರ ಅವರ ಕುಟುಂಬ ಭಾರತಕ್ಕೆ ಹೋಯಿತು. ಆದರೆ ಇಂದಿಗೂ ಗಾಹ್ ಗ್ರಾಮದ ಜನರು ಅವರನ್ನು ನೆನಪಿಸಿಕೊಳ್ಳುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ