AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann ki Baat 100th Episode: ಇಂದು ಬೆಳಗ್ಗೆ 11ಕ್ಕೆ ಪ್ರಸಾರವಾಗಲಿದೆ ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ 100ನೇ ಸಂಚಿಕೆ

Mann ki Baat:ಯುಎನ್ ಪ್ರಧಾನ ಕಛೇರಿಯಲ್ಲಿ ಭಾನುವಾರದ ಮುಂಜಾನೆ ಕಾರ್ಯಕ್ರಮದ ನೇರ ಪ್ರಸಾರವು ಐತಿಹಾಸಿಕ ಮತ್ತು ಅಭೂತಪೂರ್ವವಾಗಿರುತ್ತದೆ. ಇದು ಯುಎನ್‌ನ ಟ್ರಸ್ಟಿಶಿಪ್ ಕೌನ್ಸಿಲ್ ಚೇಂಬರ್‌ನಲ್ಲಿ ಪ್ರಸಾರವಾಗಲಿದೆ

Mann ki Baat 100th Episode: ಇಂದು ಬೆಳಗ್ಗೆ 11ಕ್ಕೆ ಪ್ರಸಾರವಾಗಲಿದೆ ಪ್ರಧಾನಿ ನರೇಂದ್ರ ಮೋದಿಯವರ 'ಮನ್ ಕಿ ಬಾತ್' 100ನೇ ಸಂಚಿಕೆ
ಮೋದಿ ಮನ್ ಕಿ ಬಾತ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 30, 2023 | 6:30 AM

Share

ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್​​ನ (Mann ki Baat) 100ನೇ ಸಂಚಿಕೆ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ(United Nations headquarters) ನೇರಪ್ರಸಾರವಾಗಲಿದೆ. ಪ್ರಧಾನಿ ಮೋದಿಯವರ ಮನ್ ಕಿ ಬಾತ್​​ನ 100 ನೇ ಸಂಚಿಕೆಯು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿರುವ ಟ್ರಸ್ಟಿಶಿಪ್ ಕೌನ್ಸಿಲ್ ಚೇಂಬರ್‌ನಲ್ಲಿ ಏಪ್ರಿಲ್ 30 ರಂದು ನೇರಪ್ರಸಾರವಾಗಲಿರುವುದರಿಂದ ಐತಿಹಾಸಿಕ ಕ್ಷಣಕ್ಕೆ ಸಿದ್ಧರಾಗಿ ಎಂದು ಯುಎನ್‌ಗೆ ಭಾರತದ ಖಾಯಂ ಆಯೋಗ ಟ್ವೀಟ್‌ನಲ್ಲಿ ತಿಳಿಸಿದೆ.ಪ್ರಧಾನಿ ಮೋದಿಯವರ ಮಾಸಿಕ ರೇಡಿಯೋ ಭಾಷಣದ 100 ನೇ ಸಂಚಿಕೆಯು ಏಪ್ರಿಲ್ 30 ರಂದು ಬೆಳಿಗ್ಗೆ 11 ಕ್ಕೆ ಪ್ರಸಾರವಾಗಲಿದೆ. ಅದು ಭಾನುವಾರ ಮಧ್ಯರಾತ್ರಿ 1:30 ಕ್ಕೆ ನ್ಯೂಯಾರ್ಕ್‌ನಲ್ಲಿ ನಡೆದಿದೆ. ಯುಎನ್ ಪ್ರಧಾನ ಕಛೇರಿಯಲ್ಲಿ ಭಾನುವಾರದ ಮುಂಜಾನೆ ಕಾರ್ಯಕ್ರಮದ ನೇರ ಪ್ರಸಾರವು ಐತಿಹಾಸಿಕ ಮತ್ತು ಅಭೂತಪೂರ್ವವಾಗಿರುತ್ತದೆ. ಇದು ಯುಎನ್‌ನ ಟ್ರಸ್ಟಿಶಿಪ್ ಕೌನ್ಸಿಲ್ ಚೇಂಬರ್‌ನಲ್ಲಿ ಪ್ರಸಾರವಾಗಲಿದೆ. ಮನ್ ಕಿ ಬಾತ್ ಮಾಸಿಕ ಕಾರ್ಯಕ್ರಮವಾಗಿದ್ದು ಭಾರತದ ಅಭಿವೃದ್ಧಿಯ ಪ್ರಯಾಣದಲ್ಲಿ ಭಾಗವಹಿಸಲು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತದೆ ಎಂದು ಖಾಯಂ ಆಯೋಗ ಹೇಳಿದೆ.

ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್, ಸಮುದಾಯ ಸಂಸ್ಥೆಗಳ ಜೊತೆಗೆ, ನ್ಯೂಜೆರ್ಸಿಯಲ್ಲಿರುವ ಭಾರತೀಯ-ಅಮೆರಿಕನ್ ಮತ್ತು ಡಯಾಸ್ಪೊರಾ ಸಮುದಾಯದ ಸದಸ್ಯರಿಗೆ 1:30 ಕ್ಕೆ ವಿಶೇಷ ಕಾರ್ಯಕ್ರಮದ ಸಂದರ್ಭದಲ್ಲಿ ‘ಮನ್ ಕಿ ಬಾತ್’ ನ 100 ನೇ ಸಂಚಿಕೆಯ ಪ್ರಸಾರವನ್ನು ಆಯೋಜಿಸುತ್ತಿದೆ.

ಏಪ್ರಿಲ್ 30, 2023 ರಂದು 01.30 ಗಂಟೆಗೆ #MannKiBaat100 ಅನ್ನು ಮಿಸ್ ಮಾಡಿಕೊಳ್ಳಬೇಡಿ! ಗೌರವಾನ್ವಿತ ಪ್ರಧಾನಿ ಮೋದಿ, ಭಾರತೀಯರು, ಭಾರತೀಯ ವಲಸಿಗರು ಮತ್ತು ಪ್ರಪಂಚದಾದ್ಯಂತದ ಕೇಳುಗರೊಂದಿಗೆ ಮನ್ ಕಿ ಬಾತ್ ನನ ಹೆಗ್ಗುರುತು 100 ನೇ ಸಂಚಿಕೆಯನ್ನು ಆಚರಿಸೋಣ ಎಂದು ಕಾನ್ಸುಲೇಟ್‌ ಟ್ವೀಟ್​​ನಲ್ಲಿ ಹೇಳಿದೆ.

ಇದನ್ನೂ ಓದಿ:Mann Ki Baat: ಪ್ರಧಾನಿ ಮೋದಿ ಜತೆ ಮನ್ ಕೀ ಬಾತ್ ಕೇಳಲಿದ್ದಾರೆ ಕರ್ನಾಟಕದ ಸಾಧಕರು

ಪ್ರಧಾನಿ ಮೋದಿ  ‘ಮನ್ ಕಿ ಬಾತ್’ ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇದನ್ನು ಮೊದಲು ಅಕ್ಟೋಬರ್ 3, 2014 ರಂದು ಪ್ರಸಾರ ಮಾಡಲಾಯಿತು. ಇದು ಪ್ರತಿ ತಿಂಗಳ ಕೊನೆಯ ಭಾನುವಾರದಂದು ಬೆಳಿಗ್ಗೆ 11 ಗಂಟೆಗೆ  ಆಲ್ ಇಂಡಿಯಾ ರೇಡಿಯೋ (AIR) ಮತ್ತು ದೂರದರ್ಶನ (DD) ನೆಟ್‌ವರ್ಕ್‌ನಲ್ಲಿ ಪ್ರಸಾರವಾಗುತ್ತದೆ. 30 ನಿಮಿಷಗಳ ಕಾರ್ಯಕ್ರಮದ 100 ನೇ ಸಂಚಿಕೆ ಇಂದು( ಏಪ್ರಿಲ್ 30) ರಂದು ಪ್ರಸಾರವಾಗಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ