AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat: ಪ್ರಯಾಣ ನಿಜವಾಗಿಯೂ ವಿಶೇಷವಾಗಿತ್ತು: ಮನ್​ ಕೀ ಬಾತ್ 100ನೇ ಸಂಚಿಕೆ ಪ್ರಸಾರಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಟ್ವೀಟ್

ಪ್ರಧಾನಿ ನರೇಂದ್ರ ಮೋದಿ(Narendra Modi) ಯವರು ನಡೆಸಿಕೊಡುವ ರೇಡಿಯೋ ಕಾರ್ಯಕ್ರಮ ಮನ್​ ಕೀ ಬಾತ್​(Mann Ki Baat)ನ 100ನೇ ಸಂಚಿಕೆ ಪ್ರಸಾರಕ್ಕೂ ಮುನ್ನ ಪ್ರಧಾನಿ ಟ್ವೀಟ್​ ಮಾಡಿದ್ದಾರೆ.

Mann Ki Baat: ಪ್ರಯಾಣ ನಿಜವಾಗಿಯೂ ವಿಶೇಷವಾಗಿತ್ತು: ಮನ್​ ಕೀ ಬಾತ್ 100ನೇ ಸಂಚಿಕೆ ಪ್ರಸಾರಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಟ್ವೀಟ್
ಮನ್​ ಕಿ ಬಾತ್​
ನಯನಾ ರಾಜೀವ್
|

Updated on: Apr 30, 2023 | 10:07 AM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ಯವರು ನಡೆಸಿಕೊಡುವ ರೇಡಿಯೋ ಕಾರ್ಯಕ್ರಮ ಮನ್​ ಕೀ ಬಾತ್​(Mann Ki Baat)ನ 100ನೇ ಸಂಚಿಕೆ ಪ್ರಸಾರಕ್ಕೂ ಮುನ್ನ ಪ್ರಧಾನಿ ಟ್ವೀಟ್​ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನ 100ನೇ ಸಂಚಿಕೆ ಭಾನುವಾರ (ಏಪ್ರಿಲ್ 30) ಪ್ರಸಾರವಾಗಲಿದೆ. ಈ ಸಂದರ್ಭವನ್ನು ಐತಿಹಾಸಿಕವಾಗಿಸಲು ಬಿಜೆಪಿ ಭರ್ಜರಿ ತಯಾರಿ ನಡೆಸಿದೆ.

100 ಸಂಚಿಕೆಗಳನ್ನು ತಲುಪುವ ಪಯಣ ಅತ್ಯಂತ ವಿಶೇಷ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ಆಲಿಸುವಂತೆ ಪ್ರಧಾನಿ ಟ್ವೀಟ್ ಮಾಡುವ ಮೂಲಕ ಜನತೆಗೆ ಮನವಿ ಮಾಡಿದ್ದಾರೆ. ಬಿಜೆಪಿಯ ಇತರ ನಾಯಕರು ಕೂಡ ಕಾರ್ಯಕ್ರಮದ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದ್ದಾರೆ. ಮನ್ ಕೀ ಬಾತ್ ಕಾರ್ಯಕ್ರಮ ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ.

ಮತ್ತಷ್ಟು ಓದಿ: Mann Ki Baat Conclave: ಮನ್​ ಕೀ ಬಾತ್​ ಸಮಾವೇಶದಲ್ಲಿ ವಿಶೇಷ ಅತಿಥಿಯಾಗಿ ಬಂದಿದ್ದ ಮಹಿಳೆಗೆ ವೇದಿಕೆಯಲ್ಲೇ ಕಾಣಿಸಿಕೊಂಡಿತ್ತು ಹೆರಿಗೆ ನೋವು

ರಕ್ಷಣಾ ಸಚಿವ ರಾಜ್​ನಾಥ್ ಸಿಂಗ್ ಕೂಡ ಟ್ವೀಟ್​ ಮಾಡಿದ್ದು, ಈ ಕಾರ್ಯಕ್ರಮವು ಸಮೂಹ ಸಂವಹನ ಜಗತ್ತಿನಲ್ಲಿ ಒಂದು ಮೈಲಿಗಲ್ಲಾಗಿದೆ. ಈ ಕಾರ್ಯಕ್ರಮದ ಮೂಲಕ ದೇಶವಾಸಿಗಳೊಂದಿಗೆ ನೇರ ಸಂಪರ್ಕವನ್ನು ಸ್ಥಾಪಿಸುವ ಮೂಲಕ ಮೋದಿ ಅವರಿಗೆ ಹಲವು ವಿಷಯಗಳ ಬಗ್ಗೆ ಅರಿವು ಮೂಡಿಸಿದ್ದಲ್ಲದೆ, ಅವರಿಗೆ ಸ್ಫೂರ್ತಿಯನ್ನೂ ನೀಡಿದ್ದಾರೆ.

ಸ್ವಚ್ಛತೆ, ಕೋವಿಡ್ ಯೋಧರನ್ನು ಉತ್ತೇಜಿಸುವುದು, ಬೇಟಿ ಬಚಾವೋ-ಬೇಟಿ ಪಢಾವೋ, ಮೇಕ್ ಇನ್ ಇಂಡಿಯಾ, ಅಥವಾ ಜಲ ಸಂರಕ್ಷಣೆಯ ವಿಷಯವಾಗಿರಲಿ, ಮೋದಿಯವರು ಸಾಮಾನ್ಯರ ಸಮಸ್ಯೆಗಳಿಗೆ ಹೆಚ್ಚು ಒತ್ತು ನೀಡಿದವರು. ಅವರು ತಮ್ಮ ಅಭಿಪ್ರಾಯವನ್ನು ಬಹುತೇಕ ಎಲ್ಲಾ ಅಂಶಗಳಲ್ಲಿ ಬಹಳ ಪರಿಣಾಮಕಾರಿಯಾಗಿ ಮಂಡಿಸಿದ್ದಾರೆ.

ನಾನು ಬಿಜೆಪಿ ರಾಷ್ಟ್ರೀಯ ಕಚೇರಿಯಲ್ಲಿ ಮನ್ ಕೀ ಬಾತ್ ಕಾರ್ಯಕ್ರಮದ ನೂರನೇ ಸಂಚಿಕೆಯನ್ನು ಕೇಳಲು ಹಾಜರಾಗುತ್ತೇನೆ. ನರೇಂದ್ರ ಮೋದಿಯವರ ಈ ಕಾರ್ಯಕ್ರಮವು ಯಶಸ್ಸಿನ ಹೊಸ ದಾಖಲೆಗಳನ್ನು ಸ್ಥಾಪಿಸಲಿ, ನಾನು ಅವರಿಗೆ ಶುಭ ಹಾರೈಸುತ್ತೇನೆ ಎಂದು ಬರೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ