AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat: ಮನ್​ ಕೀ ಬಾತ್​ 100ನೇ ಸಂಚಿಕೆ ವಿಶೇಷ, ಕಲಾವಿದ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಮರಳಲ್ಲಿ ಮೂಡಿಬಂದ ಮೋದಿ

ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪುರಿ ಕಡಲತೀರದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi)  ಅವರ ಮಾಸಿಕ ರೇಡಿಯೊ ಪ್ರಸಾರವಾದ ಮನ್ ಕೀ ಬಾತ್​ನ 100 ನೇ ಸಂಚಿಕೆಯ ಅಂಗವಾಗಿ ಹಲವಾರು ರೇಡಿಯೊಗಳೊಂದಿಗೆ ಮರಳು ಶಿಲ್ಪವನ್ನು ರಚಿಸಿದ್ದಾರೆ.

Mann Ki Baat: ಮನ್​ ಕೀ ಬಾತ್​ 100ನೇ ಸಂಚಿಕೆ ವಿಶೇಷ, ಕಲಾವಿದ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಮರಳಲ್ಲಿ ಮೂಡಿಬಂದ ಮೋದಿ
ಮರಳು ಕಲೆ
ನಯನಾ ರಾಜೀವ್
|

Updated on: Apr 30, 2023 | 10:45 AM

Share

ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪುರಿ ಕಡಲತೀರದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi)  ಅವರ ಮಾಸಿಕ ರೇಡಿಯೊ ಪ್ರಸಾರವಾದ ಮನ್ ಕೀ ಬಾತ್​ನ 100 ನೇ ಸಂಚಿಕೆಯ ಅಂಗವಾಗಿ ಹಲವಾರು ರೇಡಿಯೊಗಳೊಂದಿಗೆ ಮರಳು ಶಿಲ್ಪವನ್ನು ರಚಿಸಿದ್ದಾರೆ. ಪಟ್ನಾಯಕ್ ಸುಮಾರು 7 ಟನ್ ಮರಳನ್ನು ಬಳಸಿ 100 ರೇಡಿಯೋಗಳೊಂದಿಗೆ ಪ್ರಧಾನಿಯನ್ನು ಒಳಗೊಂಡ ಎಂಟು ಅಡಿ ಎತ್ತರದ ಮರಳು ಕಲೆಯನ್ನು ರಚಿಸಿದ್ದಾರೆ.

ಅವರ ಮರಳು ಕಲಾ ಶಾಲೆಯ ವಿದ್ಯಾರ್ಥಿಗಳು ಕಲಾಕೃತಿಯನ್ನು ಪೂರ್ಣಗೊಳಿಸಲು ಸಹಾಯ ಮಾಡಿದರು. ‘ಮನ್ ಕಿ ಬಾತ್’ ನ 100ನೇ ಸಂಚಿಕೆ ಇಂದು ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ.

ಮನ್​ ಕೀ ಬಾತ್​​ನ ರಾಜ್ಯದ ಸಾಧಕರ ಬಗ್ಗೆ ಪ್ರಧಾನಿ ಮೋದಿಯವರು ಪ್ರಸ್ತಾಪಿಸಿದ್ದು, ರಾಜ್ಯದ ಸಾಧಕರಿಗೆ ರಾಜಭವನಕ್ಕೆ ಬರುವಂತೆ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಮನ್​ ಕೀ ಬಾತ್​​ನ 100ನೇ ಸಂಚಿಕೆಯ ಧ್ವನಿಮುದ್ರಣ ಪ್ರಯುಕ್ತ ಕರ್ನಾಟಕದ 7 ಮಂದಿ ಸಾಧಕರನ್ನು ಪ್ರಸಾರ ಭಾರತಿ ಆಹ್ವಾನಿಸಿದ್ದು, ಇವರು ಏಪ್ರಿಲ್ 26ರಂದು ದೆಹಲಿಗೆ ತೆರಳಿದ್ದರು ಎಂದು ತಿಳಿದು ಬಂದಿದೆ.

ಮತ್ತಷ್ಟು ಓದಿ: Mann Ki Baat​: ಮನದ ಮಾತಿಗೆ ಶತ ಸಂಭ್ರಮ, 100 ಕೋಟಿ ಜನರನ್ನು ತಲುಪಿದ ಮನ್ ಕೀ ಬಾತ್

ಮನ್​ ಕೀ ಬಾತ್​ನ 100ನೇ ಸಂಚಿಕೆಯ ಪ್ರಸಾರವನ್ನು ರಾಜ್ಯದ ಸಾಧಕರು ಪ್ರಧಾನಿ ಅವರ ಜತೆಗೇ ಇದ್ದು ಕೇಳಲಿದ್ದಾರೆ. 7 ಜನ ಅತಿಥಿಗಳನ್ನು ರಾಜಭವನಕ್ಕೆ ಆಹ್ವಾನಿಸಲಾಗಿದೆ. ಬೆಳಿಗ್ಗೆ ಸುಮಾರಿಗೆ ರಾಜಭವನದಲ್ಲಿ ಹಾಜರಿರುವಂತೆ ಅವರಿಗೆ ಆಹ್ವಾನ ಕಳುಹಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಬೆಂಗಳೂರಿನ ಸುರೇಶ್, ಗದಗದ ಕಾವೆಂಶ್ರೀ ಅವರು ಕಲಾ ಚೇತನ ದ ಮೂಲಕ ಮಾಡುವ ಕಲೆ ಮತ್ತು ಸಂಸ್ಕೃತಿ ಸೇವೆ, ಅಡಿಕೆ ನಾರಿನಿಂದ ತಯಾರಿಸಿದ ಅನೇಕ ವಿಶಿಷ್ಟ ಉತ್ಪನ್ನಗಳನ್ನು ಲಂಡನ್ ಮತ್ತು ಯುರೋಪ್‌ನಂತಹ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಕಳುಹಿಸುತ್ತಿರುವ ಶಿವಮೊಗ್ಗದ ಸುರೇಶ್ ಮತ್ತು ಅವರ ಪತ್ನಿ ಮೈಥಿಲಿ ಅವರ ಬಗ್ಗೆ ಮೋದಿ ಮನ್​ ಕೀ ಬಾತ್​ನ ವಿವಿಧ ಆವೃತ್ತಿಗಳಲ್ಲಿ ಉಲ್ಲೇಖಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು