AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat: ಮನ್​ ಕೀ ಬಾತ್​ 100ನೇ ಸಂಚಿಕೆ ವಿಶೇಷ, ಕಲಾವಿದ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಮರಳಲ್ಲಿ ಮೂಡಿಬಂದ ಮೋದಿ

ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪುರಿ ಕಡಲತೀರದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi)  ಅವರ ಮಾಸಿಕ ರೇಡಿಯೊ ಪ್ರಸಾರವಾದ ಮನ್ ಕೀ ಬಾತ್​ನ 100 ನೇ ಸಂಚಿಕೆಯ ಅಂಗವಾಗಿ ಹಲವಾರು ರೇಡಿಯೊಗಳೊಂದಿಗೆ ಮರಳು ಶಿಲ್ಪವನ್ನು ರಚಿಸಿದ್ದಾರೆ.

Mann Ki Baat: ಮನ್​ ಕೀ ಬಾತ್​ 100ನೇ ಸಂಚಿಕೆ ವಿಶೇಷ, ಕಲಾವಿದ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಮರಳಲ್ಲಿ ಮೂಡಿಬಂದ ಮೋದಿ
ಮರಳು ಕಲೆ
ನಯನಾ ರಾಜೀವ್
|

Updated on: Apr 30, 2023 | 10:45 AM

Share

ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪುರಿ ಕಡಲತೀರದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi)  ಅವರ ಮಾಸಿಕ ರೇಡಿಯೊ ಪ್ರಸಾರವಾದ ಮನ್ ಕೀ ಬಾತ್​ನ 100 ನೇ ಸಂಚಿಕೆಯ ಅಂಗವಾಗಿ ಹಲವಾರು ರೇಡಿಯೊಗಳೊಂದಿಗೆ ಮರಳು ಶಿಲ್ಪವನ್ನು ರಚಿಸಿದ್ದಾರೆ. ಪಟ್ನಾಯಕ್ ಸುಮಾರು 7 ಟನ್ ಮರಳನ್ನು ಬಳಸಿ 100 ರೇಡಿಯೋಗಳೊಂದಿಗೆ ಪ್ರಧಾನಿಯನ್ನು ಒಳಗೊಂಡ ಎಂಟು ಅಡಿ ಎತ್ತರದ ಮರಳು ಕಲೆಯನ್ನು ರಚಿಸಿದ್ದಾರೆ.

ಅವರ ಮರಳು ಕಲಾ ಶಾಲೆಯ ವಿದ್ಯಾರ್ಥಿಗಳು ಕಲಾಕೃತಿಯನ್ನು ಪೂರ್ಣಗೊಳಿಸಲು ಸಹಾಯ ಮಾಡಿದರು. ‘ಮನ್ ಕಿ ಬಾತ್’ ನ 100ನೇ ಸಂಚಿಕೆ ಇಂದು ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ.

ಮನ್​ ಕೀ ಬಾತ್​​ನ ರಾಜ್ಯದ ಸಾಧಕರ ಬಗ್ಗೆ ಪ್ರಧಾನಿ ಮೋದಿಯವರು ಪ್ರಸ್ತಾಪಿಸಿದ್ದು, ರಾಜ್ಯದ ಸಾಧಕರಿಗೆ ರಾಜಭವನಕ್ಕೆ ಬರುವಂತೆ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಮನ್​ ಕೀ ಬಾತ್​​ನ 100ನೇ ಸಂಚಿಕೆಯ ಧ್ವನಿಮುದ್ರಣ ಪ್ರಯುಕ್ತ ಕರ್ನಾಟಕದ 7 ಮಂದಿ ಸಾಧಕರನ್ನು ಪ್ರಸಾರ ಭಾರತಿ ಆಹ್ವಾನಿಸಿದ್ದು, ಇವರು ಏಪ್ರಿಲ್ 26ರಂದು ದೆಹಲಿಗೆ ತೆರಳಿದ್ದರು ಎಂದು ತಿಳಿದು ಬಂದಿದೆ.

ಮತ್ತಷ್ಟು ಓದಿ: Mann Ki Baat​: ಮನದ ಮಾತಿಗೆ ಶತ ಸಂಭ್ರಮ, 100 ಕೋಟಿ ಜನರನ್ನು ತಲುಪಿದ ಮನ್ ಕೀ ಬಾತ್

ಮನ್​ ಕೀ ಬಾತ್​ನ 100ನೇ ಸಂಚಿಕೆಯ ಪ್ರಸಾರವನ್ನು ರಾಜ್ಯದ ಸಾಧಕರು ಪ್ರಧಾನಿ ಅವರ ಜತೆಗೇ ಇದ್ದು ಕೇಳಲಿದ್ದಾರೆ. 7 ಜನ ಅತಿಥಿಗಳನ್ನು ರಾಜಭವನಕ್ಕೆ ಆಹ್ವಾನಿಸಲಾಗಿದೆ. ಬೆಳಿಗ್ಗೆ ಸುಮಾರಿಗೆ ರಾಜಭವನದಲ್ಲಿ ಹಾಜರಿರುವಂತೆ ಅವರಿಗೆ ಆಹ್ವಾನ ಕಳುಹಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಬೆಂಗಳೂರಿನ ಸುರೇಶ್, ಗದಗದ ಕಾವೆಂಶ್ರೀ ಅವರು ಕಲಾ ಚೇತನ ದ ಮೂಲಕ ಮಾಡುವ ಕಲೆ ಮತ್ತು ಸಂಸ್ಕೃತಿ ಸೇವೆ, ಅಡಿಕೆ ನಾರಿನಿಂದ ತಯಾರಿಸಿದ ಅನೇಕ ವಿಶಿಷ್ಟ ಉತ್ಪನ್ನಗಳನ್ನು ಲಂಡನ್ ಮತ್ತು ಯುರೋಪ್‌ನಂತಹ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಕಳುಹಿಸುತ್ತಿರುವ ಶಿವಮೊಗ್ಗದ ಸುರೇಶ್ ಮತ್ತು ಅವರ ಪತ್ನಿ ಮೈಥಿಲಿ ಅವರ ಬಗ್ಗೆ ಮೋದಿ ಮನ್​ ಕೀ ಬಾತ್​ನ ವಿವಿಧ ಆವೃತ್ತಿಗಳಲ್ಲಿ ಉಲ್ಲೇಖಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ