AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat: Bharat Ki Baat: ಮನ್ ಕಿ ಬಾತ್ ಕುರಿತಾದ ಸಾಕ್ಷ್ಯಚಿತ್ರ ಇಂದು ಪ್ರದರ್ಶನ; ಸಮಯ ಮತ್ತು ಲೈವ್ ಸ್ಟ್ರೀಮ್ ವಿವರ ಇಲ್ಲಿದೆ

ಮನ್ ಕಿ ಬಾತ್ 2023ರ ಏಪ್ರಿಲ್​ 30 ರಂದು 100ನೇ ಸಂಚಿಕೆ ಪೂರೈಸಿತು. ಈ ಹಿನ್ನೆಲೆ ಮನ್​​ ಕಿ ಬಾತ್​​ನ 100 ಮೈಲಿಗಲ್ಲು, ಮನ್​ ಕಿ ಬಾತ್​​​ ಹೇಗೆ ಆರಂಭವಾಯಿತು ಹಾಗೂ ಅದರ ಪ್ರಭಾವ ಕುರಿತು "ಮನ್ ಕಿ ಬಾತ್: ಭಾರತ್ ಕಿ ಬಾತ್", ಎಂಬ ವಿಶೇಷ ಸಾಕ್ಷ್ಯಚಿತ್ರ ತಯಾರಾಗಿದೆ.

Mann Ki Baat: Bharat Ki Baat: ಮನ್ ಕಿ ಬಾತ್ ಕುರಿತಾದ ಸಾಕ್ಷ್ಯಚಿತ್ರ ಇಂದು ಪ್ರದರ್ಶನ; ಸಮಯ ಮತ್ತು ಲೈವ್ ಸ್ಟ್ರೀಮ್ ವಿವರ ಇಲ್ಲಿದೆ
ಮನ್ ಕಿ ಬಾತ್: ಭಾರತ್ ಕಿ ಬಾತ್
ವಿವೇಕ ಬಿರಾದಾರ
|

Updated on: Jun 02, 2023 | 7:18 AM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಪ್ರತಿ ತಿಂಗಳ ಕೊನೆ ಭಾನುವಾರ ಮನ್​ ಕೀ ಬಾತ್​​ (Mann Ki Baat) ರೇಡಿಯೋ ಕಾರ್ಯಕ್ರಮವನ್ನು (Mann Ki Baat Radio Program) ನಡೆಸಿಕೊಡುತ್ತಾರೆ. ಈ ಕಾರ್ಯಕ್ರಮದಲ್ಲಿ ದೇಶದ ಅನೇಕ ವಿಷಯಗಳ ಕುರಿತು ಮಾತನಾಡುತ್ತಾರೆ ಮತ್ತು ಚರ್ಚಿಸುತ್ತಾರೆ. ಈ ಕಾರ್ಯಕ್ರಮ ಯಶಸ್ವಿಯಾಗಿದ್ದು, 2023ರ ಏಪ್ರಿಲ್​ 30 ರಂದು 100ನೇ ಸಂಚಿಕೆ ಪೂರೈಸಿತು. ಈ ಹಿನ್ನೆಲೆ ಮನ್​​ ಕಿ ಬಾತ್​​ನ 100 ಮೈಲಿಗಲ್ಲು, ಮನ್​ ಕಿ ಬಾತ್​​​ ಹೇಗೆ ಆರಂಭವಾಯಿತು ಹಾಗೂ ಅದರ ಪ್ರಭಾವ ಕುರಿತು “ಮನ್ ಕಿ ಬಾತ್: ಭಾರತ್ ಕಿ ಬಾತ್”, (Mann Ki Baat: Bharat Ki Baat) ಎಂಬ ವಿಶೇಷ ಸಾಕ್ಷ್ಯಚಿತ್ರ (Documentary) ತಯಾರಾಗಿದ್ದು ಶುಕ್ರವಾರ (ಜೂನ್ 2) ರಾತ್ರಿ 8 ಗಂಟೆಗೆ HistoryTV18 ನಲ್ಲಿ ಪ್ರಥಮ ಪ್ರದರ್ಶನಗೊಳ್ಳಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಾಸಿಕ ರೇಡಿಯೋ ಕಾರ್ಯಕ್ರಮವಾದ ‘ಮನ್ ಕಿ ಬಾತ್’ ಅನ್ನು ಅಕ್ಟೋಬರ್ 3, 2014 ರಂದು ಪ್ರಾರಂಭಿಸಿದರು. ಈ ಮೂಲಕ ಅವರು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳು ಮತ್ತು ವಿಷಯಗಳ ಕುರಿತು ಭಾರತದ ನಾಗರಿಕರೊಂದಿಗೆ ಸಂವಾದ ನಡೆಸಿದರು.

ಇನ್ನು ಸಾಕ್ಷ್ಯಚಿತ್ರದಲ್ಲಿ 2014 ರಲ್ಲಿ ಪ್ರಧಾನಿ ಮೋದಿಯವರ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮವು ಹೇಗೆ ಹುಟ್ಟಿಕೊಂಡಿತು ಮತ್ತು ಈ ನಿಜವಾದ ಮತ್ತು ಸರಳವಾದ ಕಲ್ಪನೆಯು ಸಂವಾದದ ಮೂಲಕ ದೇಶದ ಮೂಲೆ ಮೂಲೆಗಳನ್ನು ಏಕೆ ಸಂಪರ್ಕಿಸಲು ಸಾಧ್ಯವಾಯಿತು ಎಂಬ ಕಥೆಯನ್ನು ಚಿತ್ರವು ತೆರೆದಿಡಲಿದೆ.

ಇದನ್ನೂ ಓದಿ: ವಿದೇಶಿ ಮಣ್ಣಲ್ಲಿ ನಿಂತು ದೇಶಕ್ಕೆ ಕಪ್ಪು ಮಸಿ ಬಳಿಯುವ ರಾಹುಲ್ ಒಬ್ಬ ಫೇಕ್ ಗಾಂಧಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ರಾಜಕೀಯವಲ್ಲದ ಈ ಮಾಸಿಕ ರೇಡಿಯೋ ಕಾರ್ಯಕ್ರಮವೂ ದೇಶದ ಪ್ರಮುಖ ಸಂಸ್ಥೆಗಳು, ಪಡೆಗಳು, ಜನರು, ಗ್ರಾಮದ ಹಿರಿಯರು, ಸಮಾಜದ ಗಣ್ಯರು ಸೇರಿದಂತೆ ಪ್ರತಿಯೊಬ್ಬ ಸಾಮಾನ್ಯ ನಾಗರಿಕ ಹಾಗೂ ಪ್ರಧಾನಿ ಮಧ್ವೆ ದ್ವಿಮುಖ ಸಂವಾದಕ್ಕೆ ವೇದಿಕೆ ಒದಗಿಸಿತ್ತು, ಜೊತೆಗೆ ಜನತಾ ಜನಾರ್ಧನ ಎನಿಸಿದ ಸಾಮಾನ್ಯ ನಾಗರಿಕರ ಕಾಳಜಿಗೆ ಧ್ವನಿ ನೀಡಿತ್ತು. ತಮ್ಮ ಹಳ್ಳಿಗಳು ನಗರಗಳು, ಜಿಲ್ಲೆಗಳು ಮತ್ತು ನೆರೆಹೊರೆಗಳನ್ನು ಉತ್ತಮ, ಸ್ವಚ್ಛ ಮತ್ತು ಸುರಕ್ಷಿತಗೊಳಿಸಲು ಶ್ರಮಿಸುವ ಔಟ್-ಆಫ್-ದಿ-ಬಾಕ್ಸ್- ಚಿಂತಕರ ಪ್ರಯತ್ನಗಳನ್ನು ಸಹ ಈ ಕಾರ್ಯಕ್ರಮದ ಮೂಲಕ ಪ್ರಧಾನಿ ಗಮನ ಸೆಳೆದಿದ್ದರು.

View this post on Instagram

A post shared by HISTORY TV18 (@historytv18)

‘ಮನ್ ಕಿ ಬಾತ್’ ಮಹಿಳಾ ಸಬಲೀಕರಣ ಮತ್ತು ಎಲ್ಲರಿಗೂ ಶಿಕ್ಷಣದಿಂದ ಹಿಡಿದು ಸುಸ್ಥಿರ ಕೃಷಿ ಪದ್ಧತಿಗಳು ಮತ್ತು ಪರಿಸರ ಸಂರಕ್ಷಣೆಯವರೆಗಿನ ಹಲವಾರು ಸಮಸ್ಯೆಗಳನ್ನು ಪರಿಹರಿಸಿದೆ. ಮನ್ ಕಿ ಬಾತ್ ದೇಶೀಯ ಪ್ರವಾಸೋದ್ಯಮದಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ. ಯೋಗದ ಜನಪ್ರಿಯತೆ ಮತ್ತು ಆರೋಗ್ಯಕರ ಜೀವನಕ್ಕೆ ಇದು ಗಣನೀಯ ಕೊಡುಗೆ ನೀಡಿದೆ.

ಕೊರೊನಾ ಸಾಂಕ್ರಾಮಿಕ ಅತ್ಯಂತ ತೀವ್ರವಾಗಿದ್ದ ಸಮಯದಲ್ಲಿ ಭಯವನ್ನು ಕಡಿಮೆ ಮಾಡಲು ಮತ್ತು ಅಧಿಕೃತ ನಿಜವಾದ ಮಾಹಿತಿಯನ್ನು ಪ್ರಸಾರ ಮಾಡಲು ಮನ್ ಕಿ ಬಾತ್’ ಸಹಕರಿಸಿತ್ತು. ಈ ರೀತಿಯಾಗಿ ಸಮಗ್ರ ಮಾಹಿತಿ ಒಳಗೊಂಡ ‘ಮನ್ ಕಿ ಬಾತ್’ ಪುಭಾವದ ಕುರಿತಾಗಿ ಸಾಕ್ಷ್ಯಚಿತ್ರದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ