AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat: ಛತ್ ಪೂಜೆಯನ್ನು ಯುನೆಸ್ಕೋ ಪಟ್ಟಿಯಲ್ಲಿ ಸೇರಿಸಲು ಸರ್ಕಾರ ಶ್ರಮ; ಮನ್ ಕಿ ಬಾತ್​​ನಲ್ಲಿ ಪ್ರಧಾನಿ ಮೋದಿ

ಪ್ರತಿ ತಿಂಗಳ ಕೊನೆಯ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮ ನಡೆಸುತ್ತಾರೆ. ಇಂದಿನ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತದ ಜನರೊಂದಿಗೆ ಹಲವು ಸ್ಪೂರ್ತಿದಾಯಕ ವಿಚಾರಗಳು ಮತ್ತು ಸಂದೇಶಗಳನ್ನು ಹಂಚಿಕೊಂಡಿದ್ದಾರೆ. ಇಂದಿನ ಅವರ ಮನ್ ಕಿ ಬಾತ್​ನ ಹೈಲೈಟ್ಸ್ ಇಲ್ಲಿವೆ.

Mann Ki Baat: ಛತ್ ಪೂಜೆಯನ್ನು ಯುನೆಸ್ಕೋ ಪಟ್ಟಿಯಲ್ಲಿ ಸೇರಿಸಲು ಸರ್ಕಾರ ಶ್ರಮ; ಮನ್ ಕಿ ಬಾತ್​​ನಲ್ಲಿ ಪ್ರಧಾನಿ ಮೋದಿ
Pm Modi
ಸುಷ್ಮಾ ಚಕ್ರೆ
|

Updated on:Sep 28, 2025 | 12:19 PM

Share

ನವದೆಹಲಿ, ಸೆಪ್ಟೆಂಬರ್ 28: ಇಂದು ಮಾಸಿಕ ರೇಡಿಯೋ ಕಾರ್ಯಕ್ರಮವಾದ ಮನ್ ಕಿ ಬಾತ್​​ನಲ್ಲಿ (Mann Ki Baat) ಮಾತನಾಡಿದ ಪ್ರಧಾನಿ ಮೋದಿ (PM Narendra Modi), ಛತ್ ಪೂಜೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಯಲ್ಲಿ ಸೇರಿಸಲು ಭಾರತ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಛತ್ ಪೂಜೆ ಸೂರ್ಯ ದೇವರಿಗೆ ಸಮರ್ಪಿತವಾಗಿದೆ, ಈ ವೇಳೆ ಭಕ್ತರು ಸೂರ್ಯನಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ ಎಂದು ಅವರು ವಿವರಿಸಿದರು. ಮೂಲತಃ ಸ್ಥಳೀಯ ಸಂಪ್ರದಾಯವಾಗಿದ್ದ ಈ ಹಬ್ಬವು ಈಗ ಜಾಗತಿಕವಾಗಿ ಮನ್ನಣೆಯನ್ನು ಪಡೆಯುತ್ತಿದೆ ಎಂದರು.

“ಛತ್ ಪೂಜೆಗೆ ಸಂಬಂಧಿಸಿದ ಪ್ರಮುಖ ಪ್ರಯತ್ನದಲ್ಲಿ ಭಾರತ ಸರ್ಕಾರವೂ ತೊಡಗಿಸಿಕೊಂಡಿದೆ ಎಂದು ನಿಮಗೆ ತಿಳಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ಛತ್ ಮಹಾಪರ್ವವನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಯಲ್ಲಿ ಸೇರಿಸಲು ಭಾರತ ಸರ್ಕಾರ ಶ್ರಮಿಸುತ್ತಿದೆ. ಛತ್ ಪೂಜೆಯನ್ನು ಯುನೆಸ್ಕೋ ಪಟ್ಟಿಯಲ್ಲಿ ಸೇರಿಸಿದಾಗ, ಪ್ರಪಂಚದ ಪ್ರತಿಯೊಂದು ಮೂಲೆಯಲ್ಲಿರುವ ಜನರು ಅದರ ಭವ್ಯತೆ ಮತ್ತು ದೈವತ್ವವನ್ನು ಅನುಭವಿಸಲು ಸಾಧ್ಯವಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ 1.22 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

“ನಮ್ಮ ಹಬ್ಬಗಳು ಭಾರತದ ಸಂಸ್ಕೃತಿಯನ್ನು ಜೀವಂತವಾಗಿರಿಸುತ್ತವೆ. ಛತ್ ಪೂಜೆ ದೀಪಾವಳಿಯ ನಂತರ ಬರುವ ಪವಿತ್ರ ಹಬ್ಬ. ಸೂರ್ಯ ದೇವರಿಗೆ ಅರ್ಪಿತವಾದ ಈ ಭವ್ಯ ಹಬ್ಬವು ಬಹಳ ವಿಶೇಷವಾಗಿದೆ. ಇದರಲ್ಲಿ, ನಾವು ಮುಳುಗುವ ಸೂರ್ಯನಿಗೆ ಪ್ರಾರ್ಥನೆ ಸಲ್ಲಿಸುತ್ತೇವೆ ಮತ್ತು ಅದನ್ನು ಪೂಜಿಸುತ್ತೇವೆ. ಛತ್ ಪೂಜೆಯನ್ನು ದೇಶದ ವಿವಿಧ ಭಾಗಗಳಲ್ಲಿ ಆಚರಿಸುವುದಲ್ಲದೆ, ಅದರ ವೈಭವವನ್ನು ಪ್ರಪಂಚದಾದ್ಯಂತ ಕಾಣಬಹುದು. ಇಂದು, ಇದು ಜಾಗತಿಕ ಹಬ್ಬವಾಗುತ್ತಿದೆ” ಎಂದು ಮೋದಿ ಹೇಳಿದರು.

ಇದನ್ನೂ ಓದಿ: ತಮಿಳುನಾಡಿನ ಕಾಲ್ತುಳಿತ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ; ಕರೂರಿಗೆ ನಾಳೆ ಸಿಎಂ ಸ್ಟಾಲಿನ್ ಭೇಟಿ

“ಕೆಲವು ಸಮಯದ ಹಿಂದೆ ಭಾರತ ಸರ್ಕಾರದ ಇದೇ ರೀತಿಯ ಪ್ರಯತ್ನಗಳಿಂದಾಗಿ ಕೊಲ್ಕತ್ತಾದ ದುರ್ಗಾ ಪೂಜೆಯೂ ಈ ಯುನೆಸ್ಕೋ ಪಟ್ಟಿಯಲ್ಲಿ ಸೇರಿದೆ. ನಮ್ಮ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಂತಹ ಜಾಗತಿಕ ಮನ್ನಣೆಯನ್ನು ನೀಡಿದರೆ, ಜಗತ್ತು ಅವುಗಳ ಬಗ್ಗೆ ತಿಳಿಯಲು ಸಾಧ್ಯವಾಗುತ್ತದೆ” ಎಂದು ಮೋದಿ ಅಭಿಪ್ರಾಯಪಟ್ಟರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:14 pm, Sun, 28 September 25

Follow Us
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಬಿಗ್ ಬಾಸ್: ಗಗನ್ ಚಿನ್ನಪ್ಪ ವಿರುದ್ಧ ತಿರುಗಿಬಿದ್ದ ಕಾಮನರ್ ಸ್ಪರ್ಧಿಗಳು
ಬಿಗ್ ಬಾಸ್: ಗಗನ್ ಚಿನ್ನಪ್ಪ ವಿರುದ್ಧ ತಿರುಗಿಬಿದ್ದ ಕಾಮನರ್ ಸ್ಪರ್ಧಿಗಳು