AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್ ಕಿ ಬಾತ್; ಮನಬಂದಂತೆ ಆ್ಯಂಟಿಬಯೋಟಿಕ್ ಸೇವಿಸುವವರಿಗೆ ಪ್ರಧಾನಿ ಮೋದಿ ಎಚ್ಚರಿಕೆ

Mann Ki Baat: ಅನೇಕ ಜನರು ತಮಗೇನಾದರೂ ಆರೋಗ್ಯ ಹದಗೆಟ್ಟರೆ ತಾವೇ ಮೆಡಿಕಲ್ ಶಾಪ್​ಗೆ ಹೋಗಿ ಮಾತ್ರೆ ಸೇವಿಸುವ ಅಭ್ಯಾಸ ರೂಢಿಸಿಕೊಂಡಿರುತ್ತಾರೆ. ಇದಕ್ಕೆಲ್ಲ ವೈದ್ಯರ ಬಳಿ ಯಾಕೆ ಹೋಗಬೇಕು ಎಂಬ ಉಡಾಫೆ ಅವರದು. ಆದರೆ, ಇಂತಹ ಉಡಾಫೆ ಮಾಡುವವರಿಗೆ ಇಂದಿನ ಮನ್ ಕಿ ಬಾತ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಿವಿಮಾತೊಂದನ್ನು ನೀಡಿದ್ದಾರೆ. ಇದರ ಜೊತೆಗೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ಮನ್ ಕಿ ಬಾತ್; ಮನಬಂದಂತೆ ಆ್ಯಂಟಿಬಯೋಟಿಕ್ ಸೇವಿಸುವವರಿಗೆ ಪ್ರಧಾನಿ ಮೋದಿ ಎಚ್ಚರಿಕೆ
Pm Modi
ಸುಷ್ಮಾ ಚಕ್ರೆ
|

Updated on:Dec 28, 2025 | 6:02 PM

Share

ನವದೆಹಲಿ, ಡಿಸೆಂಬರ್ 28: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಈ ವರ್ಷದ ಕೊನೆಯ ಮನ್ ಕಿ ಬಾತ್​​ನಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಉಗ್ರರ ದಾಳಿಯಿಂದ ಹಿಡಿದು ಆರೋಗ್ಯ ಸಮಸ್ಯೆಯವರೆಗೆ ಹಲವು ವಿಷಯಗಳವರೆಗೆ ಅವರು ಬೆಳಕು ಚೆಲ್ಲಿದ್ದಾರೆ. ಆದರೆ, ದೆಹಲಿ ಸೇರಿದಂತೆ ದೆಹಲಿಯ ಹಲವು ನಗರಗಳಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಅವರು ಯಾವುದೇ ಪ್ರಸ್ತಾಪವನ್ನೂ ಮಾಡಿಲ್ಲ. ತಮ್ಮ ಮನ್ ಕಿ ಬಾತ್​​ನಲ್ಲಿ ಪ್ರಧಾನಿ ಮೋದಿ ಪ್ರತಿಯೊಬ್ಬ ಭಾರತೀಯರು ಗಂಭೀರವಾಗಿ ಪರಿಗಣಿಸಬೇಕಾದ ಆರೋಗ್ಯ ಎಚ್ಚರಿಕೆಯನ್ನು ಹಂಚಿಕೊಂಡಿದ್ದಾರೆ.

ಭಾರತದ ಯುವ ಜನರು ದೇಶದ ಅತಿದೊಡ್ಡ ಭರವಸೆಯ ಮೂಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜನವರಿ 12ರಂದು ರಾಷ್ಟ್ರೀಯ ಯುವ ದಿನ ಹಾಗೂ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯಂದು ವಿಕಸಿತ ಭಾರತ ಯುವ ನಾಯಕರ ಸಂವಾದದ ಎರಡನೇ ಆವೃತ್ತಿ ನಡೆಯಲಿದೆ ಎಂದು ಅವರು ಘೋಷಿಸಿದ್ದಾರೆ.

ಇದನ್ನೂ ಓದಿ: ಮನ್‌ ಕಿ ಬಾತ್‌ನಲ್ಲಿ ಕನ್ನಡ ಡಿಂಡಿಮ: ದುಬೈನಲ್ಲಿ ಕನ್ನಡಾಭಿಮಾನಕ್ಕೆ ಮೋದಿ ಶ್ಲಾಘನೆ

ಈ ವೇಳೆ ಆರೋಗ್ಯದ ಬಗ್ಗೆ ಗಮನಹರಿಸಿದ ಪ್ರಧಾನಿ ಮೋದಿ, “ನ್ಯುಮೋನಿಯಾ ಮತ್ತು ಮೂತ್ರನಾಳದ ಸೋಂಕುಗಳು (ಯುಟಿಐ) ನಂತಹ ರೋಗಗಳ ವಿರುದ್ಧ ಪ್ರತಿಜೀವಕಗಳು (ಆ್ಯಂಟಿಬಯೋಟಿಕ್) ಕಡಿಮೆ ಪರಿಣಾಮಕಾರಿಯಾಗುತ್ತಿವೆ ಎಂದು ಎಚ್ಚರಿಸುವ ಇತ್ತೀಚಿನ ಐಸಿಎಂಆರ್ ವರದಿಯನ್ನು ಪ್ರಧಾನಿ ಬಹಿರಂಗಪಡಿಸಿದ್ದಾರೆ. ವೈದ್ಯರ ಸಲಹೆಯಿಲ್ಲದೆ ಆ್ಯಂಟಿಬಯೋಟಿಕ್​ಗಳನ್ನು ಬಳಸದಂತೆ ಅವರು ಜನರ ಬಳಿ ಮನವಿ ಮಾಡಿದ್ದಾರೆ. ಇವುಗಳ ಅತಿಯಾದ ಬಳಕೆ ಅಥವಾ ಯಾವುದೇ ವೈದ್ಯಕೀಯ ಸಲಹೆಯಿಲ್ಲದ ಬಳಕೆಯು ಅವುಗಳ ಪರಿಣಾಮಕಾರಿತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ಹೇಳಿದ್ದಾರೆ. ಆ್ಯಂಟಿಬಯೋಟಿಕ್ ಔಷಧಿಯನ್ನು ತೆಗೆದುಕೊಳ್ಳುವ ಮುನ್ನ ವೈದ್ಯರ ಸಲಹೆ ಪಡೆಯಲೇಬೇಕು” ಎಂದು ಅವರು ಎಚ್ಚರಿಸಿದ್ದಾರೆ.

ನ್ಯುಮೋನಿಯಾ ಮತ್ತು ಮೂತ್ರನಾಳದ ಸೋಂಕುಗಳು (ಯುಟಿಐ) ನಂತಹ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸಾಮಾನ್ಯವಾಗಿ ಬಳಸುವ ಆ್ಯಂಟಿಬಯೋಟಿಕ್​​ಗಳು ಹೆಚ್ಚು ನಿಷ್ಪರಿಣಾಮಕಾರಿಯಾಗುತ್ತಿವೆ ಎಂದು ಐಸಿಎಂಆರ್ ವರದಿಯು ಕಂಡುಹಿಡಿದಿದೆ. ಇದು ತುಂಬಾ ಆತಂಕಕಾರಿ ಸಂಗತಿ. ವೈದ್ಯಕೀಯ ಸಲಹೆಯಿಲ್ಲದೆ ಜನರು ಆ್ಯಂಟಿಬಯೋಟಿಕ್​ಗಳನ್ನು ಸೇವಿಸುವ ಅಭ್ಯಾಸವು ಬೆಳೆಯುತ್ತಿರುವುದು ಆತಂಕಕಾರಿ ಸಂಗತಿ. ಪ್ರತಿಜೀವಕಗಳು ಹಾಗೆ ಯಾರು ಬೇಕಾದರೂ ಹೇಗೆ ಬೇಕಾದರೂ ತೆಗೆದುಕೊಳ್ಳಬಹುದಾದ ಔಷಧಿಗಳಲ್ಲ. ಅವುಗಳನ್ನು ವೈದ್ಯರ ಸಲಹೆಯ ನಂತರ ಮಾತ್ರ ಬಳಸಬೇಕು” ಎಂದು ಮೋದಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Mann Ki Baat: ಬೆಂಗಳೂರಿನ ಐಐಎಸ್​ಸಿಯನ್ನು ಹಾಡಿಹೊಗಳಿದ ಪ್ರಧಾನಿ ಮೋದಿ

“ಇದು 2025ರ ಮನ್ ಕಿ ಬಾತ್​​ನ ಕೊನೆಯ ಕಂತು. 2026ರಲ್ಲಿ ನಾವು ಮತ್ತೆ ಭೇಟಿಯಾಗುತ್ತೇವೆ. ಹೊಸ ಕಂತುಗಳು, ಹೊಸ ಸಮಸ್ಯೆಗಳೊಂದಿಗೆ ನಾವು ಅದೇ ಉತ್ಸಾಹ, ಶಕ್ತಿ ಮತ್ತು ಒಗ್ಗಟ್ಟಿನ ಭಾವನೆಯೊಂದಿಗೆ ಹಿಂತಿರುಗುತ್ತೇವೆ” ಎಂದು ಪ್ರಧಾನಿ ಮೋದಿ ಮನ್ ಕಿ ಬಾತ್​​ನ ಕೊನೆಯಲ್ಲಿ ಹೇಳಿದ್ದಾರೆ. ಚಳಿಗಾಲದಲ್ಲಿ ಜನರು ಹೆಚ್ಚು ಆರೋಗ್ಯದ ಬಗ್ಗೆ ಗಮನ ಹರಿಸಲು ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:59 pm, Sun, 28 December 25

ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ