AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat: ಸಮಗ್ರ, ಸಾಮೂಹಿಕ ಒಳಿತು ನಮ್ಮೆದುರು ಇದೆ: 92ನೇ ಮನ್​ ಕಿ ಬಾತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣದ 10 ಮುಖ್ಯಾಂಶಗಳಿವು

PM Narendra Modi: ಡಿಜಿಟಲ್ ಇಂಡಿಯಾ ಉಪಕ್ರಮ ಮತ್ತು ಕಿರುಧಾನ್ಯಗಳ ಉತ್ಪಾದನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್​ ಕಿ ಬಾತ್ ಭಾಷಣದಲ್ಲಿ ಮಾತನಾಡಿದರು.

Mann Ki Baat: ಸಮಗ್ರ, ಸಾಮೂಹಿಕ ಒಳಿತು ನಮ್ಮೆದುರು ಇದೆ: 92ನೇ ಮನ್​ ಕಿ ಬಾತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣದ 10 ಮುಖ್ಯಾಂಶಗಳಿವು
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Aug 28, 2022 | 12:59 PM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಭಾನುವಾರ ‘ಮನ್​ ಕಿ ಬಾತ್’ (Mann Ki Baat) 92ನೇ ಆವೃತ್ತಿಯ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯ ದಿನಾಚರಣೆ ಮತ್ತು ಸ್ವಾತಂತ್ರ್ಯದ ಅಮೃತ ಮಹೋತ್ಸವದಂದು ಭಾರತದ ಸಮಗ್ರ ಪ್ರಗತಿಗೆ ಮತ್ತು ಭಾರತೀಯರ ಒಗ್ಗಟ್ಟಿನ ಸ್ಪಂದನೆಗೆ ನಾವೆಲ್ಲರೂ ಸಾಕ್ಷಿಯಾಗಿದೆವು ಎಂದರು. ಡಿಜಿಟಲ್ ಇಂಡಿಯಾ ಉಪಕ್ರಮ ಮತ್ತು ಕಿರುಧಾನ್ಯಗಳ ಉತ್ಪಾದನೆ ಬಗ್ಗೆ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್​ನಲ್ಲಿ ಪ್ರಸ್ತಾಪಿಸಿದ ಮುಖ್ಯ ವಿಚಾರಗಳಿವು…

  1. ಇತ್ತೀಚೆಗಷ್ಟೇ ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿತು. ಕರ್ನಾಟಕದ ಕೋಲಾರದಲ್ಲಿ ಬೃಹತ್ ತ್ರಿವರ್ಣ ಧ್ವಜ ಅನಾವರಣಗೊಳಿಸಿದ್ದೂ ಸೇರಿದಂತೆ ದೇಶಾದ್ಯಂತ ಹಲವು ರೀತಿಯಲ್ಲಿ ಸಂಭ್ರಮಾಚರಣೆ ನಡೆಯಿತು ಎಂದು ಮೋದಿ ನೆನಪಿಸಿಕೊಂಡರು.
  2. ಭಾರತದಲ್ಲಿ ಅಮೃತ ಸರೋವರ ನಿರ್ಮಾಣವು ಒಂದು ಸಾಮಾಜಿಕ ಚಳವಳಿಯಾಗಿ ನಡೆಯುತ್ತಿದೆ. ಮಳೆಗಾಲದಲ್ಲಿ ಬೇಕಾಬಿಟ್ಟಿಯಾಗಿ ಓಡುತ್ತಿದ್ದ ಮಳೆನೀರನ್ನು ಒಂದೆಡೆ ಸಂಗ್ರಹಿಸಿ, ಇಂಗಿಸುವ ಪ್ರಯತ್ನವನ್ನು ಈ ಸರೋವರಗಳು ಮಾಡುತ್ತವೆ ಎಂದರು.
  3. ವಿಶ್ವಸಂಸ್ಥೆಯು 2023ನೇ ಇಸವಿಯನ್ನು ‘ಕಿರುಧಾನ್ಯಗಳ ವರ್ಷ’ ಎಂದು ಘೋಷಿಸಿದೆ. ಭಾರತವು ಮುಂದಿಟ್ಟು ಈ ಪ್ರಸ್ತಾವಕ್ಕೆ ವಿಶ್ವದ ಇತರ 70 ದೇಶಗಳ ಬೆಂಬಲ ದೊರಕಿತು ಎಂಬುದು ಸಂತಸದ ವಿಚಾರ ಎಂದು ಮೋದಿ ಹೇಳಿದರು.
  4. ಕಿರುಧಾನ್ಯಗಳನ್ನು ಜಗತ್ತು ಇಂದು ಸೂಪರ್​ಫುಡ್ ಎಂದು ಗುರುತಿಸಿದೆ. ಕಿರುಧಾನ್ಯಗಳಿಗೆ ಉತ್ತೇಜನ ನೀಡಲು ಹಲವು ಪ್ರಯತ್ನಗಳು ನಡೆಯುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಸಂಶೋಧನೆ ಮತ್ತು ಆವಿಷ್ಕಾರದ ಪ್ರಯತ್ನಗಳೂ ಚುರುಕಾಗಿವೆ. ಆಹಾರ ಸಂಸ್ಕರಣೆ ಉದ್ಯಮಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಉತ್ಪಾದನೆಯೂ ಹೆಚ್ಚಾಗುತ್ತಿದೆ ಎಂದರು.
  5. ಭಾರತವು ಕಿರುಧಾನ್ಯ ಉತ್ಪಾದನೆಯಲ್ಲಿ ವಿಶ್ವದ ಅತಿದೊಡ್ಡ ಕಿರುಧಾನ್ಯ ಉತ್ಪಾದಕ ದೇಶವಾಗಿದೆ. ವಿಶ್ವಸಂಸ್ಥೆಯ ಘೋಷಣೆಯನ್ನು ಯಶಸ್ವಿಗೊಳಿಸುವ ಜವಾಬ್ದಾರಿಯೂ ಭಾರತದ ಮೇಲೆಯೇ ಇದೆ. ನಾವೆಲ್ಲರೂ ಸೇರಿ ಇದನ್ನು ಸಾಮೂಹಿಕ ಚಳವಳಿಯನ್ನಾಗಿ ರೂಪಿಸಬೇಕಿದೆ. ಜನರಲ್ಲಿ ಕಿರುಧಾನ್ಯಗಳ ಬಗ್ಗೆ ಜಾಗೃತಿ ಮೂಡಿಸಬೇಕಿದೆ ಎಂದು ಅವರು ಹೇಳಿದರು.
  6. ಭಾರತದಲ್ಲಿ ಈಗ ಡಿಜಿಟಲ್ ಉದ್ಯಮಿಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದಾರೆ. ಕೇಂದ್ರ ಸರ್ಕಾರ ಆರಂಭಿಸಿದ ಡಿಜಿಟಲ್ ಇಂಡಿಯಾ ಉಪಕ್ರಮದಿಂದ ಸಾಕಷ್ಟು ಜನರಿಗೆ ಅನುಕೂಲವಾಗಿದೆ.
  7. ದೇಶದ ಅಪೌಷ್ಟಿಕತೆ ಸಮಸ್ಯೆ ನಿವಾರಿಸಲು ಜಲ್​ಜೀವನ್ ಮಿಷನ್ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಅಪೌಷ್ಟಿಕತೆಯ ಶಾಪ ಪರಿಹರಿಸಲು ನೀವೆಲ್ಲರೂ ಕೈಜೋಡಿಸಬೇಕೆಂದು ಕರೆ ನೀಡುತ್ತೇನೆ.
  8. ಅಸ್ಸಾಂನ ಬೊಂಗಾಯಿ ಗ್ರಾಮದಲ್ಲಿ ಪ್ರಾಜೆಕ್ಟ್ ಸಂಪೂರ್ಣ ಹೆಸರಿನ ವಿಶಿಷ್ಟ ಯೋಜನೆಯೊಂದು ಅನುಷ್ಠಾನಗೊಳ್ಳುತ್ತಿದೆ. ಅಪೌಷ್ಟಿಕತೆಯ ಸವಾಲನ್ನು ಈ ಯೋಜನೆಯು ವಿಶಿಷ್ಟ ರೀತಿಯಲ್ಲಿ ಮುಖಾಮುಖಿಯಾಗುತ್ತದೆ.
  9. ದೂರದರ್ಶನದಲ್ಲಿ ‘ಸ್ವರಾಜ್’ ಹೆಸರಿನ ಧಾರಾವಾಹಿಯ 75 ಕಂತುಗಳು ಬಿತ್ತರಗೊಳ್ಳಲಿದೆ. ಪ್ರಸಿದ್ಧರಾದವರು, ಎಲೆಮರೆ ಕಾಯಾಗಿ ಉಳಿದವರು ಸೇರಿದಂತೆ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಹಲವು ನಾಯಕರನ್ನು ಈ ಧಾರಾವಾಹಿಯು ಪರಿಚಯಿಸಲಿದೆ. ನೀವೆಲ್ಲರೂ ಈ ಧಾರವಾಹಿ ನೋಡಿ, ನಿಮ್ಮ ಮಕ್ಕಳಿಗೂ ತೋರಿಸಿ.
  10. ಭಾರತದಲ್ಲಿ ಬಡವರಿಗೆ ಸಹಾಯ ಮಾಡುವಲ್ಲಿ ‘ಜನ್​ ಧನ್’ ಯೋಜನೆಯ ಪಾತ್ರ ಮಹತ್ವದ್ದು. ಜನ್​ ಧನ್ ಯೋಜನೆಯಡಿ ಕಳೆದ 8 ವರ್ಷಗಳಲ್ಲಿ 46.30 ಕೋಟಿ ಅಕೌಂಟ್​ಗಳನ್ನು ತೆರೆಯಲಾಗಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ