Modi Mann Ki Baat: ಹಳ್ಳಿಗಳಲ್ಲಿರುವ ಪ್ರತಿಯೊಂದು ಮಹಿಳೆಯನ್ನೂ ಲಕ್ಷಾಧಿಪತಿಯನ್ನಾಗಿ ಮಾಡುವುದು ನಮ್ಮ ಧ್ಯೇಯ: ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು 110ನೇ ಮನ್​ ಕಿ ಬಾತ್​ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದಾರೆ. ಅದರಲ್ಲಿ ನಾರಿ ಶಕ್ತಿ, ಡ್ರೋನ್ ದೀಧಿ, ವನ್ಯಜೀವಿಗಳು ಸೇರಿದಂತೆ ಹಲವು ವಿಷಯಗಳ ಉಲ್ಲೇಖ ಮಾಡಿದ್ದಾರೆ.

Modi Mann Ki Baat: ಹಳ್ಳಿಗಳಲ್ಲಿರುವ ಪ್ರತಿಯೊಂದು ಮಹಿಳೆಯನ್ನೂ ಲಕ್ಷಾಧಿಪತಿಯನ್ನಾಗಿ ಮಾಡುವುದು ನಮ್ಮ ಧ್ಯೇಯ: ಮೋದಿ
ನರೇಂದ್ರ ಮೋದಿ

Updated on: Feb 25, 2024 | 12:03 PM

ಹಳ್ಳಿಗಳಲ್ಲಿರುವ ಪ್ರತಿಯೊಂದು ಮಹಿಳೆಯನ್ನೂ ಲಕ್ಷಾಧಿಪತಿಯನ್ನಾಗಿ ಮಾಡುವುದು ನಮ್ಮ ಧ್ಯೇಯ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದರು. 110ನೇ ಮನ್​ ಕಿ ಬಾತ್​ನಲ್ಲಿ ಮಾತನಾಡಿದ ಮೋದಿ, ದೇಶದಲ್ಲಿ ಮಹಿಳೆಯರು ಹಿಂದುಳಿದ ಕ್ಷೇತ್ರಗಳೇ ಇಲ್ಲ, ಮಹಿಳೆಯರು ತಮ್ಮ ನಾಯಕತ್ವದ ಸಾಮರ್ಥ್ಯವನ್ನು ಪ್ರದರ್ಶಿಸಿದ ಮತ್ತೊಂದು ಕ್ಷೇತ್ರವೆಂದರೆ ನೈಸರ್ಗಿಕ ಕೃಷಿ, ನೀರಿನ ಸಂರಕ್ಷಣೆ ಮತ್ತು ನೈರ್ಮಲ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಸಾಯನಿಕಗಳಿಂದಾಗಿ ನಮ್ಮ ಭೂಮಿ ತಾಯಿ ಎದುರಿಸುತ್ತಿರುವ ತೊಂದರೆ, ನೋವು ಮತ್ತು ಸಂಕಟಗಳಿಂದ ನಮ್ಮ ಭೂಮಿಯನ್ನು ಉಳಿಸುವಲ್ಲಿ ದೇಶದ ಮಾತೃಶಕ್ತಿ ದೊಡ್ಡ ಪಾತ್ರವನ್ನು ವಹಿಸುತ್ತಿದೆ. ಮಹಿಳೆಯರು ಈಗ ದೇಶದ ಮೂಲೆ ಮೂಲೆಗಳಲ್ಲಿ ನೈಸರ್ಗಿಕ ಕೃಷಿಯನ್ನು ವಿಸ್ತರಿಸುತ್ತಿದ್ದಾರೆ ಎಂದು ಹೇಳಿದರು.

ಇಂದು ‘ಜಲ ಜೀವನ್ ಮಿಷನ್’ ಅಡಿಯಲ್ಲಿ ದೇಶದಲ್ಲಿ ಇಷ್ಟೆಲ್ಲ ಕೆಲಸಗಳು ನಡೆಯುತ್ತಿದ್ದರೆ ಅದರಲ್ಲಿ ಜಲ ಸಮಿತಿಗಳ ಪಾತ್ರ ಬಹುದೊಡ್ಡದು. ಈ ಜಲಸಮಿತಿಯ ನಾಯಕತ್ವ ಮಹಿಳೆಯರದ್ದೇ ಆಗಿದೆ. ಇದರ ಹೊರತಾಗಿ, ಸಹೋದರಿಯರು ಮತ್ತು ಹೆಣ್ಣುಮಕ್ಕಳು ಜಲ ಸಂರಕ್ಷಣೆಗಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಇಂದು ನಮ್ಮೆಲ್ಲರ ಜೀವನದಲ್ಲಿ ತಂತ್ರಜ್ಞಾನದ ಪ್ರಾಮುಖ್ಯತೆಯು ಬಹಳಷ್ಟು ಹೆಚ್ಚಾಗಿದೆ, ಮೊಬೈಲ್ ಫೋನ್ಗಳು, ಡಿಜಿಟಲ್ ಗ್ಯಾಜೆಟ್ಗಳು ನಮ್ಮೆಲ್ಲರ ಜೀವನದ ಪ್ರಮುಖ ಭಾಗವಾಗಿದೆ. ಕೆಲವು ದಿನಗಳ ನಂತರ, ಮಾರ್ಚ್ 3 ರಂದು, ಇದು ವಿಶ್ವ ವನ್ಯಜೀವಿ ದಿನ ವನ್ಯಪ್ರಾಣಿಗಳ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ, ವಿಶ್ವ ವನ್ಯಜೀವಿ ದಿನದ ವಿಷಯವಾಗಿ ಡಿಜಿಟಲ್ ಆವಿಷ್ಕಾರವನ್ನು ಪ್ರಮುಖವಾಗಿ ಇರಿಸಲಾಗಿದೆ.

ಮತ್ತಷ್ಟು ಓದಿ: Mann Ki Baat: ಯಾವ ದೇಶ ನಾವೀನ್ಯತೆಗೆ ಅವಕಾಶ ನೀಡುವುದಿಲ್ಲವೋ ಆ ದೇಶದ ಅಭಿವೃದ್ಧಿ ಅಲ್ಲಿಗೆ ನಿಲ್ಲುತ್ತದೆ: ಮೋದಿ 

ಡ್ರೋನ್​ ದೀದಿ ಜತೆ ಮಾತು
ಡ್ರೋನ್ ದೀದಿ ಎಂದು ಜನಪ್ರಿಯವಾಗಿರುವ ಸೀತಾಪುರದ ಸುನೀತಾ ಅವರೊಂದಿಗೆ ಪ್ರಧಾನಿ ಮೋದಿ ಮಾತನಾಡಿದರು. ಇಂದು ಪ್ರತಿ ಹಳ್ಳಿಯಲ್ಲೂ ಡ್ರೋನ್ ದೀದಿಯ ಬಗ್ಗೆ ತುಂಬಾ ಚರ್ಚೆಯಾಗುತ್ತಿದೆ ಎಂದ ಅವರು, ನಮ್ಮ ದೇಶದಲ್ಲಿ ಹಳ್ಳಿಗಳಲ್ಲಿ ವಾಸಿಸುವ ಮಹಿಳೆಯರೂ ಡ್ರೋನ್‌ಗಳನ್ನು ಹಾರಿಸುತ್ತಾರೆ ಎಂದು ಕೆಲವು ವರ್ಷಗಳ ಹಿಂದೆ ಯಾರು ಭಾವಿಸಿರಲಿಲ್ಲ, ಆದರೆ ಇಂದು ಅದು ಸಾಧ್ಯವಾಗುತ್ತಿದೆ ಎಂದರು.

ಕಾಡು ಪ್ರಾಣಿಗಳ ಕಲ್ಯಾಣಕ್ಕಾಗಿ ನಡೆಯುತ್ತಿರುವ ಆವಿಷ್ಕಾರಗಳು
ಯುವ ಉದ್ಯಮಿಗಳು ವನ್ಯಜೀವಿಗಳಿಗಾಗಿ ಹೊಸ ಆವಿಷ್ಕಾರಗಳನ್ನು ಮಾಡುತ್ತಿದ್ದಾರೆ.ದಿಯಲ್ಲಿ ಮೊಸಳೆಗಳ ಮೇಲೆ ನಿಗಾ ಇಡಲು ಯುವಕನೊಬ್ಬ ಡ್ರೋನ್ ಅಭಿವೃದ್ಧಿಪಡಿಸಿದ್ದಾನೆ. ಎಐ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್‌ನಲ್ಲಿಯೂ ಕೆಲಸ ಮಾಡಲಾಗುತ್ತಿದೆ. ನಮ್ಮ ದೇಶದ ಜೀವವೈವಿಧ್ಯವು ಕಾಡು ಪ್ರಾಣಿಗಳ ಸಂರಕ್ಷಣೆಯ ಕಡೆಗೆ ಉತ್ತಮ ಹೆಜ್ಜೆಯಾಗಿದೆ.

ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಸಂರಕ್ಷಿಸಲು ಅಸಂಖ್ಯಾತ ಜನರು ನಿಸ್ವಾರ್ಥ ಪ್ರಯತ್ನಗಳನ್ನು ಮಾಡುತ್ತಿರುವುದು ಸಂತಸ ತಂದಿದೆ ಎಂದು ಪ್ರಧಾನಿ ಹೇಳಿದರು. ಜಮ್ಮು ಮತ್ತು ಕಾಶ್ಮೀರ, ಅರುಣಾಚಲ ಪ್ರದೇಶ ಮತ್ತು ಕರ್ನಾಟಕದ ನಾಗರಿಕರ ಪ್ರಯತ್ನಗಳು ಎಲ್ಲರಿಗೂ ಸ್ಫೂರ್ತಿ. ಅದೇ ಹೊತ್ತಿಗೆ ಕಂಟೆಂಟ್ ಕ್ರಿಯೇಟ್ ಮಾಡುತ್ತಿರುವ ದೇಶದ ಯುವಕರ ದನಿ ಇಂದು ತುಂಬಾ ಪರಿಣಾಮಕಾರಿಯಾಗಿದೆ. ಅವರ ಪ್ರತಿಭೆಯನ್ನು ಗೌರವಿಸಲು, ದೇಶದಲ್ಲಿ ರಾಷ್ಟ್ರೀಯ ರಚನೆಕಾರರ ಪ್ರಶಸ್ತಿಯನ್ನು ಪ್ರಾರಂಭಿಸಲಾಗಿದೆ ಎಂದು ಮೋದಿ ತಿಳಿಸಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us