Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi Mann Ki Baat: ಮೈಸೂರಿನ ಅರ್ಲಿ ಬರ್ಡ್​ ಸಂಸ್ಥೆಯ ಕಾರ್ಯ ಶ್ಲಾಘಿಸಿದ ಪ್ರಧಾನಿ ಮೋದಿ

ಮೈಸೂರಿನ ಅರ್ಲಿ ಬರ್ಡ್​ ಸಂಸ್ಥೆಯ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಈ ಸಂಸ್ಥೆಯು ಮಕ್ಕಳಿಗೆ ಪಕ್ಷಿ, ಪ್ರಕೃತಿಯ ಮಹತ್ವವನ್ನು ತಿಳಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ 116ನೇ ಮನ್​ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಿಗೆ ನೇಚರ್ ಎಜುಕೇಷನ್ ನೀಡುತ್ತಿರುವ ಸಂಸ್ಥೆ ಇದಾಗಿದ್ದು, ನಗರದಲ್ಲಿರುವ ಮಕ್ಕಳನ್ನು ಹಳ್ಳಿಗಳಿಗೆ ಕರೆದೊಯ್ದು ಪಕ್ಷಿ ಸಂಕುಲದ ಪರಿಚಯ ಮಾಡಿಕೊಡುವುದಷ್ಟೇ ಅಲ್ಲದೆ ಅದರಿಂದಾಗುವ ಪ್ರಯೋಜನಗಳ ಬಗ್ಗೆಯೂ ತಿಳಿ ಹೇಳುತ್ತಿದ್ದು, ಉತ್ತಮ ನಾಗರಿಕರನ್ನಾಗಿ ಮಾಡಲು ಶ್ರಮ ಪಡುತ್ತಿದ್ದಾರೆ. ಅರ್ಲಿ ಬರ್ಡ್​ ಸಂಸ್ಥೆಯು ವಿಶೇಷ ಗ್ರಂಥಾಲಯ, ಸ್ಟೋರಿ ಬುಕ್​ಗಳನ್ನು ಅಲ್ಲಿರಿಸಿದೆ ಎಂದು ಮೋದಿ ಹೇಳಿದರು.

Modi Mann Ki Baat: ಮೈಸೂರಿನ ಅರ್ಲಿ ಬರ್ಡ್​ ಸಂಸ್ಥೆಯ ಕಾರ್ಯ ಶ್ಲಾಘಿಸಿದ ಪ್ರಧಾನಿ ಮೋದಿ
ಪಕ್ಷಿಗಳುImage Credit source: Freepik
Follow us
ನಯನಾ ರಾಜೀವ್
|

Updated on: Nov 24, 2024 | 12:22 PM

ಮೈಸೂರಿನ ಅರ್ಲಿ ಬರ್ಡ್​ ಸಂಸ್ಥೆಯ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಈ ಸಂಸ್ಥೆಯು ಮಕ್ಕಳಿಗೆ ಪಕ್ಷಿ, ಪ್ರಕೃತಿಯ ಮಹತ್ವವನ್ನು ತಿಳಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ 116ನೇ ಮನ್​ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಿಗೆ ನೇಚರ್ ಎಜುಕೇಷನ್ ನೀಡುತ್ತಿರುವ ಸಂಸ್ಥೆ ಇದಾಗಿದ್ದು, ನಗರದಲ್ಲಿರುವ ಮಕ್ಕಳನ್ನು ಹಳ್ಳಿಗಳಿಗೆ ಕರೆದೊಯ್ದು ಪಕ್ಷಿ ಸಂಕುಲದ ಪರಿಚಯ ಮಾಡಿಕೊಡುವುದಷ್ಟೇ ಅಲ್ಲದೆ ಅದರಿಂದಾಗುವ ಪ್ರಯೋಜನಗಳ ಬಗ್ಗೆಯೂ ತಿಳಿ ಹೇಳುತ್ತಿದ್ದು, ಉತ್ತಮ ನಾಗರಿಕರನ್ನಾಗಿ ಮಾಡಲು ಶ್ರಮ ಪಡುತ್ತಿದ್ದಾರೆ. ಅರ್ಲಿ ಬರ್ಡ್​ ಸಂಸ್ಥೆಯು ವಿಶೇಷ ಗ್ರಂಥಾಲಯ, ಸ್ಟೋರಿ ಬುಕ್​ಗಳನ್ನು ಅಲ್ಲಿರಿಸಿದೆ ಎಂದು ಮೋದಿ ಹೇಳಿದರು.

ಈ ಸಂಸ್ಥೆಯು ಮಕ್ಕಳಿಗೆ ಪಕ್ಷಿಗಳನ್ನು ಪರಿಚಯಿಸಲು ಶಿಕ್ಷಣತಜ್ಞರು ಮತ್ತು ಹವ್ಯಾಸಿ ಪಕ್ಷಿವೀಕ್ಷಕರಿಗೆ ತರಬೇತಿ ನೀಡುತ್ತಾರೆ ಮತ್ತು ಸಮಾನ ಮನಸ್ಕ ಸಂಸ್ಥೆಗಳ ಸಹಭಾಗಿತ್ವದಲ್ಲಿ ಭಾರತದಾದ್ಯಂತ ಕಾರ್ಯಾಗಾರಗಳನ್ನು ನಡೆಸುತ್ತಾರೆ. ಮಕ್ಕಳೊಂದಿಗೆ ಕೆಲಸ ಮಾಡುವ ಸ್ಥಳೀಯ ಗುಂಪುಗಳೊಂದಿಗೆ ಪಾಲುದಾರಿಕೆ ಮಾಡುವ ಮೂಲಕ ಸಾಧ್ಯವಾದಷ್ಟು ಜನರನ್ನು ತಲುಪುವ ಗುರಿ ಹೊಂದಿದೆ.

ಫ್ಲ್ಯಾಶ್​ಕಾರ್ಡ್​, ಪಾಕೆಟ್ ಮಾರ್ಗದರ್ಶಿಗಳು, ಪೋಸ್ಟ್​ರ್​ಗಳು, ಜಿಗ್ಸಾ ಪಸಲ್​, ಹೊರಾಂಗಣ ಆಟಗಳು, ಸೃಜನಾತ್ಮಕ ಚಟುವಟಿಕೆಗಳನ್ನು ಹೊಂದಿವೆ.

ಜೀವವೈವಿಧ್ಯದಲ್ಲಿ ಗುಬ್ಬಚ್ಚಿಯ ಪ್ರಮುಖ ಕೊಡುಗೆ ನೀವೆಲ್ಲರೂ ನಿಮ್ಮ ಬಾಲ್ಯದಲ್ಲಿ ಗುಬ್ಬಚ್ಚಿಯನ್ನು ನೋಡಿರಬೇಕು ಎಂದು ಪ್ರಧಾನಿ ಮೋದಿ ಹೇಳಿದರು. ನಮ್ಮ ಸುತ್ತಲಿನ ಜೀವವೈವಿಧ್ಯವನ್ನು ಕಾಪಾಡುವಲ್ಲಿ ಗುಬ್ಬಚ್ಚಿಗಳು ಪ್ರಮುಖ ಪಾತ್ರವಹಿಸುತ್ತವೆ. ಹೆಚ್ಚುತ್ತಿರುವ ನಗರೀಕರಣದಿಂದಾಗಿ ಗುಬ್ಬಚ್ಚಿ ನಮ್ಮಿಂದ ದೂರವಾಗಿದೆ. ಇಂದಿನ ಪೀಳಿಗೆಯ ಮಕ್ಕಳು ಈ ಪಕ್ಷಿಯನ್ನು ಚಿತ್ರಗಳಲ್ಲಿ ಮಾತ್ರ ನೋಡಿದ್ದಾರೆ. ಈಗ ಈ ಹಕ್ಕಿಯ ವಾಪಸಾತಿಗೆ ಹಲವು ಪ್ರಯತ್ನಗಳು ನಡೆಯುತ್ತಿವೆ. ನೀವೂ ಸಹ ನಿಮ್ಮ ಸುತ್ತ ಪ್ರಯತ್ನ ಮಾಡಿದರೆ, ಗುಬ್ಬಚ್ಚಿಗಳು ನಮ್ಮ ಜೀವನದ ಭಾಗವಾಗುತ್ತವೆ ಎಂದು ಮೋದಿ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು