AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜಕ್ಕೆ ಅಪಮಾನವಾಗಿದೆ: ಮನ್ ಕೀ ಬಾತ್​ನಲ್ಲಿ ನರೇಂದ್ರ ಮೋದಿ ಬೇಸರ

ಜನವರಿ ತಿಂಗಳು ಭಾರತಕ್ಕೆ ಹೆಮ್ಮೆ, ಬೇಸರ ಎರಡನ್ನೂ ಹೊತ್ತು ತಂದಿದೆ ಎಂದು ಮನ್ ಕೀ ಬಾತ್​​ನ 73ನೇ ಸಂಚಿಕೆ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.

ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜಕ್ಕೆ ಅಪಮಾನವಾಗಿದೆ: ಮನ್ ಕೀ ಬಾತ್​ನಲ್ಲಿ ನರೇಂದ್ರ ಮೋದಿ ಬೇಸರ
ಪ್ರಧಾನ ಮಂತ್ರಿ ನರೇಂದ್ರ ಮೋದಿ
TV9 Web
| Edited By: |

Updated on:Apr 06, 2022 | 8:27 PM

Share

ದೆಹಲಿ: ಜನವರಿ ತಿಂಗಳು ಭಾರತಕ್ಕೆ ಹೆಮ್ಮೆ, ಬೇಸರ ಎರಡನ್ನೂ ಹೊತ್ತು ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.  ಮನ್ ಕೀ ಬಾತ್​​ನ 73ನೇ ಸಂಚಿಕೆ ಉದ್ದೇಶಿಸಿ ಮಾತನಾಡಿದ ಅವರು, ಗಣರಾಜ್ಯೋತ್ಸವ, ಪದ್ಮ ಪುರಸ್ಕಾರ, ಆಸ್ಟ್ರೇಲಿಯಾ ನೆಲದಲ್ಲಿ ಭಾರತ ಕ್ರಿಕೆಟ್ ತಂಡದ ಐತಿಹಾಸಿಕ ಗೆಲುವು ಮತ್ತು ಟ್ರ್ಯಾಕ್ಟರ್ ಚಳುವಳಿಯ ದಿನ ನಡೆದ ಹಿಂಸಾತ್ಮಕ ಘಟನೆಗಳ ಬಗ್ಗೆ ಪ್ರಧಾನಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಹೊಸ ವರ್ಷದಲ್ಲಿ, ಮಕರ ಸಂಕ್ರಾಂತಿಯನ್ನು ಆಚರಿಸಿದ್ದೇವೆ. ಗಣರಾಜ್ಯೋತ್ಸವವನ್ನು ಕೂಡ ಆಚರಣೆ ಮಾಡಿದ್ದೇವೆ. ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಪದ್ಮ ಪ್ರಶಸ್ತಿಯನ್ನ ಪಡೆದಿದ್ದಾರೆ. ಆಸ್ಪ್ರೇಲಿಯಾ ನೆಲದಲ್ಲಿ ಭಾರತೀಯರು ಕಪ್ ಗೆದ್ದಿದ್ದಾರೆ ಎಂದು ಈ ವರ್ಷದ ಮೊದಲ ಮನ್ ಕೀ ಬಾತ್​ನಲ್ಲಿ ಮೋದಿ ಸಂತಸ ವ್ಯಕ್ತಪಡಿಸಿದರು. ಆದರೆ, ಜನವರಿ 26ರಂದು ಕೆಂಪುಕೋಟೆಯಲ್ಲಿ ನಡೆದ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜಕ್ಕೆ ಅಪಮಾನವಾಗಿದೆ. ತ್ರಿವರ್ಣ ಧ್ವಜಕ್ಕೆ ಅಪಮಾನ ಮಾಡಿದ್ದು ದುಃಖಕರ. ಇಡೀ ದೇಶದ ಜನರು ತಲೆತಗ್ಗಿಸುವಂಥ ಕೆಲಸವಾಗಿದೆ ಎಂದು ಮೋದಿ, ಅಂದಿನ ಘಟನೆಯನ್ನು ಖಂಡಿಸಿದರು.

ಇದನ್ನೂ ಓದಿ: ರಾಷ್ಟ್ರದ ಘನತೆಯನ್ನು ಗೌರವಿಸುತ್ತೇವೆ, ನಮ್ಮ ಸ್ವಾಭಿಮಾನವನ್ನೂ ರಕ್ಷಿಸಿಕೊಳ್ಳುತ್ತೇವೆ: ನರೇಶ್ ಟಿಕಾಯತ್ ಹೇಳಿಕೆ

ಕೊರೊನಾ ಲಸಿಕೆ ನೀಡುವಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ನಾವು ಜಗತ್ತಿನಲ್ಲಿಯೇ ಅತೀ ದೊಡ್ಡ ಲಸಿಕೆ ವಿತರಣೆ  ಅಭಿಯಾನ ಮಾಡಿದ್ದೇವೆ. ಆ ಮೂಲಕ, ಭಾರತ ಕೊರೊನಾ ವಿರುದ್ಧ ಸಮರ ಸಾರುವಲ್ಲಿ ಯಶಸ್ವಿಯಾಗಿದೆ. ಜೊತೆಗೆ, ವಿಶ್ವದ ವಿವಿಧ ದೇಶಗಳಿಗೆ ಕೊರೊನಾ ಲಸಿಕೆ ರಫ್ತು ಮಾಡಿದ್ದೇವೆ. ಕೊರೊನಾ ಲಸಿಕೆ ನೀಡುವ ಮೂಲಕ ವಿಶ್ವಕ್ಕೆ ಮಾದರಿಯಾಗಿದ್ದೇವೆ ಎಂದು ಪ್ರಧಾನಿ ಕೊವಿಡ್-19 ವಿರುದ್ಧ ದೇಶ ಹೋರಾಡಿರುವ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು.

ಕೆಲವು ದಿನಗಳ ಹಿಂದೆ ಭಾರತದ ಏರ್ ಇಂಡಿಯಾ ಸಂಸ್ಥೆ, ಮಹಿಳಾ ಪೈಲೆಟ್​ಗಳ ನೇತೃತ್ವದಲ್ಲಿ ಸಾನ್ ಫ್ರಾನ್ಸಿಸ್ಕೊದಿಂದ ಬೆಂಗಳೂರಿಗೆ ವಿಮಾನಯಾನ ನಡೆಸಿದೆ. ಯಾವುದೇ ಕ್ಷೇತ್ರವಾಗಿರಲಿ ಭಾರತೀಯ ಮಹಿಳೆಯರ ಸಾಧನೆ ಗಣನೀಯವಾಗಿ ಹೆಚ್ಚುತ್ತಿದೆ ಎಂದು ಪ್ರಧಾನಿ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡಿದರು.

ಭಾರತವು ಈ ಬಾರಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಿದೆ. ಈ ಸಂದರ್ಭದಲ್ಲಿ ಭಾರತದ ಯುವಕರು ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಬರೆಯಬೇಕು. ಸ್ವಾತಂತ್ರ್ಯ ಚಳುವಳಿಯ ಬಗ್ಗೆ ತಿಳಿದುಕೊಳ್ಳಬೇಕು. ಅದು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರಿಗೆ ನಾವು ನೀಡುವ ವಿಶೇಷ ಗೌರವ ಎಂದು ಮೋದಿ ಭಾರತೀಯ ಯುವ ಸಮುದಾಯಕ್ಕೆ ಕರೆ ನೀಡಿದರು.

ರಸ್ತೆ ಸುರಕ್ಷತೆಯ ಬಗ್ಗೆ ನಾವು ಜಾಗೃತರಾಗಿರೋಣ. ಹೊಸ ವರ್ಷಕ್ಕೆ ಹೊಸ ಆಲೋಚನೆಗಳೊಂದಿಗೆ ಕಾಲಿಟ್ಟಿದ್ದೇವೆ. ಪ್ರತಿಯೊಂದು ಜವಾಬ್ದಾರಿಗಳನ್ನೂ ಸಮರ್ಪಕವಾಗಿ ನಿಭಾಯಿಸಿ ಹೆಜ್ಜೆ ಇಡುವ ಮೂಲಕ ಈ ವರ್ಷವನ್ನು ಸಾರ್ಥಕಗೊಳಿಸೋಣ ಎಂದು ಪ್ರಧಾನಿ ತಿಳಿಸಿದರು.

ಕೊರೊನಾ ನಂತರ ಪ್ರಧಾನಿ ಮೋದಿ ಮೊದಲ ವಿದೇಶ ಪ್ರವಾಸ! ಅದೂ ಎಲ್ಲಿಗೆ, ಯಾವಾಗ ಗೊತ್ತಾ?

ಮಾತುಕತೆ ಮೂಲಕ ರೈತ ಸಮಸ್ಯೆ ಬಗೆಹರಿಸಿಕೊಳ್ಳೋಣ: ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿಯಿಂದ ಮತ್ತೊಮ್ಮೆ ಚರ್ಚೆಗೆ ಆಹ್ವಾನ!

Published On - 11:54 am, Sun, 31 January 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ