AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat: ಪ್ರಧಾನಿ ಮೋದಿಯವರ ‘ಮನ್​ ಕೀ ಬಾತ್’​ನಿಂದ 31 ಕೋಟಿ ರೂ. ಆದಾಯ; ರಾಜ್ಯಸಭೆಯಲ್ಲಿ ಮಾಹಿತಿ

ಟಿವಿ ಚಾನೆಲ್​ಗಳ ಪ್ರಸಾರ ಪ್ರೇಕ್ಷಕರ ಸಂಶೋಧನಾ ಮಂಡಳಿ (BARC-ಬಾರ್ಕ್)ಯ ಡಾಟಾ ಅನ್ವಯ, ಮನ್​ ಕೀ ಬಾತ್​ ಕಾರ್ಯಕ್ರಮದ ವೀಕ್ಷಕರ ಸಂಖ್ಯೆ 2018-2020ರ ಅವಧಿಯಲ್ಲಿ ಅಂದಾಜು 6 ಕೋಟಿಯಿಂದ 14.35 ಕೋಟಿಗೆ ಏರಿಕೆಯಾಗಿದೆ.

Mann Ki Baat: ಪ್ರಧಾನಿ ಮೋದಿಯವರ ‘ಮನ್​ ಕೀ ಬಾತ್’​ನಿಂದ 31 ಕೋಟಿ ರೂ. ಆದಾಯ; ರಾಜ್ಯಸಭೆಯಲ್ಲಿ ಮಾಹಿತಿ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Jul 20, 2021 | 5:50 PM

Share

2014ರಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi)ಯವರ ಮನ್​ ಕೀ ಬಾತ್​ (Mann Ki Baat) ಶುರುವಾದಾಗಿನಿಂದ ಇಲ್ಲಿಯವರೆಗೆ ಸುಮಾರು 31 ಕೋಟಿ ರೂಪಾಯಿ (30,80,91,225)ಆದಾಯ ಗಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಮಾಹಿತಿ ನೀಡಿದೆ. ಹಾಗೇ, ಈ ಕಾರ್ಯಕ್ರಮಕ್ಕಾಗಿ ರಾಷ್ಟ್ರೀಯ ಪ್ರಸಾರಕರು ಹೆಚ್ಚುವರಿ ಖರ್ಚು ಮಾಡಿಲ್ಲ, ಬದಲಾಗಿ ಆಂತರಿಕ ಸಂಪನ್ಮೂಲಗಳ ಸದುಪಯೋಗಪಡಿಸಿಕೊಂಡು ಮನ್​ ಕೀ ಬಾತ್​ ನಿರ್ಮಾಣ ಮಾಡಲಾಗಿದೆ ಎಂದೂ ಹೇಳಿದೆ.

ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಅನುರಾಗ್​ ಸಿಂಗ್ ಠಾಕೂರ್​, ಪ್ರಧಾನಿ ನರೇಂದ್ರ ಮೋದಿಯವರ ಮನ್​ ಕೀ ಬಾತ್​ ದೂರದರ್ಶನ್​ ಮತ್ತು ಆಲ್​ ಇಂಡಿಯಾ ರೇಡಿಯೋದ ಹಲವು ಚಾನಲ್​ಗಳಲ್ಲಿ ಪ್ರಸಾರವಾಗುತ್ತದೆ. 2014ರಿಂದ ಇಲ್ಲಿಯವರೆಗೆ ಪ್ರಸಾರ್ ಭಾರತಿ ತನ್ನ ಆಲ್​ ಇಂಡಿಯಾ ರೇಡಿಯೋ, ದೂರದರ್ಶನ ಮತ್ತು ಸಾಮಾಜಿಕ ಜಾಲತಾಣ ವೇದಿಕೆಗಳ ಮೂಲಕ ಒಟ್ಟು 78 ಆವೃತ್ತಿಗಳನ್ನು ಪ್ರಸಾರ ಮಾಡಿದೆ. ಈಗಂತೂ 23 ಭಾಷೆ, 29 ಉಪಭಾಷೆಗಳಲ್ಲೂ ಮನ್​ ಕೀ ಬಾತ್​ ಪ್ರಸಾರವಾಗುತ್ತಿದೆ ಎಂದು ತಿಳಿಸಿದರು.

ಪ್ರಸಾರ ಭಾರತಿ ತನ್ನ ಹಿಂದಿ ಮತ್ತು ವಿವಿಧ ಭಾಷೆಗಳ ಡಿಡಿ ಚಾನೆಲ್​ಗಳ ಮೂಲಕ ಮನ್​ ಕೀ ಬಾತ್​ನ ದೃಶ್ಯೀಕೃತ ಆವೃತ್ತಿಗಳನ್ನೂ ಪ್ರಸಾರ ಮಾಡುತ್ತಿದೆ. ಆಲ್​ ಇಂಡಿಯಾ ರೇಡಿಯೋ ಮತ್ತು ದೂರದರ್ಶನಗಳ ಹೊರತಾಗಿಯೂ ಈ ಕಾರ್ಯಕ್ರಮವನ್ನು ದೇಶದಲ್ಲಿ ಸುಮಾರು 91 ಖಾಸಗಿ ಸೆಟಲೈಟ್​ ಟಿವಿ ಚಾನಲ್​ಗಳು, ಕೇಬಲ್​, ಡಿಟಿಎಚ್​ ಪ್ಲ್ಯಾಟ್​ಫಾರಂಗಳು ಪ್ರಸಾರ ಮಾಡುತ್ತಿವೆ. ಅದರೊಂದಿಗೆ iOS, ಆ್ಯಂಡ್ರಾಯ್ಡ್ ಮೊಬೈಲ್​ ಬಳಕೆದಾರರು ನ್ಯೂಸ್ ಆನ್​ ಏರ್​ ಮೂಲಕ ಅಥವಾ ಪ್ರಸಾರ ಭಾರತಿಯ ಯೂಟ್ಯೂಬ್​ ಚಾನಲ್​ಗಳ ಮೂಲಕ ಮನ್​ ಕೀ ಬಾತ್ ಕೇಳುತ್ತಿದ್ದಾರೆ ಎಂದು ಅನುರಾಗ್​ ಠಾಕೂರ್​ ಮಾಹಿತಿ ನೀಡಿದರು.

ಟಿವಿ ಚಾನೆಲ್​ಗಳ ಪ್ರಸಾರ ಪ್ರೇಕ್ಷಕರ ಸಂಶೋಧನಾ ಮಂಡಳಿ (BARC-ಬಾರ್ಕ್)ಯ ಡಾಟಾ ಅನ್ವಯ, ಮನ್​ ಕೀ ಬಾತ್​ ಕಾರ್ಯಕ್ರಮದ ವೀಕ್ಷಕರ ಸಂಖ್ಯೆ 2018-2020ರ ಅವಧಿಯಲ್ಲಿ ಅಂದಾಜು 6 ಕೋಟಿಯಿಂದ 14.35 ಕೋಟಿಗೆ ಏರಿಕೆಯಾಗಿದೆ. ಮನ್​ ಕೀ ಬಾತ್​ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ದೇಶದ ವಿವಿಧ ಸಮುದಾಯವನ್ನು ತಲುಪುತ್ತಿದ್ದಾರೆ. ಪೂರ್ತಿಯಾಗಿ ರಾಜಕೀಯ ಹೊರತಾಗಿಯೇ ಮಾತನಾಡುತ್ತಾರೆ. ಸಾಧಕರನ್ನು ಹೊಗಳುತ್ತಾರೆ. ಅದೆಷ್ಟೋ ರಾಜ್ಯಗಳ ಕುಗ್ರಾಮಗಳ ಸಾಧಕರನ್ನೂ ಅವರು ಈ ಮನ್​ ಕೀ ಬಾತ್​ನಲ್ಲಿ ಉಲ್ಲೇಖಿಸಿದ್ದುಂಟು. ಒಟ್ಟಾರೆ ಪ್ರತಿತಿಂಗಳ ಕೊನೆಯಲ್ಲಿ ನಡೆಯುವ ಈ ಮನ್​ ಕೀ ಬಾತ್​ಗೆ ಅಪಾರ ಶ್ರೋತೃಗಳು ಇರುವುದು ಸುಳ್ಳಲ್ಲ.

ಇದನ್ನೂ ಓದಿ: 100 ಕೋಟಿಗೂ ಹೆಚ್ಚು ಅನುದಾನದ ಕಾರ್ಯಕ್ರಮಗಳ ಕಡ್ಡಾಯ ಮೌಲ್ಯಮಾಪನಕ್ಕೆ ಯಡಿಯೂರಪ್ಪ ಸೂಚನೆ 

Mann Ki Baat Radio Programme Generated Rs 31 Crore Revenue informed in Rajyasabha

Published On - 3:50 pm, Tue, 20 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ