AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat: ಮನ್​ ಕಿ ಬಾತ್​ನಲ್ಲಿ 1975ರ ತುರ್ತು ಪರಿಸ್ಥಿತಿ ನೆನಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ

PM Modi Speech: ಈ ಬಾರಿಯ ಮನ್​ ಕಿ ಬಾತ್​ನಲ್ಲಿ 1975ರ ತುರ್ತು ಪರಿಸ್ಥಿತಿಯ ಹೋರಾಟವನ್ನು ವಿಶೇಷವಾಗಿ ನೆನಪಿಸಿಕೊಂಡರು.

Mann Ki Baat: ಮನ್​ ಕಿ ಬಾತ್​ನಲ್ಲಿ 1975ರ ತುರ್ತು ಪರಿಸ್ಥಿತಿ ನೆನಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 26, 2022 | 11:35 AM

ದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಭಾನುವಾರ (ಜೂನ್ 26) ಪ್ರತಿ ತಿಂಗಳ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ ಮೂಲಕ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು. ಈ ಬಾರಿಯ ಮನ್​ ಕಿ ಬಾತ್​ನಲ್ಲಿ 1975ರ ತುರ್ತು ಪರಿಸ್ಥಿತಿಯ ಹೋರಾಟವನ್ನು ವಿಶೇಷವಾಗಿ ನೆನಪಿಸಿಕೊಂಡರು. ಬಾಹ್ಯಾಕಾಶ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹಲವು ಸ್ಟಾರ್ಟ್​ಅಪ್​ಗಳ ಬಗ್ಗೆ ಪ್ರಸ್ತಾಪಿಸಿದ ಅವರು, ಎಲ್ಲರ ಸಹಯೋಗದಿಂದ ಭಾರತವು ಬಾಹ್ಯಾಕಾಶ ಕ್ಷೇತ್ರದ ಮಹಾನ್ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಹೇಳಿದರು.

ತುರ್ತು ಪರಿಸ್ಥಿತಿ ಜಾರಿಯಲ್ಲಿದ್ದಾಗ ದೇಶದಲ್ಲಿ ನಾಗರಿಕರ ಎಲ್ಲ ಹಕ್ಕುಗಳು ದಮನಗೊಂಡಿದ್ದವು. ಸಂವಿಧಾನದ 21ನೇ ಪರಿಚ್ಛೇದ ನೀಡಿರುವ ಜೀವಿಸುವ ಹಕ್ಕು, ವೈಯಕ್ತಿಕ ಸ್ವಾತಂತ್ರ್ಯದ ಹಕ್ಕುಗಳನ್ನೂ ಕಿತ್ತುಕೊಳ್ಳಲಾಗಿತ್ತು ಎಂದು ಮೋದಿ ಹೇಳಿದರು. ತುರ್ತು ಪರಿಸ್ಥಿತಿಯ ನಂತರವೂ ದೇಶದಲ್ಲಿ ಜನರು ಪ್ರಜಾಪ್ರಭುತ್ವದ ಬಗ್ಗೆ ನಂಬಿಕೆ ಕಳೆದುಕೊಳ್ಳಲಿಲ್ಲ. ದೇಶವು ಸ್ವಾತಂತ್ರ್ಯ ಗಳಿಸಿದ ಅಮೃತ ಮಹೋತ್ಸವ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಯ ಸಂಕಷ್ಟಗಳನ್ನು ನಾವು ಮರೆಯಬಾರದು ಎಂದು ಮೋದಿ ಹೇಳಿದರು. ತುರ್ತು ಪರಿಸ್ಥಿತಿ ವಿರುದ್ಧ ನಡೆದ ಹೋರಾಟಗಳನ್ನು ನೆನಪಿಸಿಕೊಂಡರು.

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಸಾಧನೆಗಳನ್ನು ಪ್ರಸ್ತಾಪಿಸಿದ ಅವರು, ಅಜಾದಿ ಕಾ ಅಮೃತ ಮಹೋತ್ಸವ ವಿಶೇಷ ಕಾರ್ಯಕ್ರಮದ ಪ್ರಯುಕ್ತ ಹಲವು ವಿದ್ಯಾರ್ಥಿಗಳು ಸಣ್ಣಸಣ್ಣ ಉಪಗ್ರಹಗಳನ್ನು ರೂಪಿಸುತ್ತಿದ್ದಾರೆ. ಈ ವಿದ್ಯಾರ್ಥಿಗಳು ಸಣ್ಣ ಪಟ್ಟಣಗಳ ಮೂಲದವರು. ಭಾರತದ ಯುವಜನರು ಆಗಸ ಮುಟ್ಟಲು ತಯಾರಾಗಿದ್ದಾರೆ ಎಂದರು.

2019ಕ್ಕೆ ಮೊದಲು ಬಾಹ್ಯಾಕಾಶ ಕ್ಷೇತ್ರದಲ್ಲಿ ಸ್ಟಾರ್ಟ್​ಅಪ್​ಗಳು ಹೆಚ್ಚಾಗಿ ಕಂಡು ಬರುತ್ತಿರಲಿಲ್ಲ. ಆದರೆ ಕಳೆದ ಮೂರು ವರ್ಷಗಳಲ್ಲಿ ದೇಶದ ಯುವಜನರು ಬಾಹ್ಯಾಕಾಶ ಕ್ಷೇತ್ರದ ಸಾಧ್ಯತೆಗಳ ಬಗ್ಗೆ ಆಸಕ್ತಿ ತೋರಿದ್ದು, ಹೊಸ ಆವಿಷ್ಕಾರಗಳನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಹೇಳಿದರು.

ಕ್ರೀಡಾ ಕ್ಷೇತ್ರದ ಸಾಧನೆಗಾಗಿ ನೀರಜ್ ಛೋಪ್ರಾ, ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್ ಅವರನ್ನು ಶ್ಲಾಘಿಸಿದರು. ಜಾವಲಿನ್ ಎಸೆತದಲ್ಲಿ ಒಲಿಂಪಿಕ್ಸ್​ನಲ್ಲಿ ಉತ್ತಮ ಸಾಧನೆ ಮೆರೆದ ನೀರಜ್ ಛೋತ್ರಾ ಇದೀಗ ಪಾವೊ ನುರ್​ಮಿ ಗೇಮ್ಸ್​ನಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಇತ್ತೀಚೆಗಷ್ಟೇ ನಿವೃತ್ತರಾದ ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್, ಹಲವರಿಗೆ ಸ್ಫೂರ್ತಿಯ ಸೆಲೆಯಾಗಿದ್ದರು ಎಂದು ತಿಳಿಸಿದರು.

ಜಗನ್ನಾಥ ಯಾತ್ರೆ, ವೈಷ್ಣೋದೇವಿ ಯಾತ್ರೆ, ಪಂಡರಾಪುರ ಯಾತ್ರೆ ಮತ್ತು ಶಬರಿಮಲೆ ಯಾತ್ರೆಗಳ ಹಿಂದಿರುವ ಆಶಯವನ್ನು ಮೋದಿ ವಿವರಿಸಿದರು. ‘ತೀರ್ಥಯಾತ್ರೆಗಳು ನಮಗೆ ಅಧ್ಯಾತ್ಮದ ಅನುಭೂತಿ ಕಲ್ಪಿಸುವುದರೊಂದಿಗೆ, ಬಡವರಿಗೆ ಸೇವೆ ಸಲ್ಲಿಸಲು ಅವಕಾಶ ನೀಡುತ್ತವೆ’ ಎಂದು ಹೇಳಿದರು.

ಕೊರೊನಾ ನಿರ್ವಹಣೆ ವಿಚಾರದಲ್ಲಿ ದೇಶದ ಉತ್ತಮ ಸಾಧನೆ ಮಾಡಿದೆ. ಆದರೆ ಈ ವಿಚಾರದಲ್ಲಿ ನಾವು ಎಚ್ಚರ ತಪ್ಪುವಂತಿಲ್ಲ. ಕೈಗಳನ್ನು ಸುರಕ್ಷಿತವಾಗಿ ಇರಿಸಿಕೊಳ್ಳುವುದರೊಂದಿಗೆ ಬೂಸ್ಟರ್ ಡೋಸ್ ಪಡೆದುಕೊಳ್ಳಲು ಗಮನ ನೀಡಬೇಕು ಎಂದು ಸಲಹೆ ಮಾಡುವುದರೊಂದಿಗೆ ಮನ್ ಕಿ ಬಾತ್ ಮಾತು ಮುಗಿಸಿದರು.

Published On - 11:11 am, Sun, 26 June 22

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ