AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ-3 ಸಾಧನೆಯನ್ನು ದೇಶ ಎಂದಿಗೂ ಮರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಚಂದ್ರನ ಮೇಲೆ ಇಳಿದ ಭಾರತದ ಸಾಧನೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 113ನೇ ಮನ್​ ಕಿ ಬಾತ್​ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ಸಾಧನೆಯನ್ನು ದೇಶ ಎಂದಿಗೂ ಮರೆಯಲು ಸಾಧ್ಯವಿಲ್ಲ.

ಚಂದ್ರಯಾನ-3 ಸಾಧನೆಯನ್ನು ದೇಶ ಎಂದಿಗೂ ಮರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Aug 25, 2024 | 11:40 AM

Share

ಚಂದ್ರನ ಮೇಲೆ ಇಳಿದ ಭಾರತದ ಸಾಧನೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 113ನೇ ಮನ್​ ಕಿ ಬಾತ್​ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ಸಾಧನೆಯನ್ನು ದೇಶ ಎಂದಿಗೂ ಮರೆಯಲು ಸಾಧ್ಯವಿಲ್ಲ.

ತಂತ್ರಜ್ಞಾನದಿಂದ ದೇಶಕ್ಕೆ ಆಗುವ ಲಾಭಗಳ ಬಗ್ಗೆ ಮಾತನಾಡುತ್ತೇವೆ, ಬಾಹ್ಯಾಕಾಶ ಕ್ಷೇತ್ರದ ಅನುಭವಿಗಳೊಂದಿಗೆ ಮಾತುಕತೆ ನಡೆಸುತ್ತೇವೆ ಎಂದು ಪ್ರಧಾನಿ ಹೇಳಿದರು. ಅಭಿವೃದ್ಧಿ ಹೊಂದಿದ ಭಾರತದ ಅಡಿಪಾಯ ಬಲಗೊಳ್ಳುತ್ತಿದೆ. ಈ ಆಗಸ್ಟ್ 23 ರಂದು, ನಾವೆಲ್ಲರೂ ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿದ್ದೇವೆ. ಇಂದು ಯುವಕರು ಸ್ಟಾರ್ಟ್‌ಅಪ್‌ಗಳ ಮೂಲಕ ವೇಗವಾಗಿ ಪ್ರಗತಿ ಸಾಧಿಸುತ್ತಿದ್ದಾರೆ ಎಂದು ಪ್ರಧಾನಿ ಹೇಳಿದರು.

ಈ ಮನವಿಯಿಂದಾಗಿ ಕಾಶ್ಮೀರದಿಂದ ಅರುಣಾಚಲದವರೆಗೆ ತಿರಂಗಾ ಯಾತ್ರೆ ನಡೆದು ಏಕ ಭಾರತ ಶ್ರೇಷ್ಠ ಭಾರತ ದರ್ಶನವಾಗಿದೆ ಎಂದರು. ಹರ್ ಘರ್ ತ್ರಿವರ್ಣ ಅಭಿಯಾನಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಮತ್ತು ಜನರು ತ್ರಿವರ್ಣ ಧ್ವಜದೊಂದಿಗೆ ತಮ್ಮ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ಪ್ರಧಾನಿ ಹೇಳಿದರು.

ಮತ್ತಷ್ಟು ಓದಿ:National Space Day 2024 : ಭಾರತಕ್ಕೆ ಹೆಮ್ಮೆ ತಂದ ಇಸ್ರೋ, ಈ ಸಾಹಸದ ಹಿಂದಿದೆ ಹಲವು ವಿಜ್ಞಾನಿಗಳ ಶ್ರಮ

ರಾಜಕೀಯ ಹಿನ್ನೆಲೆ ಇಲ್ಲದ ಒಂದು ಲಕ್ಷ ಯುವಕರನ್ನು ರಾಜಕೀಯ ವ್ಯವಸ್ಥೆಯೊಂದಿಗೆ ಸಂಪರ್ಕಿಸಲು ಈ ವರ್ಷ ನಾನು ಕರೆ ನೀಡಿದ್ದೇನೆ.

ಇದು ನಮ್ಮ ಯುವಕರು ಎಷ್ಟು ದೊಡ್ಡ ಸಂಖ್ಯೆಯಲ್ಲಿ ರಾಜಕೀಯಕ್ಕೆ ಬರಲು ಸಿದ್ಧರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ. ಅವರು ಸರಿಯಾದ ಅವಕಾಶ ಮತ್ತು ಸರಿಯಾದ ಮಾರ್ಗದರ್ಶನಕ್ಕಾಗಿ ಹುಡುಕುತ್ತಿದ್ದಾರೆ ಎಂದರು.

‘ಮನ್ ಕಿ ಬಾತ್’ ನ ಮೊದಲ ಸಂಚಿಕೆ 3 ಅಕ್ಟೋಬರ್ 2014 ರಂದು ಪ್ರಸಾರವಾಯಿತು. ಈ ಕಾರ್ಯಕ್ರಮವು 14 ನಿಮಿಷಗಳದ್ದಾಗಿತ್ತು. ನಂತರ ಅದನ್ನು 30 ನಿಮಿಷಕ್ಕೆ ಹೆಚ್ಚಿಸಲಾಯಿತು. ಈ ಕಾರ್ಯಕ್ರಮದ 100ನೇ ಸಂಚಿಕೆಯನ್ನು 30 ಏಪ್ರಿಲ್ 2023 ರಂದು ಪ್ರಸಾರ ಮಾಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ