AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಸರ್ಕಾರ ಡಿಸೆಂಬರ್ 24ರೊಳಗೆ ಮರಾಠರಿಗೆ ಮೀಸಲಾತಿ ಘೋಷಿಸಬೇಕು: ಮನೋಜ್ ಜಾರಂಗೆ ಪಾಟೀಲ್

ಮರಾಠಾ ಸಮುದಾಯಕ್ಕೆ ಮೀಸಲಾತಿ(Reservation)ನೀಡುವಂತೆ ಒತ್ತಾಯಿಸಿ ಮನೋಜ್ ಜಾರಂಗೆ ಪಾಟೀಲ್ ಚಳವಳಿ ಆರಂಭಿಸಿದ್ದಾರೆ. ಮರಾಠಾ ಮೀಸಲಾತಿ ಆಂದೋಲನದ ಅಂಗವಾಗಿ ರಾಜ್ಯ ಪ್ರವಾಸ ಕೈಗೊಂಡಿರುವ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಅವರು ಡಿಸೆಂಬರ್ 24 ರೊಳಗೆ ಸಮುದಾಯಕ್ಕೆ ಮೀಸಲಾತಿಯನ್ನು ಸರ್ಕಾರ ಘೋಷಿಸಬೇಕು ಎಂದು ಒತ್ತಾಯಿಸಿದರು.

ಮಹಾರಾಷ್ಟ್ರ ಸರ್ಕಾರ ಡಿಸೆಂಬರ್ 24ರೊಳಗೆ ಮರಾಠರಿಗೆ ಮೀಸಲಾತಿ ಘೋಷಿಸಬೇಕು: ಮನೋಜ್ ಜಾರಂಗೆ ಪಾಟೀಲ್
ಮನೋಜ್Image Credit source: The Print
Follow us
ನಯನಾ ರಾಜೀವ್
|

Updated on: Nov 16, 2023 | 11:34 AM

ಮರಾಠಾ ಸಮುದಾಯಕ್ಕೆ ಮೀಸಲಾತಿ(Reservation)ನೀಡುವಂತೆ ಒತ್ತಾಯಿಸಿ ಮನೋಜ್ ಜಾರಂಗೆ ಪಾಟೀಲ್ ಚಳವಳಿ ಆರಂಭಿಸಿದ್ದಾರೆ. ಮರಾಠಾ ಮೀಸಲಾತಿ ಆಂದೋಲನದ ಅಂಗವಾಗಿ ರಾಜ್ಯ ಪ್ರವಾಸ ಕೈಗೊಂಡಿರುವ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಅವರು ಡಿಸೆಂಬರ್ 24 ರೊಳಗೆ ಸಮುದಾಯಕ್ಕೆ ಮೀಸಲಾತಿಯನ್ನು ಸರ್ಕಾರ ಘೋಷಿಸಬೇಕು ಎಂದು ಒತ್ತಾಯಿಸಿದರು.

ಧಾರಾಶಿವ್‌ನ ವಾಶಿ ಗ್ರಾಮದಲ್ಲಿ ರ್ಯಾಲಿಯೊಂದಿಗೆ ಪ್ರಾರಂಭವಾದ ಪ್ರವಾಸವು ಡಿಸೆಂಬರ್ 24 ರಂದು ಅಹ್ಮದ್‌ನಗರ ಜಿಲ್ಲೆಯ ಶೆಗಾಂವ್‌ನಲ್ಲಿ ಮುಕ್ತಾಯಗೊಳ್ಳಲಿದೆ – ಎಲ್ಲಾ ಮರಾಠರಿಗೆ ಕುಣಬಿ ಜಾತಿ ಪ್ರಮಾಣಪತ್ರಗಳನ್ನು ನೀಡಲು ಡಿಸೆಂಬರ್ 24ರವರೆಗೆ ಗಡುವು ನೀಡಿದ್ದಾರೆ.

ಪ್ರವಾಸವು ಕೊಂಕಣ ಮತ್ತು ಪಶ್ಚಿಮ ಮಹಾರಾಷ್ಟ್ರದ ಭಾಗಗಳನ್ನು ಒಳಗೊಂಡಿದೆ. ಪ್ರವಾಸ ಆರಂಭಿಸಿದ ಪಾಟೀಲ್, ಡಿಸೆಂಬರ್ 24 ರೊಳಗೆ ಸರ್ಕಾರ ಮೀಸಲಾತಿ ಪ್ರಕಟಿಸಬೇಕು, ನಮಗೆ ಮೀಸಲಾತಿ ನೀಡುವವರೆಗೆ ನಾವು ಸುಮ್ಮನಿರುವುದಿಲ್ಲ ಎಂದಿದ್ದಾರೆ. ರಾಜ್ಯಾದ್ಯಂತ ಪ್ರವಾಸವು ಮೂರು ಹಂತಗಳಲ್ಲಿ ನಡೆಯಲಿದೆ. ಒಂಬತ್ತು ದಿನಗಳ ಮೊದಲ ಹಂತವು ಇಂದು ಪ್ರಾರಂಭವಾಗಲಿದೆ ಎಂದು ಜಾರಂಗೆ ಪಾಟೀಲ್ ಆಪ್ತರು ತಿಳಿಸಿದ್ದಾರೆ.

ಪಾಟೀಲ್​ರ ಬೆಂಬಲಿಗರ ಪ್ರಕಾರ ಪ್ರವಾಸದ ವೇಳೆ ಮರಾಠಾ ಸಮುದಾಯದವರನ್ನು ಭೇಟಿ ಮಾಡಿ ಅವರ ಜತೆ ಸಂವಾದ ನಡೆಸಿ ಆತ್ಮವಿಶ್ವಾಸ ಹೆಚ್ಚಿಸಲಿದ್ದಾರೆ. ಸಮುದಾಯಕ್ಕೆ ಮೀಸಲಾತಿ ಸಿಗುತ್ತದೆ ಎಂಬ ನಂಬಿಕೆಯನ್ನೂ ಅವರಲ್ಲಿ ಮೂಡಿಸಲಿದ್ದು, ಸರಕಾರ ಕೋಟಾ ನೀಡದ ಹೊರತು ಆಂದೋಲನ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

ಡಿಸೆಂಬರ್ 24ರೊಳಗೆ ಎಲ್ಲಾ ಮರಾಠಿಗರಿಗೆ ಕುಂಬಿ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಸರ್ಕಾರದ ನಿಯೋಗದೊಂದಿಗೆ ಚರ್ಚೆ ನಡೆಸಿದ ಹಿನ್ನೆಲೆಯಲ್ಲಿ ಪಾಟೀಲ್ ಅವರು ನವೆಂಬರ್ 2 ರಂದು ತಮ್ಮ 9 ದಿನಗಳ ಉಪವಾಸ ಸತ್ಯಾಗ್ರಹವನ್ನು ಹಿಂಪಡೆದಿದ್ದರು.

ಮತ್ತಷ್ಟು ಓದಿ: ಮರಾಠಾ ಮೀಸಲಾತಿ: ಮಹಾರಾಷ್ಟ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ, ಇಲ್ಲಿದೆ ವಿವರ

ಈ ದಿನಾಂಕದೊಳಗೆ ಮರಾಠ ಸಮುದಾಯಕ್ಕೆ ಮೀಸಲಾತಿ ಸಿಗದಿದ್ದರೆ ಮತ್ತೆ ದೊಡ್ಡ ಚಳವಳಿ ಆರಂಭಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದೀಗ ಮನೋಜ್ ಜಾರಂಗೆ ಪಾಟೀಲ್ ಅವರು ಈ ಆಂದೋಲನವನ್ನು ಜಲ್ನಾದಲ್ಲಿ ಅಲ್ಲ ಮುಂಬೈನಲ್ಲಿ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ. ಡಿಸೆಂಬರ್ 25 ರಂದು ನಾವು ನಮ್ಮ ನಿಲುವನ್ನು ಪ್ರಕಟಿಸುತ್ತೇವೆ ಎಂದು ಹೇಳಿದ್ದಾರೆ.

ಇಲ್ಲಿಯವರೆಗೆ ಅಧಿಕಾರಕ್ಕೆ ಬಂದ ಎಲ್ಲಾ ಸರ್ಕಾರಗಳು ನಮ್ಮ ಜನರನ್ನು ಕೆಟ್ಟದಾಗಿ ನಡೆಸಿಕೊಂಡಿವೆ. ಮರಾಠ ಸಮಾಜಕ್ಕೆ ಸಂಬಂಧಿಸಿದ ಪುರಾವೆಗಳನ್ನು ಮರೆಮಾಡಲಾಗಿದೆ.

ಆದರೆ ಈಗ ಗುಪ್ತ ಸಾಕ್ಷಿಗಳು ಹೊರ ಬರುತ್ತಿವೆ. ಹೀಗಾಗಿ ಸರ್ಕಾರ ಹೆದರಿದೆ. ಈಗ ನಮಗೆ ಮೀಸಲಾತಿ ಸಿಗುವುದು ಖಚಿತ. ಇಲ್ಲವಾದರೆ 24ರ ನಂತರ ಮುಂಬೈನಲ್ಲಿ ಮುಂದಿನ ಆಂದೋಲನ ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ