ಲಕ್ನೋ: ಬಿರಿಯಾನಿ ಅಂಗಡಿಯ ಫ್ರೀಜರ್​ನಲ್ಲಿ ವ್ಯಕ್ತಿಯ ಶವ ಪತ್ತೆ

ಉತ್ತರ ಪ್ರದೇಶದ ಲಕ್ನೋದಲ್ಲಿರುವ ಬಿರಿಯಾನಿ ಅಂಗಡಿಯ ಫ್ರೀಜರ್​​ನಲ್ಲಿ 35 ವರ್ಷ ವ್ಯಕ್ತಿಯೊಬ್ಬರ ಶವ(Dead body )ಪತ್ತೆಯಾಗಿರುವ ಘಟನೆ ನಡೆದಿದೆ. ಬಕ್ಷಿ ಕಾ ತಾಲಾಬ್ ಪ್ರದೇಶದಲ್ಲಿರುವ ಅಂಡಗಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನ ವಿಜಯ್ ಪಾಲ್ ಎಂದು ಗುರುತಿಸಲಾಗಿದೆ. ಅವರು ಬಿಕೆಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕಿಶನ್​ಪುರ್ ಮಾಜ್ರಾ ನಿವಾಸಿಯಾಗಿದ್ದರು. ಅಂಗಡಿ ಮಾಲೀಕರಾದ ಶನಿ ರಾವತ್​ ಅವರ ತಂದೆ ಮೃತಪಟ್ಟ ಹಿನ್ನೆಲೆಯಲ್ಲಿ ಅಂಗಡಿಯು ಕಳೆದ ನಾಲ್ಕು ದಿನಗಳಿಂದ ಮುಚ್ಚಿತ್ತು.

ಲಕ್ನೋ: ಬಿರಿಯಾನಿ ಅಂಗಡಿಯ ಫ್ರೀಜರ್​ನಲ್ಲಿ ವ್ಯಕ್ತಿಯ ಶವ ಪತ್ತೆ
ಸಾವು
Image Credit source: iStock

Updated on: Mar 04, 2026 | 10:23 AM

ಲಕ್ನೋ, ಮಾರ್ಚ್​ 04: ಉತ್ತರ ಪ್ರದೇಶದ ಲಕ್ನೋದಲ್ಲಿರುವ ಬಿರಿಯಾನಿ ಅಂಗಡಿಯ ಫ್ರೀಜರ್​​ನಲ್ಲಿ 35 ವರ್ಷ ವ್ಯಕ್ತಿಯೊಬ್ಬರ ಶವ(Dead body )ಪತ್ತೆಯಾಗಿರುವ ಘಟನೆ ನಡೆದಿದೆ. ಬಕ್ಷಿ ಕಾ ತಾಲಾಬ್ ಪ್ರದೇಶದಲ್ಲಿರುವ ಅಂಡಗಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನ ವಿಜಯ್ ಪಾಲ್ ಎಂದು ಗುರುತಿಸಲಾಗಿದೆ. ಅವರು ಬಿಕೆಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕಿಶನ್​ಪುರ್ ಮಾಜ್ರಾ ನಿವಾಸಿಯಾಗಿದ್ದರು.

ಅಂಗಡಿ ಮಾಲೀಕರಾದ ಶನಿ ರಾವತ್​ ಅವರ ತಂದೆ ಮೃತಪಟ್ಟ ಹಿನ್ನೆಲೆಯಲ್ಲಿ ಅಂಗಡಿಯು ಕಳೆದ ನಾಲ್ಕು ದಿನಗಳಿಂದ ಮುಚ್ಚಿತ್ತು. ರಾವತ್ ಭಾನುವಾರ ಬೆಳಗ್ಗೆ ಔಟ್ಲೆಟ್ ಅನ್ನು ಮತ್ತೆ ತೆರೆಯಲು ರಾವತ್ ಬಂದಾಗ, ಫ್ರೀಜರ್ ಒಳಗೆ ಶವವನ್ನು ಕಂಡು ಆಘಾತಕ್ಕೊಳಗಾದರು. ಅವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಶವವನ್ನು ಫ್ರೀಜರ್‌ನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ದಿನಗೂಲಿ ಕೆಲಸಗಾರ ವಿಜಯ್ ಪಾಲ್ ಐದು ವರ್ಷಗಳ ಹಿಂದೆ ತನ್ನ ಹೆಂಡತಿಯಿಂದ ಬೇರ್ಪಟ್ಟ ನಂತರ ಒಂಟಿಯಾಗಿ ವಾಸಿಸುತ್ತಿದ್ದರು ಮತ್ತು ಮದ್ಯದ ಚಟಕ್ಕೆ ಒಳಗಾಗಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯಿಂದ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಎಡಿಸಿಪಿ (ಉತ್ತರ ವಲಯ) ರಿಷಭ್ ರನ್ವಾಲ್ ಹೇಳಿದ್ದಾರೆ.

ಮತ್ತಷ್ಟು ಓದಿ: ಮೂತ್ರ ವಿಸರ್ಜನೆಗೆಂದು ಹೋದ ವ್ಯಕ್ತಿಗೆ ಕಂಡದ್ದು ಮಹಿಳೆಯ ಶವ: ಡಿಸಿಪಿ ಹೇಳಿದ್ದೇನು?

ಮತ್ತೊಂದು ಘಟನೆ
ಕೊಡಲಿಯಿಂದ ತಂದೆಯನ್ನೇ ಕಡಿದು ಕೊಂದು, ಟ್ಯಾಂಕ್​ಗೆ ಎಸೆದು ನೆಮ್ಮದಿಯಿಂದ ಕುಳಿತು ಬಿರಿಯಾನಿ ತಿಂದ ಮಗ
ಹೋಳಿ(Holi)ಯ ಹಬ್ಬದ ಅಂಗವಾಗಿ ನಡೆಸುವ ಹೋಳಿ ಕಾ ದಹನ್ ಹಬ್ಬದ ರಾತ್ರಿ ನಡೆದ ಕೌಟುಂಬಿಕ ಕಲಹ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಛತ್ತೀಸ್​ಗಢದ ಅಂಬಿಕಾಪುರದಲ್ಲಿ ನಡೆದಿದೆ. ಅಲ್ಲಿ ವ್ಯಕ್ತಿಯೊಬ್ಬ ತಂದೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿ, ಮನೆಯ ಪಕ್ಕದಲ್ಲಿರುವ ನೀರಿನ ತೊಟ್ಟಿಯಲ್ಲಿ ಎಸೆದು ನಂತರ ಶಾಂತವಾಗಿ ಬಿರಿಯಾನಿ ತಿಂದು ಮಲಗಿದ್ದಾನೆ ಎನ್ನಲಾಗಿದೆ.

ಪೊಲೀಸರು ಅದೇ ರಾತ್ರಿ ಆರೋಪಿ ಮಗನನ್ನು ಬಂಧಿಸಿದ್ದಾರೆ.ಮೃತ ಪರಾಸ್ ಕರ್ಕೆಟ್ಟಾ ಬೇರೆ ಮನೆಯಲ್ಲಿ ವಾಸವಾಗಿದ್ದರು, ಅವರ ಮಗ ಪ್ರಭಾತ್ ಅಲಿಯಾಸ್ ಲೆಡಾ ಮನೆ ಕೆಲವೇ ಕೆಲವು ಮೀಟರ್ ದೂರದಲ್ಲಿತ್ತು. ಇಬ್ಬರ ಮನೆಗಳ ಮಧ್ಯೆ ಕೇವಲ ಎರಡು ಮನೆಗಳಿದ್ದವು.

ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಪ್ರಕಾರ, ಹೋಳಿಕಾ ದಹನ್ ದಿನ ರಾತ್ರಿ 11 ಗಂಟೆ ಸುಮಾರಿಗೆ ಪ್ರಭಾತ್ ಕುಡಿದ ಮತ್ತಿನಲ್ಲಿ ಮನೆಗೆ ಬಂದಿದ್ದ, ಅವರ ತಂದೆ ಬೈದಿದ್ದರು. ಬಳಿಕ ಇದು ತೀವ್ರ ವಾಗ್ವಾದಕ್ಕೆ ಕಾರಣವಾಯಿತು.

ಕೋಪದ ಭರದಲ್ಲಿ ಪ್ರಭಾತ್ ಮನೆಯೊಳಗೆ ಇಟ್ಟಿದ್ದ ಕೊಡಲಿಯನ್ನು ಎತ್ತಿಕೊಂಡು ತಂದೆಯ ತಲೆಗೆ ಹಲವು ಬಾರಿ ಹೊಡೆದಿದ್ದಾನೆ. ಪರಾಸ್​ಗೆ ತೀವ್ರ ಗಾಯಗಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಲೆ ಮಾಡಿದ ನಂತರ ಆರೋಪಿಯು ಶವವನ್ನು ಎಳೆದುಕೊಂಡು ಹೋಗಿ ಮನೆಯ ಪಕ್ಕದಲ್ಲಿರುವ ಸಣ್ಣ ನೀರಿನ ಟ್ಯಾಂಕ್​​ಗೆ ಎಸೆದಿದ್ದಾನೆ ಎಂದು ಹೇಳಲಾಗಿದೆ. ಶವವನ್ನು ವಿಲೇವಾರಿ ಮಾಡಿದ ನಂತರ ಹತ್ತಿರದ ಅಂಗಡಿಗೆ ಹೋಗಿ ಬಿರಿಯಾನಿ ಕೊಂಡು ಮನೆಗೆ ಬಂದು ತಿಂದು ಕಂಬಳಿ ಹೊದ್ದು ನೆಮ್ಮದಿಯಿಂದ ನಿದ್ರಿಸಿದ್ದಾನೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us