AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹಿತ ಮಹಿಳೆಗೆ ಮದುವೆಯ ಭರವಸೆ ನೀಡಿ ಸಮ್ಮತಿಯ ಲೈಂಗಿಕ ಸಂಪರ್ಕ ನಡೆಸಿದ್ದರೆ ಅದು ಅತ್ಯಾಚಾರ ಅಲ್ಲ: ಕೇರಳ ಹೈಕೋರ್ಟ್

ಅವಳು ವಿವಾಹಿತ ಮಹಿಳೆಯಾಗಿದ್ದು, ಅರ್ಜಿದಾರರೊಂದಿಗೆ ಕಾನೂನುಬದ್ಧ ವಿವಾಹ ಸಾಧ್ಯವಿಲ್ಲ ಎಂದು ಆಕೆಗೆ ತಿಳಿದಿತ್ತು. ಆರೋಪಿಯು ವಿವಾಹಿತ ಮಹಿಳೆಗೆ ತಾನು ಮದುವೆಯಾಗುವುದಾಗಿ ನೀಡಿದ ಭರವಸೆ ಕಾನೂನಿನಲ್ಲಿ ಜಾರಿಯಾಗುವುದಿಲ್ಲ

ವಿವಾಹಿತ ಮಹಿಳೆಗೆ ಮದುವೆಯ ಭರವಸೆ ನೀಡಿ ಸಮ್ಮತಿಯ ಲೈಂಗಿಕ ಸಂಪರ್ಕ ನಡೆಸಿದ್ದರೆ ಅದು ಅತ್ಯಾಚಾರ ಅಲ್ಲ: ಕೇರಳ ಹೈಕೋರ್ಟ್
ಕೇರಳ ಹೈಕೋರ್ಟ್
TV9 Web
| Edited By: |

Updated on: Nov 25, 2022 | 3:05 PM

Share

ಕೇರಳ ಹೈಕೋರ್ಟ್ (Kerala High Court) ಇತ್ತೀಚೆಗೆ 25 ವರ್ಷದ ಯುವಕನ ವಿರುದ್ಧದ ಅತ್ಯಾಚಾರ(Rape Case) ಪ್ರಕರಣವನ್ನು ರದ್ದುಗೊಳಿಸುವಾಗ ಈಗಾಗಲೇ ವಿವಾಹಿತೆಯಾಗಿರುವ ಮಹಿಳೆಯನ್ನು ಮದುವೆಯಾಗುವುದಾಗಿ ಪುರುಷ ಭರವಸೆ ನೀಡಿ ಸಮ್ಮತಿಯ ಲೈಂಗಿಕ ಸಂಪರ್ಕ ನಡೆಸಿದ್ದರೆ ಅದು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 376 ರ ಅಡಿಯಲ್ಲಿ ಅತ್ಯಾಚಾರ ಪ್ರಕರಣ ಆಗುವುದಿಲ್ಲ ಎಂದಿದೆ. ಕೊಲ್ಲಂನ ಪುನಲೂರು ನಿವಾಸಿ 25 ವರ್ಷದ ಟಿನೋ ತಂಗಚ್ಚನ್ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 417 (ವಂಚನೆ) ಮತ್ತು 493 (ಲೈಂಗಿಕತೆಗೆ ಮೋಸದ ಪ್ರಚೋದನೆ) ಅಡಿಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ನವೆಂಬರ್ 22 ರಂದು ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರ ಪೀಠವು ರದ್ದುಗೊಳಿಸಿತು.ತಂಗಚ್ಚನ್ ಮದುವೆಯ ಸುಳ್ಳು ಭರವಸೆ ನೀಡಿದ ನಂತರ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ದೌರ್ಜನ್ಯಕ್ಕೊಳಗಾಗಿದ್ದಾರೆ ಎಂದು ಹೇಳಲಾದ ಮಹಿಳೆಗೆ ಮದುವೆಯಾಗಿದ್ದು ಆಕೆ ಪತಿಯಿಂದ ಬೇರ್ಪಟ್ಟಿದ್ದಾರೆ. ಆಕೆಯ ಮೇಲೆ ತಂಗಚ್ಚನ್ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ ಎಂದು ಪ್ರಕರಣದಲ್ಲಿ ತಿಳಿಸಲಾಗಿದೆ.ಸಂತ್ರಸ್ತೆ ತನ್ನ ಪ್ರೇಮಿಯೊಂದಿಗೆ ಸ್ವ ಇಚ್ಛೆಯಿಂದ ಲೈಂಗಿಕ ಸಂಬಂಧ ಹೊಂದಿದ್ದಾಳೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ.

“ಅವಳು ವಿವಾಹಿತ ಮಹಿಳೆಯಾಗಿದ್ದು, ಅರ್ಜಿದಾರರೊಂದಿಗೆ ಕಾನೂನುಬದ್ಧ ವಿವಾಹ ಸಾಧ್ಯವಿಲ್ಲ ಎಂದು ಆಕೆಗೆ ತಿಳಿದಿತ್ತು. ಆರೋಪಿಯು ವಿವಾಹಿತ ಮಹಿಳೆಗೆ ತಾನು ಮದುವೆಯಾಗುವುದಾಗಿ ನೀಡಿದ ಭರವಸೆ ಕಾನೂನಿನಲ್ಲಿ ಜಾರಿಯಾಗುವುದಿಲ್ಲ. ಅಂತಹ ಜಾರಿಗೊಳಿಸಲಾಗದ ಮತ್ತು ಕಾನೂನುಬಾಹಿರ ಭರವಸೆಯು ಐಪಿಸಿಯ ಸೆಕ್ಷನ್ 376 ರ ಅಡಿಯಲ್ಲಿ ಕಾನೂನು ಕ್ರಮಕ್ಕೆ ಆಧಾರವಾಗುವುದಿಲ್ಲ. ಇಲ್ಲಿ, ಮದುವೆಯಾಗುವ ಭರವಸೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ, ಏಕೆಂದರೆ ಸಂತ್ರಸ್ತೆ ವಿವಾಹಿತ ಮಹಿಳೆ ಮತ್ತು ಕಾನೂನಿನ ಅಡಿಯಲ್ಲಿ ಅರ್ಜಿದಾರರೊಂದಿಗೆ ಕಾನೂನುಬದ್ಧ ವಿವಾಹ ಸಾಧ್ಯವಿಲ್ಲ ಎಂದು ಅವಳು ತಿಳಿದಿದ್ದಳು. ಆದ್ದರಿಂದ, ಐಪಿಸಿಯ ಸೆಕ್ಷನ್ 376 ಇದಕ್ಕೆ ಅನ್ವಯವಾಗುವುದಿಲ್ಲ. ಐಪಿಸಿಯ ಸೆಕ್ಷನ್ 417 ಮತ್ತು 493 ರ ವಿಧಿಸಲು ದಾಖಲೆಯಲ್ಲಿ ಏನೂ ಇಲ್ಲ. ವಂಚನೆಯ ಅಪರಾಧಕ್ಕೆ ಯಾವುದೇ ಪುರಾವೆ ಇಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಲೈಂಗಿಕ ಸಂಭೋಗವು ಸಹಮತದ ಸ್ವರೂಪದ್ದಾಗಿದೆ ಎಂಬುದು ಮೊದಲ ಮಾಹಿತಿ ಹೇಳಿಕೆಯಿಂದ ಸ್ಪಷ್ಟವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಅರ್ಜಿದಾರರು ನೀಡಿದ ವಿವಾಹದ ಭರವಸೆಯಿಂದ ಮಹಿಳೆ ಲೈಂಗಿಕ ಸಂಪರ್ಕಕ್ಕೆ ಒಪ್ಪಿಗೆ ನೀಡಿದ್ದಾಳೆ. ಪುರುಷನು ಮಹಿಳೆಯನ್ನು ಮದುವೆಯಾಗುವ ತನ್ನ ವಾಗ್ದಾನವನ್ನು ಹಿಂತೆಗೆದುಕೊಂಡರೆ, ಅವರು ಮಾಡಿದ ಸಮ್ಮತಿಯ ಲೈಂಗಿಕತೆಯನ್ನು IPC ಯ ಸೆಕ್ಷನ್ 376 ರ ಅಡಿಯಲ್ಲಿ ಅತ್ಯಾಚಾರದ ಅಪರಾಧವಾಗುವುದಿಲ್ಲ ಎಂದು ತೀರ್ಮಾನಿಸಲಾಗಿದೆ. ಅಂತಹ ಲೈಂಗಿಕ ಕ್ರಿಯೆಗೆ ಅವರು ಸುಳ್ಳು ಭರವಸೆ ನೀಡುವ ಮೂಲಕ ಒಪ್ಪಿಗೆಯನ್ನು ಪಡೆದಿದ್ದಾರೆ. ಮದುವೆಯಾಗುವ ಯಾವುದೇ ಉದ್ದೇಶವಿಲ್ಲದೆ ಆತ ಸುಳ್ಳು ಭರವಸೆ ನೀಡಿದ್ದ ಎಂದು ಆದೇಶದಲ್ಲಿ ಹೇಳಿದೆ.

ಆರೋಪಿ ಮತ್ತು ಸಂತ್ರಸ್ತೆ ಆಸ್ಟ್ರೇಲಿಯಾದಲ್ಲಿ ಫೇಸ್‌ಬುಕ್ ಮೂಲಕ ಭೇಟಿಯಾದರು. ಅವರ ನಡುವಿನ ಸಂಬಂಧವು ಪ್ರೇಮವಾಗಿ ಬೆಳೆದು ಇಬ್ಬರೂ ಮದುವೆಯಾಗಲು ನಿರ್ಧರಿಸಿದರು. ಆದರೆ, ಮದುವೆ ನಡೆಯಲಿಲ್ಲ. ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಮಹಿಳೆಯ ಪ್ರಕಾರ, ಅರ್ಜಿದಾರರು ತನ್ನನ್ನು ಮದುವೆಯಾಗುವುದಾಗಿ ನೀಡಿದ ಭರವಸೆ ನೀಡಿದ್ದರಿಂದ ಲೈಂಗಿಕ ಸಂಪರ್ಕಕ್ಕೆ ಒಪ್ಪಿಕೊಂಡೆ ಎಂದು ಹೇಳಿದ್ದಾರೆ.

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ