AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್​ಸುಖ್ ಹಿರೇನ್ ಪ್ರಕರಣ ಬಗೆಹರಿಸಿದ್ದೇವೆ; ಅನುಮಾನಗಳಿಗೆ ಕಾರಣವಾದ ಮಹಾರಾಷ್ಟ್ರ ATS ಹೇಳಿಕೆ

ರಾಷ್ಟ್ರೀಯ ತನಿಖಾ ಸಂಸ್ಥೆಗೆ ಪ್ರಕರಣವನ್ನು ಹಸ್ತಾಂತರಿಸಿದ ಮರುದಿನವೇ ಎಟಿಎಸ್ ಪ್ರಕರಣವನ್ನು ಬಗೆಹರಿಸುವುದಾಗಿ ಪ್ರತಿಪಾದಿಸಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮನ್​ಸುಖ್ ಹಿರೇನ್ ಪ್ರಕರಣ ಬಗೆಹರಿಸಿದ್ದೇವೆ; ಅನುಮಾನಗಳಿಗೆ ಕಾರಣವಾದ ಮಹಾರಾಷ್ಟ್ರ ATS ಹೇಳಿಕೆ
ಸಚಿನ್ ವಾಜೆ
Follow us
guruganesh bhat
|

Updated on: Mar 22, 2021 | 11:33 AM

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಕಾರಿನಲ್ಲಿ ಸ್ಫೋಟಕಗಳು ಪತ್ತೆಯಾದ ಪ್ರಕರಣದ ಹಿನ್ನೆಲೆಯಲ್ಲಿ ಸಾವನ್ನಪ್ಪಿದ್ದ ಮನ್​ಸುಖ್ ಹಿರೇನ್ ಪ್ರಕರಣ ಮುಕ್ತಾಯವಾಗಿದೆ ಎಂದು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ATS) ಪ್ರತಿಪಾದಿಸಿದೆ. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸಲು ಕೇಂದ್ರ ಸರ್ಕಾರ ಆದೇಶಿಸಿದ ಮರುದಿನ ಎಟಿಎಸ್​ ಡಿಐಜಿ ಶಿವ್​ದೀಪ್ ಲಂಡೆ, ಮನ್​ಸುಖ್ ಹಿರೇನ್ ಪ್ರಕರಣದ ತನಿಖೆಯಲ್ಲಿ ಹಗಲಿರುಳು ಸಹಕರಿಸಿದ ಎಲ್ಲ ಅಧಿಕಾರಿಗಳಿಗೆ ನನ್ನ ವಂದನೆಗಳು. ಈ ನಿಗೂಢ ಪ್ರಕರಣವನ್ನು ನಾವು ಈಗಾಗಲೇ ಬಗೆಹರಿಸಿದ್ದೇವೆ. ಇದು ನನ್ನ ವೃತ್ತಿ ಜೀವನದಲ್ಲೇ ಒಂದು ಪ್ರಮುಖ ಪ್ರಕರಣ ಎಂದು ಶಿವ್​ದೀಪ್ ಲಂಡೆ ತಿಳಿಸಿದ್ದಾರೆ. (Mansukh Hiren death case solved claimed Maha ATS)

ಈಗಾಗಲೇ ಅಮಾನತು ಆಗಿರುವ ಮುಂಬೈ ಪೊಲೀಸ್ ಅಧಿಕಾರಿ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದು, ಉಳಿದ ಇಬ್ಬರು ಆರೋಪಿಗಳಾದ ಪೊಲೀಸ್ ಅಧಿಕಾರಿ ವಿನಾಯಕ್ ಶಿಂಧೆ ಮತ್ತು ಬುಕ್ಕಿ ನರೇಶ್ ಗೌರ್ ಅವರುಗಳನ್ನು ಬಂಧಿಸಲಾಗಿದೆ. ಈ ಮೂವರೂ ಕೂಡಿಕೊಂಡು ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಇರಿಸಿದ ಪ್ರಕರಣದ ಹಿಂದಿದ್ದಾರೆ ಎಂದು ಎಟಿಎಸ್​ ತಿಳಿಸಿದೆ.

ಕೇವಲ ಸಸ್ಪೆಂಡ್ ಆಗಿರುವ ಸಚಿನ್ ವಾಜೆ ಮಾತ್ರ ಈ ಪ್ರಕರಣದ ಹಿಂದಿದ್ದಾರೆಯೇ?

ಆದರೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಪ್ರಕರಣವನ್ನು ಹಸ್ತಾಂತರಿಸಿದ ಮರುದಿನವೇ ಎಟಿಎಸ್ ಪ್ರಕರಣವನ್ನು ಬಗೆಹರಿಸುವುದಾಗಿ ಪ್ರತಿಪಾದಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೇವಲ ಸಸ್ಪೆಂಡ್ ಆಗಿರುವ ಸಚಿನ್ ವಾಜೆ ಮತ್ತು ಇನ್ನುಳಿದ ಇಬ್ಬರು ಮಾತ್ರ ಈ ಪ್ರಕರಣದ ಹಿಂದಿದ್ದಾರೆಯೇ? ಗೃಹ ಸಚಿವ ಅನಿಲ್ ದೇಶ್​ಮುಖ್ ಮೇಲೆ ಕೇಳಿಬಂದಿರುವ 100 ಕೋಟಿ ಭೃಷ್ಟಾಚಾರ ಆರೋಪವನ್ನೇ ಮುನ್ನೆಲೆಗೆ ತಂದು ಸ್ಫೋಟಕ ಪ್ರಕರಣವನ್ನು ಹಿನ್ನೆಲೆಗೆ ತಳ್ಳುವ ಪ್ರಯತ್ನ ನಡೆದಿದೆಯೇ ಎಂಬ ಅನುಮಾನಗಳು ಬಲಗೊಳ್ಳುತ್ತಿವೆ.

ಏನಿದು ಪ್ರಕರಣ?

ಮಾರ್ಚ್ 5ರಂದು ಮನ್​ಸುಖ್ ಹಿರೇನ್ ಅವರ ಮೃತದೇಹ ಪತ್ತೆಯಾಗಿತ್ತು. ಆದರೆ ಮೃತದೇಹ ಪತ್ತೆಯಾದ ಕೆಲ ಗಂಟೆಗಳ ನಂತರ  ಮನ್​ಸುಖ್​ ಹಿರೇನ್ ಕಾರಿನ ನಿಜವಾದ ಮಾಲೀಕರಲ್ಲ ಎಂಬ ಮಾತು ಕೇಳಿಬಂದಿತ್ತು.  ಕಾರಿನ ನೈಜ ಮಾಲೀಕ ಸ್ಯಾಮ್ ಮ್ಯೂಟನ್, ಮನ್​ಸುಖ್ ಹಿರೇನ್ ಅವರಿಗೆ ಕಾರಿನ  ನಿರ್ವಹಣೆಗಾಗಿ ಕಾರನ್ನು ನೀಡಿದ್ದರು. ಆದರೆ ಸ್ಯಾಮ್ ಮ್ಯೂಟನ್, ನೀಡಬೇಕಿದ್ದ ಹಣವನ್ನು ಪಾವತಿಸದಿದ್ದ ಕಾರಣ ಮನ್​ಸುಖ್ ಹಿರೇನ್ ಅವರೇ ಕಾರನ್ನು ಇಟ್ಟುಕೊಂಡಿದ್ದರು ಎಂದೂ ಸಹ ವರದಿಯಾಗಿತ್ತು.

ಆದರೆ, ಮನ್​ಸುಖ್ ಹಿರೇನ್ ಪತ್ನಿ ನಾಲ್ಕು ತಿಂಗಳ ಅವಧಿಗೆ ಅಂದರೆ ಫೆಬ್ರವರಿ 5ರ ವರೆಗೆ ಕಾರ್​ನ್ನು ಪೊಲೀಸರಿಗೆ ನೀಡಿರುವುದಾಗಿ ತಿಳಿಸಿದ್ದರು. ಕೆಲ ದಿನಗಳ ಬಳಿಕ ಕಾರ್ ಕಳವಾಗಿತ್ತು. ಮನ್​ಸುಖ್ ಹಿರೇನ್ ಮೃತಪಟ್ಟಿರುವ ಪ್ರಕರಣದಲ್ಲಿ ಸಚಿನ್ ವಾಜ್ ಪಾತ್ರ ಇದೆ ಎಂದು ಪತ್ನಿ ಆರೋಪಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (NIA) ಹಾಗೂ ಭಯೋತ್ಪಾದಕ ವಿರೋಧಿ ದಳ (ATS) ತನಿಖೆಯಲ್ಲಿ ತೊಡಗಿದೆ.

ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಕಾರಿನಲ್ಲಿ ಜಿಲೆಟಿನ್ ಕಡ್ಡಿಗಳ ಜತೆ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿಯವರಿಗೆ ಬೆದರಿಕೆಯೊಡ್ಡಿರುವ ಪತ್ರವೊಂದು ಲಭಿಸಿತ್ತು. ಈ ಕಾರಿನಲ್ಲಿ ಸ್ಫೋಟಕವನ್ನು ಅಸೆಂಬಲ್ ಮಾಡಿಲ್ಲ, ಮುಂದಿನ ಬಾರಿ ಇದೇ ರೀತಿಯಲ್ಲಿರುವುದಿಲ್ಲ ಎಂದು ಪತ್ರದಲ್ಲಿ ಬರೆದಿತ್ತು. ಈ ಪತ್ರ ಹಿಂದಿಯಿಂದ ಇಂಗ್ಲಿಷಿಗೆ ತರ್ಜುಮೆ ಮಾಡಿ ಬರೆದದ್ದಾಗಿದ್ದು, ಹಲವಾರು ಅಕ್ಷರ ದೋಷಗಳಿದ್ದವು. ಪತ್ರವನ್ನು ನೋಡಿದರೆ ಪತ್ರ ಬರೆದ ವ್ಯಕ್ತಿಗೆ ಸರಿಯಾಗಿ ಬರೆಯಲು ಬರುವುದಿಲ್ಲ ಅಥವಾ ಬರೆಯಲು ಗೊತ್ತಿಲ್ಲ ಎಂಬಂತೆ ನಟಿಸಿದ್ದಾಗಿರಬಹುದು ಎಂದು ಮುಂಬೈ ಪೊಲೀಸರು ಹೇಳಿರುವುದಾಗಿ ವರದಿಯಾಗಿತ್ತು.

ಗಾಂದೇವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವಾಹನ ಪತ್ತೆಯಾಗಿತ್ತು. ಪೊಲೀಸರಿಗೆ ಮಾಹಿತಿ ಲಭಿಸಿದ ಕೂಡಲೇ ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳ ಮತ್ತು ಇತರ ಪೊಲೀಸ್ ತಂಡಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದವು. ಕಾರನ್ನು ತಪಾಸಣೆಗೊಳಪಡಿಸಿದಾಗ ಅದರೊಳಗೆ ಜಿಲೆಟಿನ್ ಪತ್ತೆಯಾಗಿದೆ. ಅದು ಬಿಡಿ ಬಿಡಿಯಾಗಿಯೇ ಇದ್ದು ಸ್ಫೋಟಕವನ್ನು ಸಿದ್ಧಪಡಿಸಿರಲಿಲ್ಲ. ಈ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮುಂಬೈ ಪೊಲೀಸ್ ವಕ್ತಾರ, ಉಪ ಪೊಲೀಸ್ ಆಯುಕ್ತ ಚೈತನ್ಯ ಎಸ್ ಹೇಳಿದ್ದರು.

ಇದನ್ನೂ ಓದಿ: ಗೃಹ ಸಚಿವ ಅನಿಲ್ ದೇಶ್​ಮುಖ್ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸಲು ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು; ಉದ್ಧವ್ ಠಾಕ್ರೆಗೆ ಪತ್ರ ಬರೆದ ಪರಮ್​ವೀರ್ ಸಿಂಗ್

ಸಚಿನ್ ವಾಜೆ ಮರುನೇಮಕಕ್ಕೆ ಹಿಂದಿನಿಂದಲೂ ಉದ್ಧವ್ ಠಾಕ್ರೆ ಒತ್ತಾಯವಿತ್ತು: ದೇವೇಂದ್ರ ಫಡ್ನವಿಸ್

ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್