AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯಪೇಟ್​ ಕಬಡ್ಡಿ ಪಂದ್ಯಾವಳಿ ಉದ್ಘಾಟನೆಗೂ ಮೊದಲು ಅವಘಡ.. ಪ್ರೇಕ್ಷಕರ ಗ್ಯಾಲರಿ ಕುಸಿದು ನೂರಾರು ಜನರಿಗೆ ಗಾಯ

ಅಲ್ಲಿ ಕಬಡ್ಡಿ ಪಂದ್ಯಾವಳಿ ನಡೀತಿತ್ತು. ಜನರು ಖುಷಿ ಖುಷಿಯಾಗಿ ಕಬಡ್ಡಿ ನೋಡ್ತಾ ಇದ್ರು. ಜೋಷ್ ಕೂಡ ಜಾಸ್ತಿನೇ ಇತ್ತು. ಆದರೆ ದಿಢೀರ್ ಅಂತಾ ಸಂಭ್ರಮವೆಲ್ಲಾ ಮಾಯವಾಗಿ ಸೂತಕದ ಛಾಯೆ ಆವರಿಸಿತು. ಪ್ರೇಕ್ಷಕರಿದ್ದ ಗ್ಯಾಲರಿ ಕುಸಿದು ನೂರಾರು ಜನ ಗಾಯಗೊಂಡರು.

ಸೂರ್ಯಪೇಟ್​ ಕಬಡ್ಡಿ ಪಂದ್ಯಾವಳಿ ಉದ್ಘಾಟನೆಗೂ ಮೊದಲು ಅವಘಡ.. ಪ್ರೇಕ್ಷಕರ ಗ್ಯಾಲರಿ ಕುಸಿದು ನೂರಾರು ಜನರಿಗೆ ಗಾಯ
ಸೂರ್ಯಪೇಟ್​ಯಲ್ಲಿ ಪ್ರೇಕ್ಷಕರ ಗ್ಯಾಲರಿ ಕುಸಿದು ನೂರಾರು ಜನರಿಗೆ ಗಾಯ
Follow us
ಆಯೇಷಾ ಬಾನು
|

Updated on: Mar 23, 2021 | 6:54 AM

ತೆಲಂಗಾಣದ ಸೂರ್ಯಪೇಟ್​ಯಲ್ಲಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿ ಉದ್ಘಾಟನೆಗೂ ಮೊದಲು ಭೀಕರ, ಭಯಾನಕ ಅವಘಡ ಸಂಭವಿಸಿದೆ. ಸೂರ್ಯಪೇಟ್ ಜಿಲ್ಲೆಯಲ್ಲಿ ಆಯೋಜಿಸಿದ್ದ 47ನೇ ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯ ಉದ್ಘಾಟನೆ ವೇಳೆ ಅವಘಡ ನಡೆದಿದೆ. ಪ್ರೇಕ್ಷಕರು ತುಂಬಿ ತುಳುಕುತ್ತಿದ್ದ ಗ್ಯಾಲರಿ ದಿಢೀರ್ ಕುಸಿದು ಬಿದ್ದಿದೆ. ತಕ್ಷಣ ನೂರಾರು ಜನರು ಒಬ್ಬರ ಮೇಲೊಬ್ಬರು ಬಿದ್ದಿದ್ದು, ಸಾಕಷ್ಟು ಜನರಿಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನೆಲ್ಲಾ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಕೂರಿಸಿದ್ದೇ ತಪ್ಪಾಯ್ತಾ? ಹೌದು ಇಂತಹದ್ದೊಂದು ಆರೋಪ ಕೂಡ ಇದೀಗ ಕೇಳಿಬಂದಿದೆ. ಕಬಡ್ಡಿ ಪಂದ್ಯ ನಡೆಯುತ್ತಿದ್ದ ಗ್ಯಾಲರಿಯಲ್ಲಿ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಕೂರಿಸಿದ್ದೇ ಕಾರಣ ಎನ್ನಲಾಗ್ತಿದೆ. 1500ಕ್ಕೂ ಹೆಚ್ಚು ಜನ ಗ್ಯಾಲರಿಗೆ ಹತ್ತಿದ್ದು, ಒಟ್ಟು 3 ಗ್ಯಾಲರಿ ವ್ಯವಸ್ಥೆ ಮಾಡಲಾಗಿತ್ತಾದರೂ ಈ ಪೈಕಿ 1 ಗ್ಯಾಲರಿ ಮಾತ್ರ ಕುಸಿದಿದೆ. ಕಬಡ್ಡಿ ಪಂದ್ಯಾವಳಿಗೆ ಚಾಲನೆ ಸಿಗುವ ಕೆಲವೇ ಕ್ಷಣಗಳ ಮುನ್ನ ಈ ದುರ್ಘಟನೆ ಸಂಭವಿಸಿದೆ.

ಒಟ್ನಲ್ಲಿ ಖುಷಿ ಖುಷಿಯಾಗಿ ಕಬಡ್ಡಿ ಮ್ಯಾಚ್ ನೋಡಲು ಬಂದವರು ಆಸ್ಪತ್ರೆಯಲ್ಲಿ ನರಳಾಡುವಂತಾಗಿದೆ. ಇನ್ನು ಈ ಘಟನೆ ಬಗ್ಗೆ ಪೊಲೀಸರು ಕೂಡ ತನಿಖೆ ನಡೆಸ್ತಿದ್ದಾರೆ. ಅದೇನೆ ಇರ್ಲಿ, ಸ್ಪರ್ಧೆ ಆರಂಭದಲ್ಲೇ ಸಂಭವಿಸಿರುವ ಈ ದುರ್ಘಟನೆ ಆಟಗಾರರಿಗೂ ಆಘಾತ ತಂದಿದೆ.

ಇದನ್ನೂ ಓದಿ: ಚಿತ್ರದುರ್ಗ: ಜವನಗೊಂಡನಹಳ್ಳಿ ಬಳಿ ಸರಣಿ ಅಪಘಾತ, ದಂಪತಿ ಸೇರಿ ಮೂವರ ಸಾವು

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ