AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯಪೇಟ್​ ಕಬಡ್ಡಿ ಪಂದ್ಯಾವಳಿ ಉದ್ಘಾಟನೆಗೂ ಮೊದಲು ಅವಘಡ.. ಪ್ರೇಕ್ಷಕರ ಗ್ಯಾಲರಿ ಕುಸಿದು ನೂರಾರು ಜನರಿಗೆ ಗಾಯ

ಅಲ್ಲಿ ಕಬಡ್ಡಿ ಪಂದ್ಯಾವಳಿ ನಡೀತಿತ್ತು. ಜನರು ಖುಷಿ ಖುಷಿಯಾಗಿ ಕಬಡ್ಡಿ ನೋಡ್ತಾ ಇದ್ರು. ಜೋಷ್ ಕೂಡ ಜಾಸ್ತಿನೇ ಇತ್ತು. ಆದರೆ ದಿಢೀರ್ ಅಂತಾ ಸಂಭ್ರಮವೆಲ್ಲಾ ಮಾಯವಾಗಿ ಸೂತಕದ ಛಾಯೆ ಆವರಿಸಿತು. ಪ್ರೇಕ್ಷಕರಿದ್ದ ಗ್ಯಾಲರಿ ಕುಸಿದು ನೂರಾರು ಜನ ಗಾಯಗೊಂಡರು.

ಸೂರ್ಯಪೇಟ್​ ಕಬಡ್ಡಿ ಪಂದ್ಯಾವಳಿ ಉದ್ಘಾಟನೆಗೂ ಮೊದಲು ಅವಘಡ.. ಪ್ರೇಕ್ಷಕರ ಗ್ಯಾಲರಿ ಕುಸಿದು ನೂರಾರು ಜನರಿಗೆ ಗಾಯ
ಸೂರ್ಯಪೇಟ್​ಯಲ್ಲಿ ಪ್ರೇಕ್ಷಕರ ಗ್ಯಾಲರಿ ಕುಸಿದು ನೂರಾರು ಜನರಿಗೆ ಗಾಯ
ಆಯೇಷಾ ಬಾನು
ಆಯೇಷಾ ಬಾನು|

Updated on: Mar 23, 2021 | 6:54 AM

Share

ತೆಲಂಗಾಣದ ಸೂರ್ಯಪೇಟ್​ಯಲ್ಲಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿ ಉದ್ಘಾಟನೆಗೂ ಮೊದಲು ಭೀಕರ, ಭಯಾನಕ ಅವಘಡ ಸಂಭವಿಸಿದೆ. ಸೂರ್ಯಪೇಟ್ ಜಿಲ್ಲೆಯಲ್ಲಿ ಆಯೋಜಿಸಿದ್ದ 47ನೇ ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯ ಉದ್ಘಾಟನೆ ವೇಳೆ ಅವಘಡ ನಡೆದಿದೆ. ಪ್ರೇಕ್ಷಕರು ತುಂಬಿ ತುಳುಕುತ್ತಿದ್ದ ಗ್ಯಾಲರಿ ದಿಢೀರ್ ಕುಸಿದು ಬಿದ್ದಿದೆ. ತಕ್ಷಣ ನೂರಾರು ಜನರು ಒಬ್ಬರ ಮೇಲೊಬ್ಬರು ಬಿದ್ದಿದ್ದು, ಸಾಕಷ್ಟು ಜನರಿಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನೆಲ್ಲಾ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಕೂರಿಸಿದ್ದೇ ತಪ್ಪಾಯ್ತಾ? ಹೌದು ಇಂತಹದ್ದೊಂದು ಆರೋಪ ಕೂಡ ಇದೀಗ ಕೇಳಿಬಂದಿದೆ. ಕಬಡ್ಡಿ ಪಂದ್ಯ ನಡೆಯುತ್ತಿದ್ದ ಗ್ಯಾಲರಿಯಲ್ಲಿ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಕೂರಿಸಿದ್ದೇ ಕಾರಣ ಎನ್ನಲಾಗ್ತಿದೆ. 1500ಕ್ಕೂ ಹೆಚ್ಚು ಜನ ಗ್ಯಾಲರಿಗೆ ಹತ್ತಿದ್ದು, ಒಟ್ಟು 3 ಗ್ಯಾಲರಿ ವ್ಯವಸ್ಥೆ ಮಾಡಲಾಗಿತ್ತಾದರೂ ಈ ಪೈಕಿ 1 ಗ್ಯಾಲರಿ ಮಾತ್ರ ಕುಸಿದಿದೆ. ಕಬಡ್ಡಿ ಪಂದ್ಯಾವಳಿಗೆ ಚಾಲನೆ ಸಿಗುವ ಕೆಲವೇ ಕ್ಷಣಗಳ ಮುನ್ನ ಈ ದುರ್ಘಟನೆ ಸಂಭವಿಸಿದೆ.

ಒಟ್ನಲ್ಲಿ ಖುಷಿ ಖುಷಿಯಾಗಿ ಕಬಡ್ಡಿ ಮ್ಯಾಚ್ ನೋಡಲು ಬಂದವರು ಆಸ್ಪತ್ರೆಯಲ್ಲಿ ನರಳಾಡುವಂತಾಗಿದೆ. ಇನ್ನು ಈ ಘಟನೆ ಬಗ್ಗೆ ಪೊಲೀಸರು ಕೂಡ ತನಿಖೆ ನಡೆಸ್ತಿದ್ದಾರೆ. ಅದೇನೆ ಇರ್ಲಿ, ಸ್ಪರ್ಧೆ ಆರಂಭದಲ್ಲೇ ಸಂಭವಿಸಿರುವ ಈ ದುರ್ಘಟನೆ ಆಟಗಾರರಿಗೂ ಆಘಾತ ತಂದಿದೆ.

ಇದನ್ನೂ ಓದಿ: ಚಿತ್ರದುರ್ಗ: ಜವನಗೊಂಡನಹಳ್ಳಿ ಬಳಿ ಸರಣಿ ಅಪಘಾತ, ದಂಪತಿ ಸೇರಿ ಮೂವರ ಸಾವು

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು