AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಚುನಾವಣೆ ಹಿನ್ನೆಲೆ ಎಎಪಿ, ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್​ ಸೇರ್ಪಡೆ

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಗುರುವಾರ ದೆಹಲಿಯಲ್ಲಿ ಬಿಜೆಪಿ ಮತ್ತು ಎಎಪಿಯ ಹತ್ತಕ್ಕೂ ಹೆಚ್ಚು ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.ಪಕ್ಷದ ಪ್ರಗತಿಪರ ನೀತಿಗಳು ಮತ್ತು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರ ಪ್ರಬಲ ನಾಯಕತ್ವದಿಂದ ಪ್ರೇರಿತರಾಗಿ ಬಿಜೆಪಿ ಮತ್ತು ಎಎಪಿ ಎರಡೂ ನಾಯಕರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್‌ಗೆ ಪರಿವರ್ತನೆಯಾಗುತ್ತಿದ್ದಾರೆ ಎಂದು ಯಾದವ್ ಹೇಳಿದರು.

ದೆಹಲಿ ಚುನಾವಣೆ ಹಿನ್ನೆಲೆ ಎಎಪಿ, ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್​ ಸೇರ್ಪಡೆ
Image Credit source: IndiaToday
ನಯನಾ ರಾಜೀವ್
|

Updated on: Aug 30, 2024 | 9:05 AM

Share

ಮುಂಬರಲಿರುವ ದೆಹಲಿ ವಿಧಾನಸಭಾ ಚುನಾವಣೆಗೂ ಮುನ್ನ ದೆಹಲಿ ರಾಜಕಾರಣದಲ್ಲಿ ಹಲವು ಬದಲಾವಣೆಗಳು ನಡೆಯುತ್ತಿವೆ. ದೆಹಲಿಯಲ್ಲಿ ಬಿಜೆಪಿ ಮತ್ತು ಆಮ್​ ಆದ್ಮಿ ಪಕ್ಷದ ಹತ್ತಕ್ಕೂ ಹೆಚ್ಚು ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಕಾಂಗ್ರೆಸ್‌ನ ದೆಹಲಿ ಘಟಕದ ಪ್ರಧಾನ ಕಛೇರಿ ರಾಜೀವ್ ಭವನದಲ್ಲಿ ನಡೆದ ಸಮಾರಂಭದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕರು ಔಪಚಾರಿಕವಾಗಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು ಮತ್ತು ಅವರನ್ನು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದ್ರ ಯಾದವ್ ಸ್ವಾಗತಿಸಿದರು.

ಪಕ್ಷದ ಪ್ರಗತಿಪರ ನೀತಿಗಳು ಮತ್ತು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರ ಪ್ರಬಲ ನಾಯಕತ್ವದಿಂದ ಪ್ರೇರಿತರಾಗಿ ಬಿಜೆಪಿ ಮತ್ತು ಎಎಪಿ ಎರಡೂ ನಾಯಕರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್‌ಗೆ ಪರಿವರ್ತನೆಯಾಗುತ್ತಿದ್ದಾರೆ ಎಂದು ಯಾದವ್ ಹೇಳಿದರು.

ಯಾದವ್ ಅವರು ಮಾಜಿ ಕೌನ್ಸಿಲರ್ ಮತ್ತು ತಿಮಾರ್‌ಪುರದ ಶಾಸಕ ಅಭ್ಯರ್ಥಿ ಅಮರಲತಾ ಸಾಂಗ್ವಾನ್ ಅವರನ್ನು ವಿಶೇಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದರು.

ಮತ್ತಷ್ಟು ಓದಿ: ಪಕ್ಷ, ಜಾತಿ ಮೀರಿದ ಪ್ರೀತಿ: ಮಕ್ಕಳ ಅಂತರ್ಜಾತಿ ಪ್ರೀತಿಗೆ ಒಪ್ಪಿಗೆ, ಬಿಜೆಪಿ-ಕಾಂಗ್ರೆಸ್ ನಾಯಕರು ಈಗ ಬೀಗರು

ಮಾಜಿ ಶಾಸಕ ಅನಿಲ್ ಭಾರದ್ವಾಜ್, ಸಂವಹನ ವಿಭಾಗದ ಅಧ್ಯಕ್ಷ ಕುನ್ವರ್ ಕರಣ್ ಸಿಂಗ್ ಮತ್ತು ಇತರ ಹಿರಿಯ ದೆಹಲಿ ಕಾಂಗ್ರೆಸ್ ನಾಯಕರು ಸೇರಿದಂತೆ ಹಲವಾರು ಹಿರಿಯ ಕಾಂಗ್ರೆಸ್ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಮುಂಬರುವ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಎಎಪಿ ಸರ್ಕಾರವನ್ನು ಗುರಿಯಾಗಿಸಿಕೊಂಡು ತನ್ನ ಮತದಾರರ ನೆಲೆಯನ್ನು ಮರಳಿ ಪಡೆಯಲು ಶ್ರಮಿಸುತ್ತಿದೆ. ದೆಹಲಿಯಲ್ಲಿ ತನ್ನ 15 ವರ್ಷಗಳ ಆಡಳಿತವನ್ನು ಹೈಲೈಟ್ ಮಾಡುವ ಪ್ರಚಾರವನ್ನು ಶೀಘ್ರದಲ್ಲೇ ಪ್ರಾರಂಭಿಸಲು ಪಕ್ಷವು ಯೋಜಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ