AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿ ಕಾಶ್ಮೀರ್ ಫೈಲ್ಸ್​​​ನಲ್ಲಿ ತುಂಬ ಸುಳ್ಳುಗಳಿವೆ, 1990ರಲ್ಲಿ ಎನ್​​ಸಿ ಸರ್ಕಾರವಿರಲಿಲ್ಲ: ಒಮರ್​ ಅಬ್ದುಲ್ಲಾ

ದಕ್ಷಿಣ ಕಾಶ್ಮಿರದ ಕುಲಗಾಂವ್​​ನಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಒಮರ್​ ಅಬ್ದುಲ್ಲಾ, ಈ ಸಿನಿಮಾ ಒಂದು ಸಾಕ್ಷ್ಯಚಿತ್ರವೋ ಅಥವಾ ಸಿನಿಮಾವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಹೇಳಿದ್ದಾರೆ.

ದಿ ಕಾಶ್ಮೀರ್ ಫೈಲ್ಸ್​​​ನಲ್ಲಿ ತುಂಬ ಸುಳ್ಳುಗಳಿವೆ, 1990ರಲ್ಲಿ ಎನ್​​ಸಿ ಸರ್ಕಾರವಿರಲಿಲ್ಲ: ಒಮರ್​ ಅಬ್ದುಲ್ಲಾ
ಒಮರ್​ ಅಬ್ದುಲ್ಲಾ
TV9 Web
| Updated By: Lakshmi Hegde|

Updated on:Mar 19, 2022 | 10:02 AM

Share

ದಿ ಕಾಶ್ಮೀರ್ ಫೈಲ್ಸ್ ಬಾಲಿವುಡ್​ ಸಿನಿಮಾ ಸದ್ಯ ದೇಶದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಕಾಶ್ಮೀರಿ ಪಂಡಿತರ ನರಮೇಧ, ಅವರ ಮೇಲಿನ ದೌರ್ಜನ್ಯವನ್ನು ಈ ಸಿನಿಮಾದಲ್ಲಿ ಎಳೆಎಳೆಯಾಗಿ ಬಿಚ್ಚಿಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಲವು ರಾಜ್ಯಗಳು ಈ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿವೆ. ಹಾಗೇ, ರಾಜಕಾರಣಿಗಳೂ ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್​ ಸೇರಿ ಇನ್ನಿತರ ಕೆಲವು ಪ್ರತಿಪಕ್ಷಗಳು ದಿ ಕಾಶ್ಮೀರ್ ಫೈಲ್ಸ್​​ ಬಗ್ಗೆ ವ್ಯಂಗ್ಯ ಮಾಡುತ್ತಿವೆ. ಈಗಾಗಲೇ ಹಲವು ನಾಯಕರೂ ಈ ನಿಟ್ಟಿನಲ್ಲಿ ಕಮೆಂಟ್​​ಗಳನ್ನು ಮಾಡಿದ್ದು, ಅವರ ಸಾಲಿಗೆ ಈಗ ನ್ಯಾಶನಲ್​ ಕಾನ್ಫರೆನ್ಸ್​ ಕಾರ್ಯಕಾರಿ ಅಧ್ಯಕ್ಷ, ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್​ ಅಬ್ದುಲ್ಲಾ ಸೇರ್ಪಡೆಯಾಗಿದ್ದಾರೆ. ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾದಲ್ಲಿ ಅನೇಕ ಸುಳ್ಳು ವಿಚಾರಗಳನ್ನು ಬಿಂಬಿಸಲಾಗಿದೆ ಎಂದು ಆರೋಪಿಸಿದ್ದಾರೆ.

ದಕ್ಷಿಣ ಕಾಶ್ಮಿರದ ಕುಲಗಾಂವ್​​ನಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸಿನಿಮಾ ಒಂದು ಸಾಕ್ಷ್ಯಚಿತ್ರವೋ ಅಥವಾ ಸಿನಿಮಾವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಾಸ್ತವತೆಯ ನೆಲೆಗಟ್ಟಿನ ಮೇಲೆ ಸಿನಿಮಾ ಮಾಡಲಾಗಿದೆ ಎಂದು ತಯಾರಕರು ಹೇಳುತ್ತಾರೆ. ಆದರೆ ನಿಜಕ್ಕೂ ಈ ಸಿನಿಮಾದಲ್ಲಿ ಹಲವು ಸುಳ್ಳುಗಳನ್ನು ಹೇಳಲಾಗಿದೆ. ಅದರಲ್ಲೂ ಬಹುದೊಡ್ಡ ಸುಳ್ಳು ಎಂದರೆ, 1990ರಲ್ಲಿ ಎನ್​​ಸಿ ಸರ್ಕಾರವಿತ್ತು ಎಂಬುದು. ಕಾಶ್ಮೀರಿ ಪಂಡಿತರು ಇಲ್ಲಿಂದ ಬಿಟ್ಟು ಹೊರಟಾಗ ಇಲ್ಲಿ ರಾಜ್ಯಪಾಲರ ಆಳ್ವಿಕೆ ಇತ್ತು. ಕೇಂದ್ರ ಸರ್ಕಾರದಲ್ಲಿದ್ದ ವಿ.ಪಿ.ಸಿಂಗ್​ ಸರ್ಕಾರಕ್ಕೆ ಬಿಜೆಪಿ ಬೆಂಬಲವಿತ್ತು ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲ,  ಆ ಸಮಯದಲ್ಲಿ ಹತ್ಯೆಗೀಡಾದವರು, ವಲಸೆ ಹೋದವರು ಬರೀ ಕಾಶ್ಮೀರಿ ಪಂಡಿತರು ಮಾತ್ರವಲ್ಲ. ಮುಸ್ಲಿಮರು ಮತ್ತು ಸಿಖ್ಖರ ಹತ್ಯೆಯೂ ಆಗಿದೆ. ಅವರೂ ಅನೇಕರು ಇಲ್ಲಿಂದ ವಲಸೆ ಹೋಗಿದ್ದಾರೆ. ಇದುವರೆಗೂ ಅವರಿಗೆ ಕಾಶ್ಮೀರಕ್ಕೆ ವಾಪಸ್​ ಬರಲು ಸಾಧ್ಯವಾಗಲಿಲ್ಲ. ಹಾಗೇ. ವಲಸೆ ಹೋಗಿರುವ ಕಾಶ್ಮಿರಿ ಪಂಡಿತರನ್ನು ಮತ್ತೆ ವಾಪಸ್ ಕರೆತರಲು ಎನ್​ಸಿ ಪಕ್ಷ ಕೂಡ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ. ಅದನ್ನು ಮುಂದೆಯೂ ಮುಂದುವರಿಸಲಾಗುವುದು ಎಂದಿದ್ದಾರೆ.

ಇನ್ನು ದಿ ಕಾಶ್ಮೀರ್​ ಫೈಲ್ಸ್​ ಬಗ್ಗೆ ಬಿಹಾರ ಮಾಜಿ ಸಿಎಂ ಜಿತನ್ ರಾಮ್ ಮಾಂಝಿ ಕೂಡ ಟೀಕೆ ಮಾಡಿದ್ದರು. ಜಮ್ಮು-ಕಾಶ್ಮೀರದಿಂದ ವಲಸೆ ಹೋಗಿರುವ ಪಂಡಿತರು ಮತ್ತೆ ಇಲ್ಲಿಗೆ ವಾಪಸ್​ ಬರಲು ಬಿಡಬಾರದು ಎಂದು ಮಾಡಿರುವ ಪಿತೂರಿ ಈ ಸಿನಿಮಾ ಎಂದು ಆರೋಪಿಸಿದ್ದರು.  ದಿ ಕಾಶ್ಮೀರ್ ಫೈಲ್ಸ್​ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸೇರಿದಂತೆ ಭಯೋತ್ಪಾದಕ ಸಂಘಟನೆಗಳು ಮತ್ತು ಸಿನಿಮಾದ ನಿರ್ಮಾಪಕರ ನಡುವೆ ಸಂಪರ್ಕ ಇರಬಹುದು ಎಂದೂ ಅನುಮಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಕಂಡು ಕೇಳರಿಯದಂತಹ ‘ಆರ್​ಆರ್​ಆರ್​’ ಪ್ರೀ ರಿಲೀಸ್​ ಇವೆಂಟ್​ಗೆ ಭರ್ಜರಿ ಸಿದ್ಧತೆ: ಇಲ್ಲಿದೆ ವಿಡಿಯೋ

Published On - 9:50 am, Sat, 19 March 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!