AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್‌ನಲ್ಲಿ ಭಾರಿ ಮಳೆಯಿಂದ 11 ಜನರು ಸಾವು: ಹಲವೆಡೆ ಹೈಅಲರ್ಟ್‌ ಘೋಷಣೆ

ಗುಜರಾತ್‌ನಲ್ಲಿ ಭಾರಿ ಮಳೆಯಿಂದ ಜಾಮ್‌ನಗರದ 6 ಮತ್ತು ಜುನಾಗಢದ ಐವರು ಸೇರಿದಂತೆ ಒಟ್ಟು 11 ಜನರು ಸಾವನ್ನಪ್ಪಿದ್ದಾರೆ ಎಂದು ಆಜ್‌ತಕ್‌ ವರದಿ ಮಾಡಿದೆ. ಸೂರತ್ ಸೇರಿದಂತೆ ಗುಜರಾತ್‌ನ ಹಲವೆಡೆ ಹೈಅಲರ್ಟ್‌ ಘೋಷಿಸಲಾಗಿದೆ. 

ಗುಜರಾತ್‌ನಲ್ಲಿ ಭಾರಿ ಮಳೆಯಿಂದ 11 ಜನರು ಸಾವು: ಹಲವೆಡೆ ಹೈಅಲರ್ಟ್‌ ಘೋಷಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 01, 2023 | 10:07 PM

Share

ಗುಜರಾತ್‌ನಲ್ಲಿ ಭಾರಿ ಮಳೆ (heavy rain) ಯಿಂದ ಜಾಮ್‌ನಗರದ 6 ಮತ್ತು ಜುನಾಗಢದ ಐವರು ಸೇರಿದಂತೆ ಒಟ್ಟು 11 ಜನರು ಸಾವನ್ನಪ್ಪಿದ್ದಾರೆ ಎಂದು ಆಜ್‌ತಕ್‌ ವರದಿ ಮಾಡಿದೆ. ಸೂರತ್ ಸೇರಿದಂತೆ ಗುಜರಾತ್‌ನ ಹಲವೆಡೆ ಹೈಅಲರ್ಟ್‌ ಘೋಷಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಗುಜರಾತ್‌ನ ಹಲವೆಡೆ ಸುರಿದ ಭಾರೀ ಮಳೆಗೆ ನಗರಗಳು ಮತ್ತು ಹಳ್ಳಿಗಳಲ್ಲಿನ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮತ್ತು ಪ್ರವಾಹದಂತಹ ಪರಿಸ್ಥಿತಿಯನ್ನು ಸೃಷ್ಟಿಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಚ್, ಜಾಮ್‌ನಗರ, ಜುನಾಗಢ್ ಮತ್ತು ನವಸಾರಿ ಜಿಲ್ಲೆಗಳಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು, ನೂರಾರು ಹಳ್ಳಿಗಳು ಮುಳುಗಡೆಯಾಗಿವೆ. ಎಸ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಭಾರಿ ಮಳೆಯಿಂದಾಗಿ ಧಾಡ್ ಪಂಥಕ್​ನ ಓಜತ್ ಮತ್ತು ಉಬೆನ್ ಗ್ರಾಮಗಳು ಜಲಾವೃತಗೊಂಡಿವೆ.

ಇದನ್ನೂ ಓದಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್ ಮೇಲೆ ಗುಂಡಿನ ದಾಳಿ ಪ್ರಕರಣ: ನಾಲ್ವರ ಬಂಧನ

ಹಳ್ಳಿ ಹಳ್ಳಿಗೆ ನೀರು ನುಗ್ಗಿತ್ತಿದೆ. ಓಜತ್ ನದಿ ತೀರದ ಮಾನವದಾರ್, ಕೇಶೋಡ್ ಮತ್ತು ಮಂಗ್ರೋಲ್ ತಾಲೂಕಿನ 41 ಗ್ರಾಮಗಳಿಗೆ ಪ್ರವಾಹ ನೀರು ನುಗ್ಗಿದೆ. 50 ಗ್ರಾಮಗಳ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರವಾಹದಲ್ಲಿ ಸಿಲುಕಿದ್ದ ಜನರನ್ನು ಹೆಲಿಕಾಪ್ಟರ್‌ಗಳ ಸಹಾಯದಿಂದ ರಕ್ಷಿಸಲಾಗಿದೆ. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನರು ನರಕಯಾತನೆ ಅನುಭವಿಸುವಂತಾಗಿದೆ. ಪ್ರವಾಹ ಸಂತ್ರಸ್ತರ ನೆರವಿಗೆ ಅಧಿಕಾರಿಗಳು ಮುಂದಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಮ್ಮತಿಯ ಸೆಕ್ಸ್​ ವಯಸ್ಸಿನ ಮಿತಿ 18ರಿಂದ 16ಕ್ಕೆ ಇಳಿಸಿ; ಸರ್ಕಾರಕ್ಕೆ ಮಧ್ಯ ಪ್ರದೇಶ ಹೈಕೋರ್ಟ್ ಸಲಹೆ

ವಲ್ಸಾದ್ ಮಳೆಯಿಂದಾಗಿ ಭಾರೀ ಹಾನಿಯಾಗಿದೆ. ಕೆಲವು ಮನೆಗಳು ಕುಸಿದಿವೆ. ಮನೆಗಳಿಗೆ ಮೊಣಕಾಲು ಆಳಕ್ಕೆ ಮಳೆ ನೀರು ನುಗ್ಗಿದೆ. ಇದರಿಂದ ಜನರು ಮನೆಯಲ್ಲಿದ್ದರೂ ಸುರಕ್ಷಿತವಾಗಿಲ್ಲ. ಹಳೆ ಮನೆಗಳು ಯಾವಾಗ ಕುಸಿಯುತ್ತವೋ ಎಂಬ ಆತಂಕ ಜನರನ್ನು ಕಾಡುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:53 pm, Sat, 1 July 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ