AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎರಡನೇ ಅಲೆ ಭಯ: ಮುಂಜಾಗ್ರತಾ ಕ್ರಮ, ಎಲ್ಲಾ ಬಂದ್ ಬಂದ್.. ಎಲ್ಲೆಲ್ಲಿ?

ದೆಹಲಿ: ವರ್ಷಾಂತ್ಯಕ್ಕೆ ವ್ಯಾಕ್ಸಿನ್ ಬರಲಿ, ಬರದಿರಲಿ ಕೊರೊನಾ ತಡೆಗಟ್ಟಲು ಮತ್ತೆ ಲಾಕ್​ಡೌನ್ ನಿಯಮಗಳನ್ನು ಹಲವು ರಾಜ್ಯಗಳು ಜಾರಿಗೊಳಿಸಿವೆ. ದೇಶದೆಲ್ಲೆಡೆ ಕೊರೊನಾ ಎರಡನೆ ಅಲೆ ಏಳುವ ಭಯದ ನಡುವೆಯೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿವೆ. ದೆಹಲಿಯ ಎರಡು ಮಾರುಕಟ್ಟೆ ಬಂದ್! ಸದಾ ಗಿಜಿಗುಡುತ್ತಿದ್ದ ದೆಹಲಿಯ ಪಂಜಾಬ್ ಬಸ್ತಿ ಮತ್ತು ಜನತಾ ಮಾರುಕಟ್ಟೆಗಳನ್ನು ನವೆಂಬರ್ 30ರವರೆಗೆ ಮುಚ್ಚುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಸಾಮಾಜಿಕ ಅಂತರ ನಿಯಮಗಳನ್ನು ಸಾರ್ವಜನಿಕರು ಪಾಲಿಸದ ಕಾರಣ ಈ ನಿಯಮ ಜಾರಿಗೊಳಿಸಲಾಗಿದೆ. ಟೆಸ್ಟ್ ಮಾಡಿಸದವರಿಗೆ […]

ಕೊರೊನಾ ಎರಡನೇ ಅಲೆ ಭಯ: ಮುಂಜಾಗ್ರತಾ ಕ್ರಮ, ಎಲ್ಲಾ ಬಂದ್ ಬಂದ್.. ಎಲ್ಲೆಲ್ಲಿ?
ಆಯೇಷಾ ಬಾನು
|

Updated on:Nov 23, 2020 | 12:21 PM

Share

ದೆಹಲಿ: ವರ್ಷಾಂತ್ಯಕ್ಕೆ ವ್ಯಾಕ್ಸಿನ್ ಬರಲಿ, ಬರದಿರಲಿ ಕೊರೊನಾ ತಡೆಗಟ್ಟಲು ಮತ್ತೆ ಲಾಕ್​ಡೌನ್ ನಿಯಮಗಳನ್ನು ಹಲವು ರಾಜ್ಯಗಳು ಜಾರಿಗೊಳಿಸಿವೆ. ದೇಶದೆಲ್ಲೆಡೆ ಕೊರೊನಾ ಎರಡನೆ ಅಲೆ ಏಳುವ ಭಯದ ನಡುವೆಯೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿವೆ.

ದೆಹಲಿಯ ಎರಡು ಮಾರುಕಟ್ಟೆ ಬಂದ್! ಸದಾ ಗಿಜಿಗುಡುತ್ತಿದ್ದ ದೆಹಲಿಯ ಪಂಜಾಬ್ ಬಸ್ತಿ ಮತ್ತು ಜನತಾ ಮಾರುಕಟ್ಟೆಗಳನ್ನು ನವೆಂಬರ್ 30ರವರೆಗೆ ಮುಚ್ಚುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಸಾಮಾಜಿಕ ಅಂತರ ನಿಯಮಗಳನ್ನು ಸಾರ್ವಜನಿಕರು ಪಾಲಿಸದ ಕಾರಣ ಈ ನಿಯಮ ಜಾರಿಗೊಳಿಸಲಾಗಿದೆ.

ಟೆಸ್ಟ್ ಮಾಡಿಸದವರಿಗೆ ಪ್ರವೇಶವಿಲ್ಲ, ಆದಿತ್ಯನಾಥ್ ಕಟ್ಟುನಿಟ್ಟಿನ ನಿರ್ಧಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪರಿಸ್ಥಿತಿ ಹದಗೆಡುತ್ತಿದ್ದಂತೆ ಪಕ್ಕದ ಯುಪಿ ಸರ್ಕಾರ ಎಚ್ಚೆತ್ತಿದೆ. ದೆಹಲಿಯಿಂದ ಬಸ್, ರೈಲು ಮತ್ತು ವಿಮಾನಗಳಲ್ಲಿ ಆಗಮಿಸುವ ಪ್ರಯಾಣಿಕರಿಗೆ ಕಡ್ಡಾಯ ಕೊವಿಡ್ ಟೆಸ್ಟ್ ಒಳಗಾಗಲು ಸೂಚಿಸಿದೆ. ಟೆಸ್ಟ್ ಮಾಡಿಸದ ಪ್ರಯಾಣಿಕರಿಗೆ ಉತ್ತರ ಪ್ರದೇಶ ಪ್ರವೇಶಿಸಲು ಅನುಮತಿ ನಿರಾಕರಿಸಲಾಗಿದೆ.

ಲಾಕ್​ಡೌನ್ ಸುಳಿವು ನೀಡಿದ ಪವಾರ್ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ರಾಜ್ಯದಲ್ಲಿ ಲಾಕ್​ಡೌನ್ ಘೋಷಿಸುವ ಸುಳಿವು ನೀಡಿದ್ದಾರೆ. ದೀಪಾವಳಿಯ ಆಚರಣೆಗೆ ಜನಜಂಗುಳಿ ಹೆಚ್ಚಿತ್ತು. ಸಾಮಾಜಿಕ ಅಂತರವನ್ನು ಪಾಲಿಸದೇ ಜನರು ಹಬ್ಬ ಆಚರಿಸಿದ್ದರು. ಹೀಗಾಗಿ, ಲಾಕ್​ಡೌನ್ ಘೋಷಿಸುವ ಕುರಿತು ಎಲ್ಲ ಇಲಾಖೆಗಳ ಜೊತೆ ಸಂಪರ್ಕದಲ್ಲಿದ್ದೇನೆ. 8-10 ದಿನಗಳಲ್ಲಿ ಈ ಕುರಿತು ಸ್ಪಷ್ಟಪಡಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

Published On - 11:39 am, Mon, 23 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!