AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್‌ನಲ್ಲಿ ಹೈ ಪ್ರೊಫೈಲ್ ನಕ್ಸಲ್ ಸೇರಿದಂತೆ ಮೂವರು ಮಾವೋವಾದಿಗಳ ಎನ್​ಕೌಂಟರ್

ಜಾರ್ಖಂಡ್​​​ನಲ್ಲಿ ಪೊಲೀಸರಿಂದ ಕೊಲ್ಲಲ್ಪಟ್ಟ 3 ನಕ್ಸಲರಲ್ಲಿ ಒಬ್ಬನನ್ನು ಹಿಡಿದುಕೊಟ್ಟವರಿಗೆ 1 ಕೋಟಿ ರೂ. ಬಹುಮಾನವನ್ನು ಕೂಡ ಘೋಷಿಸಲಾಗಿತ್ತು. ಇನ್ನೂ ಶೋಧ ಕಾರ್ಯ ನಡೆಯುತ್ತಿದೆ. ಗೋರ್ಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಂಟಿತ್ರಿ ಅರಣ್ಯದಲ್ಲಿ ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ನಿಷೇಧಿತ ಸಿಪಿಐ (ಮಾವೋವಾದಿ)ನ ಸಹದೇವ್ ಸೊರೆನ್ ತಂಡದ ಮೇಲೆ ಭದ್ರತಾ ಪಡೆ ಎನ್‌ಕೌಂಟರ್ ಕಾರ್ಯಾಚರಣೆ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾರ್ಖಂಡ್‌ನಲ್ಲಿ ಹೈ ಪ್ರೊಫೈಲ್ ನಕ್ಸಲ್ ಸೇರಿದಂತೆ ಮೂವರು ಮಾವೋವಾದಿಗಳ ಎನ್​ಕೌಂಟರ್
Maoist
ಸುಷ್ಮಾ ಚಕ್ರೆ
|

Updated on:Sep 15, 2025 | 3:05 PM

Share

ರಾಂಚಿ, ಸೆಪ್ಟೆಂಬರ್ 15: ಜಾರ್ಖಂಡ್‌ನ (Jharkhand) ಹಜಾರಿಬಾಗ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 1 ಕೋಟಿ ರೂ. ಬಹುಮಾನ ಘೋಷಿಸಲ್ಪಟ್ಟಿದ್ದ ಒಬ್ಬ ಮಾವೋವಾದಿ ಸೇರಿದಂತೆ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಗೊರ್ಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಂಟಿತ್ರಿ ಅರಣ್ಯದಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ನಿಷೇಧಿತ ಸಿಪಿಐ (ಮಾವೋವಾದಿ)ನ ಸಹದೇವ್ ಸೊರೆನ್ ತಂಡ ಮತ್ತು ಭದ್ರತಾ ಪಡೆ ನಡುವೆ ಎನ್‌ಕೌಂಟರ್ ಕಾರ್ಯಾಚರಣೆ ನಡೆದಿದೆ.

“ಶೋಧ ಕಾರ್ಯಾಚರಣೆಯ ಸಮಯದಲ್ಲಿ 1 ಕೋಟಿ ರೂ. ಬಹುಮಾನ ಹೊತ್ತಿದ್ದ ಸಹದೇವ್ ಸೊರೆನ್ ಮತ್ತು ಇತರ ಇಬ್ಬರು ಮಾವೋವಾದಿಗಳ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸರು ಹೇಳಿದರು. ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಜಾರ್ಖಂಡ್‌ನಲ್ಲಿ ಸಿಲಿಂಡರ್ ತುಂಬಿದ ಟ್ರಕ್‌ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದು 18 ಜನ ಸಾವು

“ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಜಾರ್ಖಂಡ್ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಮೂವರು ನಕ್ಸಲರನ್ನು ಹತ್ಯೆ ಮಾಡಿ ಮೂರು ಎಕೆ-47 ರೈಫಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಹತ್ಯೆಯಾದವರಲ್ಲಿ ಸಹದೇವ್ ಸೊರೆನ್ (ಕೇಂದ್ರ ಸಮಿತಿ ಸದಸ್ಯರಿಗೆ 1 ಕೋಟಿ ರೂ. ಬಹುಮಾನ), ರಘುನಾಥ್ ಹೆಂಬ್ರಾಮ್ (ವಿಶೇಷ ಪ್ರದೇಶ ಸಮಿತಿ ಸದಸ್ಯರಿಗೆ 25 ಲಕ್ಷ ರೂ. ಬಹುಮಾನ), ಮತ್ತು ವೀರ್ಸೆನ್ ಗಂಜು (ವಲಯ ಸಮಿತಿ ಸದಸ್ಯರಿಗೆ 10 ಲಕ್ಷ ರೂ. ಬಹುಮಾನ) ಸೇರಿದ್ದಾರೆ. ಇಂದು ಮುಂಜಾನೆ ಹಜಾರಿಬಾಗ್‌ನ ಗೋರ್ಹಾರ್ ಪ್ರದೇಶದ ಪಂಟಿತ್ರಿ ಅರಣ್ಯದಲ್ಲಿ ಬೆಳಿಗ್ಗೆ 4.20ರ ಸುಮಾರಿಗೆ ಈ ಕಾರ್ಯಾಚರಣೆ ನಡೆಸಲಾಯಿತು” ಎಂದು ಸಿಆರ್‌ಪಿಎಫ್ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಜಾರ್ಖಂಡ್​: ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಸಿಡಿಲು ಬಡಿದು ಸಿಆರ್​ಪಿಎಫ್​ ಅಧಿಕಾರಿ ಸಾವು, ಮೂವರಿಗೆ ಗಾಯ

2025ರಲ್ಲಿ 209 ಕೋಬ್ರಾದ ವೀರ ಪಡೆಗಳು ನಕ್ಸಲ್ ವಿರೋಧಿ ಕಾರ್ಯಾಚರಣೆಗಳಲ್ಲಿ ಗಮನಾರ್ಹ ಯಶಸ್ಸನ್ನು ಸಾಧಿಸಿವೆ. ಇಬ್ಬರು ಕೇಂದ್ರ ಸಮಿತಿ ಸದಸ್ಯರು, ಇಬ್ಬರು ಬಿಜೆಎಸ್ಎಸಿ ಸದಸ್ಯರು, 4 ವಲಯ ಸಮಿತಿ ಸದಸ್ಯರು (ಝಡ್‌ಸಿಎಂಗಳು), ಇಬ್ಬರು ಉಪ-ವಲಯ ಸಮಿತಿ ಸದಸ್ಯರು (ಎಸ್‌ಝಡ್‌ಸಿಎಂಗಳು), ಮೂವರು ಪ್ರದೇಶ ಸಮಿತಿ ಸದಸ್ಯರು (ಎಸಿಎಂಗಳು) ಮತ್ತು ಹಲವಾರು ಇತರ ಕುಖ್ಯಾತ ನಕ್ಸಲ್ ಕಾರ್ಯಕರ್ತರು ಸೇರಿದಂತೆ 20 ಕಟ್ಟಾ ನಕ್ಸಲ್‌ಗಳನ್ನು ಹತ್ಯೆ ಮಾಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Mon, 15 September 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ