AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢ್​​ನಲ್ಲಿ ಎನ್​ಕೌಂಟರ್​; ಪ್ರಮುಖ ಮಾವೋವಾದಿ ನಾಯಕನೊಬ್ಬನ ಹತ್ಯೆ

ಭಾರತದಲ್ಲಿ ಗಡಿಯಲ್ಲಿ ಉಗ್ರರ ದಾಳಿ ಸಮಸ್ಯೆಯಾದರೆ ದೇಶದೊಳಗೆ ನಕ್ಸಲರು, ಮಾವೋವಾದಿಗಳ ಕಾಟ ಯಾವಾಗಲೂ ಇರುತ್ತದೆ. ಅದರಲ್ಲೂ ಛತ್ತೀಸಗಢ ನಕ್ಸಲ್​ ಪೀಡಿತ ರಾಜ್ಯ. 

ಛತ್ತೀಸ್​ಗಢ್​​ನಲ್ಲಿ ಎನ್​ಕೌಂಟರ್​; ಪ್ರಮುಖ ಮಾವೋವಾದಿ ನಾಯಕನೊಬ್ಬನ ಹತ್ಯೆ
ಮೃತ ಮಾವೋವಾದಿಯಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳು
TV9 Web
| Edited By: |

Updated on:Nov 06, 2021 | 2:54 PM

Share

ಛತ್ತೀಸ್​ಗಡ್​​ನ ದಂತೇವಾಡಾ ಜಿಲ್ಲೆಯಲ್ಲಿ ಭದ್ರತಾ ಪಡೆ ಸಿಬ್ಬಂದಿ ಪ್ರಮುಖ ಮಾವೋವಾದಿ ನಾಯಕನೊಬ್ಬನನ್ನು ಹತ್ಯೆ ಮಾಡಿದ್ದಾರೆ. ಈ ಮಾವೋವಾದಿ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನು ಆಗಿದ್ದ. ಈತನ ತಲೆಗೆ 5 ಲಕ್ಷ ರೂಪಾಯಿ ಬಹುಮಾನ ಕಟ್ಟಲಾಗಿತ್ತು. ಅಂದರೆ ಈ ಮಾವೋವಾದಿಯ ಪತ್ತೆಗೆ ಸಹಾಯ ಮಾಡಿದವರಿಗೆ 5 ಲಕ್ಷ ರೂಪಾಯಿ ನೀಡುವುದಾಗಿ ಘೋಷಣೆಯಾಗಿತ್ತು. ಅಂಥವನನ್ನು ಶುಕ್ರವಾರ ಭದ್ರತಾ ಪಡೆ ಸಿಬ್ಬಂದಿ ಕೊಂದುಹಾಕಿದ್ದಾರೆ.

ಭಾರತದಲ್ಲಿ ಗಡಿಯಲ್ಲಿ ಉಗ್ರರ ದಾಳಿ ಸಮಸ್ಯೆಯಾದರೆ ದೇಶದೊಳಗೆ ನಕ್ಸಲರು, ಮಾವೋವಾದಿಗಳ ಕಾಟ ಯಾವಾಗಲೂ ಇರುತ್ತದೆ. ಅದರಲ್ಲೂ ಛತ್ತೀಸಗಢ ನಕ್ಸಲ್​ ಪೀಡಿತ ರಾಜ್ಯ.  ಹಾಗೇ, ಶುಕ್ರವಾರ ಸಂಜೆ 4ಗಂಟೆ ಹೊತ್ತಿಗೆ ಕೂಡ ಗೀಡಂ ಪೊಲೀಸ್​ ಠಾಣೆ ವ್ಯಾಪ್ತಿಯ ಅರಣ್ಯವೊಂದರಲ್ಲಿ ಜಿಲ್ಲಾ ಮೀಸಲು ಗಾರ್ಡ್​​ ಪೊಲೀಸರು ಮತ್ತು ಮಾವೋವಾದಿಗಳ ಮಧ್ಯೆ ಎನ್​ಕೌಂಟರ್​ ನಡೆದಿತ್ತು.  ಗುಂಡಿನ ಚಕಮಕಿ ನಂತರ ರಾಮ್ಸು ಕೊರಮ್​ ಎಂಬ ಮಾವೋವಾದಿಯ ಶವ ಸಿಕ್ಕಿದೆ. ಈತ ಹಲವು ಪ್ರಕರಣಗಳಲ್ಲಿ ಬೇಕಾದವನಾಗಿದ್ದ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಈತನಿಂದ 7.62 ಎಂಎಂ ಪಿಸ್ತೂಲ್​, 5 ಕೆಜಿ ಐಇಡಿ ಸೇರಿ ಮತ್ತಿತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Puneeth Rajkumar: ಪುನೀತ್ ಕಾಣಿಸಿಕೊಂಡಿದ್ದ ‘ಗಂಧದ ಗುಡಿ’ ಬಿಡುಗಡೆ ಯಾವಾಗ?; ಇಲ್ಲಿದೆ ಮಾಹಿತಿ

Published On - 1:32 pm, Sat, 6 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ