ಛತ್ತೀಸ್​ಗಢ್​​ನಲ್ಲಿ ಎನ್​ಕೌಂಟರ್​; ಪ್ರಮುಖ ಮಾವೋವಾದಿ ನಾಯಕನೊಬ್ಬನ ಹತ್ಯೆ

ಭಾರತದಲ್ಲಿ ಗಡಿಯಲ್ಲಿ ಉಗ್ರರ ದಾಳಿ ಸಮಸ್ಯೆಯಾದರೆ ದೇಶದೊಳಗೆ ನಕ್ಸಲರು, ಮಾವೋವಾದಿಗಳ ಕಾಟ ಯಾವಾಗಲೂ ಇರುತ್ತದೆ. ಅದರಲ್ಲೂ ಛತ್ತೀಸಗಢ ನಕ್ಸಲ್​ ಪೀಡಿತ ರಾಜ್ಯ. 

ಛತ್ತೀಸ್​ಗಢ್​​ನಲ್ಲಿ ಎನ್​ಕೌಂಟರ್​; ಪ್ರಮುಖ ಮಾವೋವಾದಿ ನಾಯಕನೊಬ್ಬನ ಹತ್ಯೆ
ಮೃತ ಮಾವೋವಾದಿಯಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳು
Follow us
| Updated By: Lakshmi Hegde

Updated on:Nov 06, 2021 | 2:54 PM

ಛತ್ತೀಸ್​ಗಡ್​​ನ ದಂತೇವಾಡಾ ಜಿಲ್ಲೆಯಲ್ಲಿ ಭದ್ರತಾ ಪಡೆ ಸಿಬ್ಬಂದಿ ಪ್ರಮುಖ ಮಾವೋವಾದಿ ನಾಯಕನೊಬ್ಬನನ್ನು ಹತ್ಯೆ ಮಾಡಿದ್ದಾರೆ. ಈ ಮಾವೋವಾದಿ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನು ಆಗಿದ್ದ. ಈತನ ತಲೆಗೆ 5 ಲಕ್ಷ ರೂಪಾಯಿ ಬಹುಮಾನ ಕಟ್ಟಲಾಗಿತ್ತು. ಅಂದರೆ ಈ ಮಾವೋವಾದಿಯ ಪತ್ತೆಗೆ ಸಹಾಯ ಮಾಡಿದವರಿಗೆ 5 ಲಕ್ಷ ರೂಪಾಯಿ ನೀಡುವುದಾಗಿ ಘೋಷಣೆಯಾಗಿತ್ತು. ಅಂಥವನನ್ನು ಶುಕ್ರವಾರ ಭದ್ರತಾ ಪಡೆ ಸಿಬ್ಬಂದಿ ಕೊಂದುಹಾಕಿದ್ದಾರೆ.

ಭಾರತದಲ್ಲಿ ಗಡಿಯಲ್ಲಿ ಉಗ್ರರ ದಾಳಿ ಸಮಸ್ಯೆಯಾದರೆ ದೇಶದೊಳಗೆ ನಕ್ಸಲರು, ಮಾವೋವಾದಿಗಳ ಕಾಟ ಯಾವಾಗಲೂ ಇರುತ್ತದೆ. ಅದರಲ್ಲೂ ಛತ್ತೀಸಗಢ ನಕ್ಸಲ್​ ಪೀಡಿತ ರಾಜ್ಯ.  ಹಾಗೇ, ಶುಕ್ರವಾರ ಸಂಜೆ 4ಗಂಟೆ ಹೊತ್ತಿಗೆ ಕೂಡ ಗೀಡಂ ಪೊಲೀಸ್​ ಠಾಣೆ ವ್ಯಾಪ್ತಿಯ ಅರಣ್ಯವೊಂದರಲ್ಲಿ ಜಿಲ್ಲಾ ಮೀಸಲು ಗಾರ್ಡ್​​ ಪೊಲೀಸರು ಮತ್ತು ಮಾವೋವಾದಿಗಳ ಮಧ್ಯೆ ಎನ್​ಕೌಂಟರ್​ ನಡೆದಿತ್ತು.  ಗುಂಡಿನ ಚಕಮಕಿ ನಂತರ ರಾಮ್ಸು ಕೊರಮ್​ ಎಂಬ ಮಾವೋವಾದಿಯ ಶವ ಸಿಕ್ಕಿದೆ. ಈತ ಹಲವು ಪ್ರಕರಣಗಳಲ್ಲಿ ಬೇಕಾದವನಾಗಿದ್ದ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಈತನಿಂದ 7.62 ಎಂಎಂ ಪಿಸ್ತೂಲ್​, 5 ಕೆಜಿ ಐಇಡಿ ಸೇರಿ ಮತ್ತಿತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Puneeth Rajkumar: ಪುನೀತ್ ಕಾಣಿಸಿಕೊಂಡಿದ್ದ ‘ಗಂಧದ ಗುಡಿ’ ಬಿಡುಗಡೆ ಯಾವಾಗ?; ಇಲ್ಲಿದೆ ಮಾಹಿತಿ

Published On - 1:32 pm, Sat, 6 November 21

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್