AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಜಾನೆ ಬಿಹಾರದ ಚೌರಾ ರೈಲ್ವೆ ಸ್ಟೇಶನ್​​ಗೆ ಮುತ್ತಿಗೆ ಹಾಕಿದ್ದ ಮಾವೋವಾದಿಗಳು; ಸುಮಾರು 2 ತಾಸು ರೈಲು ಸಂಚಾರ ಬಂದ್​

ಬೆಳ್ಳಂಬೆಳಗ್ಗೆ ಮಾವೋವಾದಿಗಳು ರೈಲ್ವೆ ಸ್ಟೇಶನ್​ನ್ನು ಸುತ್ತುವರಿದಿದ್ದರು. ಅದರಲ್ಲೊಬ್ಬ ಒಳಹೋಗಿ, ಸ್ಟೇಶನ್​ ಮಾಸ್ಟರ್​ ಬಿನಯ್​ ಕುಮಾರ್​ ಅವರಿದ್ದ ಕೊಠಡಿಯನ್ನು ಪ್ರವೇಶಿಸಿದ. ಟ್ರ್ಯಾಕ್​ ಸಿಗ್ನಲ್​ಗಳನ್ನೆಲ್ಲ ಕೆಂಪಾಗಿಯೇ ಇಡಬೇಕು ಎಂದು ಬೆದರಿಕೆ ಹಾಕಿದ.

ಮುಂಜಾನೆ ಬಿಹಾರದ ಚೌರಾ ರೈಲ್ವೆ ಸ್ಟೇಶನ್​​ಗೆ ಮುತ್ತಿಗೆ ಹಾಕಿದ್ದ ಮಾವೋವಾದಿಗಳು; ಸುಮಾರು 2 ತಾಸು ರೈಲು ಸಂಚಾರ ಬಂದ್​
ಬಿಹಾರ ರೈಲ್ವೆ ಸ್ಟೇಶನ್​
TV9 Web
| Edited By: |

Updated on: Jul 31, 2021 | 12:11 PM

Share

ಬಿಹಾರ (Bihar)ದ ಜಮುಯಿಯ ಚೌರಾ ರೈಲ್ವೆ ಸ್ಟೇಶನ್ (Railway Station)​​ನ್ನು ಇಂದು ಬೆಳಗ್ಗೆ ಸುಮಾರು 2 ತಾಸುಗಳ ಕಾಲ ನಿಯಂತ್ರಣಕ್ಕೆ ತೆಗೆದುಕೊಂಡಿದ್ದ ಕಾರಣ, ದೆಹಲಿ-ಹೌರಾಹ್​ ಮಾರ್ಗದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಹತ್ಯೆಯಾದ ತಮ್ಮ ಒಡನಾಡಿಗಳ ಸ್ಮರಣಾರ್ಥ ಮಾವೋವಾದಿಗಳು ಇಲ್ಲಿ ಬಂದ್​ ನಡೆಸುತ್ತಿದ್ದು, ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ಬಂದ್​ನ ನಾಲ್ಕನೇ ದಿನ ರೈಲ್ವೆ ಸ್ಟೇಶನ್​ನ್ನು ಅವರು ಆಕ್ರಮಿಸಿಕೊಂಡಿದ್ದರು.

ಬೆಳ್ಳಂಬೆಳಗ್ಗೆ ಮಾವೋವಾದಿಗಳು ರೈಲ್ವೆ ಸ್ಟೇಶನ್​ನ್ನು ಸುತ್ತುವರಿದಿದ್ದರು. ಅದರಲ್ಲೊಬ್ಬ ಒಳಹೋಗಿ, ಸ್ಟೇಶನ್​ ಮಾಸ್ಟರ್​ ಬಿನಯ್​ ಕುಮಾರ್​ ಅವರಿದ್ದ ಕೊಠಡಿಯನ್ನು ಪ್ರವೇಶಿಸಿದ. ಟ್ರ್ಯಾಕ್​ ಸಿಗ್ನಲ್​ಗಳನ್ನೆಲ್ಲ ಕೆಂಪಾಗಿಯೇ ಇಡಬೇಕು. ರೈಲುಗಳು ಮುಂದೆ ಚಲಿಸುವಂತಿಲ್ಲ. ಹಾಗೊಮ್ಮೆ ನಮ್ಮ ಮಾತನ್ನು ಮೀರಿದರೆ ಖಂಡಿತ ರೈಲ್ವೇ ಸ್ಟೇಶನ್​ನ್ನು ಸ್ಫೋಟಿಸುತ್ತೇವೆ ಎಂದು ಬೆದರಿಕೆ ಹಾಕಿದ. ಹಾಗಾಗಿ ರೈಲು ಸಂಚಾರ ತಡೆಯಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲ್ವೆ ಸ್ಟೇಶನ್​ಗೆ ತಾವು ಮುತ್ತಿಗೆ ಹಾಕಿರುವ ಬಗ್ಗೆ ನಿಮ್ಮ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಎಂದು ಬಿನಯ್​ ಕುಮಾರ್​ಗೆ ಹೇಳಿದರು. ಅಷ್ಟೇ ಅಲ್ಲ, ತಾವೇ ಮೈಕ್​ ಹಿಡಿದು, ಪ್ರಯಾಣಿಕರ ಬಳಿ, ನೀವೆಲ್ಲ ರೈಲಿನಲ್ಲಿಯೇ ಕುಳಿತುಕೊಂಡಿರಬೇಕು. ಯಾವ ಕಾರಣಕ್ಕೂ ಕೆಳಕ್ಕೆ ಇಳಿಯುವಂತಿಲ್ಲ ಎಂದೂ ಹೇಳಿದರು. ಅಷ್ಟರಲ್ಲಿ ಜಮುಯಿ ಎಸ್​ಪಿ ಪ್ರಮೋದ್​ ಕುಮಾರ್ ಮಂಡಲ್​ ಮತ್ತು ಪ್ಯಾರಾಮಿಲಿಟರಿ ಪಡೆಗಳು ಸ್ಥಳಕ್ಕೆ ಆಗಮಿಸಿದವು. ಮಾವೋವಾದಿಗಳು ಸ್ಥಳಕ್ಕೆ ಭದ್ರತಾ ಪಡೆಗಳನ್ನು ಕರೆಸಿ, ಹೊಂಚು ಹಾಕಿ ದಾಳಿ ನಡೆಸಲು ಹೀಗೆಲ್ಲ ಪ್ಲ್ಯಾನ್​ ಮಾಡಿದ್ದರು ಎಂದು ಸಿಆರ್​​ಪಿಎಫ್​ ಅಧಿಕಾರಿಗಳು ಹೇಳಿದ್ದಾರೆ.

ಮಾವೋವಾದಿಗಳ ಮುತ್ತಿಗೆಯಿಂದ ಮುಂಜಾನೆ 3.20ರಿಂದ 5.30ರವರೆಗೆ ರೈಲು ಸಂಚಾರಗಳೆಲ್ಲ ಸ್ಥಗಿತಗೊಂಡಿದ್ದವು. ನಂತರ ಸ್ಫೋಟಕಗಳನ್ನೇನಾದರೂ ಇಡಲಾಗಿದೆಯಾ ಎಂದು ಹಳಿಗಳನ್ನೆಲ್ಲ ಪರಿಶೀಲನೆ ಮಾಡಲಾಯಿತು. 5.30ರ ಬಳಿಕ ರೈಲು ಸಂಚಾರ ಮರು ಆರಂಭಗೊಂಡಿದೆ ಎಂದು ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಜೇಶ್​ ಕುಮಾರ್​ ತಿಳಿಸಿದ್ದಾರೆ.

ಇದನ್ನೂ ಓದಿ:ನೆರೆ ಸಂತ್ರಸ್ತರ ಕರೆ ಬಂದರೆ ಫೋನ್ ಎಸೆಯಬೇಕಂತ ಅನಿಸುತ್ತೆ; ಅಥಣಿ ಶಾಸಕ ಮಹೇಶ್ ಕುಮಟ್ಟಳ್ಳಿಯ ಅಸಡ್ಡೆ ಮಾತುಗಳು ಫುಲ್ ವೈರಲ್

Maoists take over Chaura railway station in Bihar

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು