AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಜಾನೆ ಬಿಹಾರದ ಚೌರಾ ರೈಲ್ವೆ ಸ್ಟೇಶನ್​​ಗೆ ಮುತ್ತಿಗೆ ಹಾಕಿದ್ದ ಮಾವೋವಾದಿಗಳು; ಸುಮಾರು 2 ತಾಸು ರೈಲು ಸಂಚಾರ ಬಂದ್​

ಬೆಳ್ಳಂಬೆಳಗ್ಗೆ ಮಾವೋವಾದಿಗಳು ರೈಲ್ವೆ ಸ್ಟೇಶನ್​ನ್ನು ಸುತ್ತುವರಿದಿದ್ದರು. ಅದರಲ್ಲೊಬ್ಬ ಒಳಹೋಗಿ, ಸ್ಟೇಶನ್​ ಮಾಸ್ಟರ್​ ಬಿನಯ್​ ಕುಮಾರ್​ ಅವರಿದ್ದ ಕೊಠಡಿಯನ್ನು ಪ್ರವೇಶಿಸಿದ. ಟ್ರ್ಯಾಕ್​ ಸಿಗ್ನಲ್​ಗಳನ್ನೆಲ್ಲ ಕೆಂಪಾಗಿಯೇ ಇಡಬೇಕು ಎಂದು ಬೆದರಿಕೆ ಹಾಕಿದ.

ಮುಂಜಾನೆ ಬಿಹಾರದ ಚೌರಾ ರೈಲ್ವೆ ಸ್ಟೇಶನ್​​ಗೆ ಮುತ್ತಿಗೆ ಹಾಕಿದ್ದ ಮಾವೋವಾದಿಗಳು; ಸುಮಾರು 2 ತಾಸು ರೈಲು ಸಂಚಾರ ಬಂದ್​
ಬಿಹಾರ ರೈಲ್ವೆ ಸ್ಟೇಶನ್​
TV9 Web
| Edited By: |

Updated on: Jul 31, 2021 | 12:11 PM

Share

ಬಿಹಾರ (Bihar)ದ ಜಮುಯಿಯ ಚೌರಾ ರೈಲ್ವೆ ಸ್ಟೇಶನ್ (Railway Station)​​ನ್ನು ಇಂದು ಬೆಳಗ್ಗೆ ಸುಮಾರು 2 ತಾಸುಗಳ ಕಾಲ ನಿಯಂತ್ರಣಕ್ಕೆ ತೆಗೆದುಕೊಂಡಿದ್ದ ಕಾರಣ, ದೆಹಲಿ-ಹೌರಾಹ್​ ಮಾರ್ಗದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಹತ್ಯೆಯಾದ ತಮ್ಮ ಒಡನಾಡಿಗಳ ಸ್ಮರಣಾರ್ಥ ಮಾವೋವಾದಿಗಳು ಇಲ್ಲಿ ಬಂದ್​ ನಡೆಸುತ್ತಿದ್ದು, ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ಬಂದ್​ನ ನಾಲ್ಕನೇ ದಿನ ರೈಲ್ವೆ ಸ್ಟೇಶನ್​ನ್ನು ಅವರು ಆಕ್ರಮಿಸಿಕೊಂಡಿದ್ದರು.

ಬೆಳ್ಳಂಬೆಳಗ್ಗೆ ಮಾವೋವಾದಿಗಳು ರೈಲ್ವೆ ಸ್ಟೇಶನ್​ನ್ನು ಸುತ್ತುವರಿದಿದ್ದರು. ಅದರಲ್ಲೊಬ್ಬ ಒಳಹೋಗಿ, ಸ್ಟೇಶನ್​ ಮಾಸ್ಟರ್​ ಬಿನಯ್​ ಕುಮಾರ್​ ಅವರಿದ್ದ ಕೊಠಡಿಯನ್ನು ಪ್ರವೇಶಿಸಿದ. ಟ್ರ್ಯಾಕ್​ ಸಿಗ್ನಲ್​ಗಳನ್ನೆಲ್ಲ ಕೆಂಪಾಗಿಯೇ ಇಡಬೇಕು. ರೈಲುಗಳು ಮುಂದೆ ಚಲಿಸುವಂತಿಲ್ಲ. ಹಾಗೊಮ್ಮೆ ನಮ್ಮ ಮಾತನ್ನು ಮೀರಿದರೆ ಖಂಡಿತ ರೈಲ್ವೇ ಸ್ಟೇಶನ್​ನ್ನು ಸ್ಫೋಟಿಸುತ್ತೇವೆ ಎಂದು ಬೆದರಿಕೆ ಹಾಕಿದ. ಹಾಗಾಗಿ ರೈಲು ಸಂಚಾರ ತಡೆಯಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲ್ವೆ ಸ್ಟೇಶನ್​ಗೆ ತಾವು ಮುತ್ತಿಗೆ ಹಾಕಿರುವ ಬಗ್ಗೆ ನಿಮ್ಮ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಎಂದು ಬಿನಯ್​ ಕುಮಾರ್​ಗೆ ಹೇಳಿದರು. ಅಷ್ಟೇ ಅಲ್ಲ, ತಾವೇ ಮೈಕ್​ ಹಿಡಿದು, ಪ್ರಯಾಣಿಕರ ಬಳಿ, ನೀವೆಲ್ಲ ರೈಲಿನಲ್ಲಿಯೇ ಕುಳಿತುಕೊಂಡಿರಬೇಕು. ಯಾವ ಕಾರಣಕ್ಕೂ ಕೆಳಕ್ಕೆ ಇಳಿಯುವಂತಿಲ್ಲ ಎಂದೂ ಹೇಳಿದರು. ಅಷ್ಟರಲ್ಲಿ ಜಮುಯಿ ಎಸ್​ಪಿ ಪ್ರಮೋದ್​ ಕುಮಾರ್ ಮಂಡಲ್​ ಮತ್ತು ಪ್ಯಾರಾಮಿಲಿಟರಿ ಪಡೆಗಳು ಸ್ಥಳಕ್ಕೆ ಆಗಮಿಸಿದವು. ಮಾವೋವಾದಿಗಳು ಸ್ಥಳಕ್ಕೆ ಭದ್ರತಾ ಪಡೆಗಳನ್ನು ಕರೆಸಿ, ಹೊಂಚು ಹಾಕಿ ದಾಳಿ ನಡೆಸಲು ಹೀಗೆಲ್ಲ ಪ್ಲ್ಯಾನ್​ ಮಾಡಿದ್ದರು ಎಂದು ಸಿಆರ್​​ಪಿಎಫ್​ ಅಧಿಕಾರಿಗಳು ಹೇಳಿದ್ದಾರೆ.

ಮಾವೋವಾದಿಗಳ ಮುತ್ತಿಗೆಯಿಂದ ಮುಂಜಾನೆ 3.20ರಿಂದ 5.30ರವರೆಗೆ ರೈಲು ಸಂಚಾರಗಳೆಲ್ಲ ಸ್ಥಗಿತಗೊಂಡಿದ್ದವು. ನಂತರ ಸ್ಫೋಟಕಗಳನ್ನೇನಾದರೂ ಇಡಲಾಗಿದೆಯಾ ಎಂದು ಹಳಿಗಳನ್ನೆಲ್ಲ ಪರಿಶೀಲನೆ ಮಾಡಲಾಯಿತು. 5.30ರ ಬಳಿಕ ರೈಲು ಸಂಚಾರ ಮರು ಆರಂಭಗೊಂಡಿದೆ ಎಂದು ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಜೇಶ್​ ಕುಮಾರ್​ ತಿಳಿಸಿದ್ದಾರೆ.

ಇದನ್ನೂ ಓದಿ:ನೆರೆ ಸಂತ್ರಸ್ತರ ಕರೆ ಬಂದರೆ ಫೋನ್ ಎಸೆಯಬೇಕಂತ ಅನಿಸುತ್ತೆ; ಅಥಣಿ ಶಾಸಕ ಮಹೇಶ್ ಕುಮಟ್ಟಳ್ಳಿಯ ಅಸಡ್ಡೆ ಮಾತುಗಳು ಫುಲ್ ವೈರಲ್

Maoists take over Chaura railway station in Bihar

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ