AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Assembly Election: ಮಹಾರಾಷ್ಟ್ರ ಚುನಾವಣೆಯಿಂದ ಹಿಂದೆ ಸರಿದ ಮನೋಜ್ ಜಾರಂಗೆ ಪಾಟೀಲ್

ಈ ಹಿಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದ ಮರಾಠ ಕೋಟಾ ಕಾರ್ಯಕರ್ತ ಮನೋಜ್ ಜಾರಂಗೆ ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ ಮತ್ತು ತಮ್ಮ ಅಭ್ಯರ್ಥಿಗಳಿಗೆ ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವಂತೆ ಹೇಳಿದ್ದಾರೆ.

Maharashtra Assembly Election: ಮಹಾರಾಷ್ಟ್ರ ಚುನಾವಣೆಯಿಂದ ಹಿಂದೆ ಸರಿದ ಮನೋಜ್ ಜಾರಂಗೆ ಪಾಟೀಲ್
ಮನೋಜ್ ಜಾರಂಗೆ ಪಾಟೀಲ್
ನಯನಾ ರಾಜೀವ್
|

Updated on: Nov 04, 2024 | 11:58 AM

Share

ಮರಾಠ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ಮನೋಜ್ ಜಾರಂಗೆ ಪಾಟೀಲ್  ಮಹಾರಾಷ್ಟ್ರ ಚುನಾವಣೆಯಿಂದ ಹಿಂದೆ ಸರಿದಿದ್ದು , ತಮ್ಮ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ.

ನವೆಂಬರ್ 20 ರ ಚುನಾವಣೆಯಲ್ಲಿ 10-15 ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಹೇಳಿದ ಒಂದು ದಿನದ ನಂತರ ಯೂ-ಟರ್ನ್​ ತೆಗೆದುಕೊಂಡಿದ್ದಾರೆ. ಜಾಲ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ನಿರ್ಧಾರವನ್ನು ಒತ್ತಡದಿಂದ ತೆಗೆದುಕೊಂಡಿಲ್ಲ, ಮೀಸಲಾತಿ ಕುರಿತ ಅಭಿಯಾನ ಮುಂದುವರೆಯುವುದು ಎಂದು ಸ್ಪಷ್ಟಪಡಿಸಿದರು.

ಈ ಚುನಾವಣೆಯಲ್ಲಿ ದಲಿತ ಮತ್ತು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಹೊರಟಿದ್ದೆವು.ಆದರೆ, ಒಂದು ಜಾತಿಯ ಬಲದ ಮೇಲೆ ಚುನಾವಣೆಗೆ ಸ್ಪರ್ಧಿಸಿ ಗೆಲ್ಲಲು ಸಾಧ್ಯವಿಲ್ಲ ಎಂದರು.

ಮತ್ತಷ್ಟು ಓದಿ: Sharad Pawar: ಶರದ್ ಪವಾರ್ ಒಬಿಸಿ ವರ್ಗಕ್ಕೆ ಸೇರಿದವರೇ? ವೈರಲ್ ಆದ ಜಾತಿ ಪ್ರಮಾಣಪತ್ರದ ನಿಜಾಂಶವೇನು?

ಯಾರನ್ನು ಸೋಲಿಸಬೇಕು ಎಂಬುದನ್ನು ಜನರೇ ನಿರ್ಧರಿಸಬೇಕು, ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸುವುದಿಲ್ಲ ಎಂದು ಜಾರಂಗೆ ಹೇಳಿದರು. ನಾವು ರಾಜಕೀಯಕ್ಕೆ ಹೊಸಬರು, ನಾವು ಅಭ್ಯರ್ಥಿಯನ್ನು ಕಣಕ್ಕಿಳಿಸಿ, ಅವರು ಸೋತರೆ, ಅದು ಜಾತಿಗೆ ನಾಚಿಕೆಗೇಡಿನ ಸಂಗತಿಯಾಗಲಿದೆ. ಆದ್ದರಿಂದ ಎಲ್ಲಾ ಮರಾಠಾ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆಯಲು ನಾನು ವಿನಂತಿಸುತ್ತೇನೆ ಎಂದು ಅವರು ಹೇಳಿದರು. ನವೆಂಬರ್ 4 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಮರಾಠ ಸಮುದಾಯಕ್ಕೆ ರಾಜಕೀಯಕ್ಕೆ ಪ್ರವೇಶಿಸಿ ಮರಾಠ ಮೀಸಲಾತಿ ಪಡೆಯುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಆಗಸ್ಟ್ 6 ರಂದು ಜಾರಂಗೆ ಹೇಳಿದ್ದರು. ಆಗ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ಫೆಬ್ರವರಿಯಲ್ಲಿ, ಮಹಾರಾಷ್ಟ್ರ ಶಾಸಕಾಂಗವು ರಾಜ್ಯದ ಜನಸಂಖ್ಯೆಯ ಶೇಕಡಾ 30 ಕ್ಕಿಂತ ಹೆಚ್ಚು ಜನರನ್ನು ಒಳಗೊಂಡಿರುವ ಮರಾಠರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಪ್ರತ್ಯೇಕ ವರ್ಗದ ಅಡಿಯಲ್ಲಿ ಶೇಕಡಾ 10 ರಷ್ಟು ಮೀಸಲಾತಿಯನ್ನು ಒದಗಿಸುವ ಮಸೂದೆಯನ್ನು ಅಂಗೀಕರಿಸಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ