AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇ.50ರಷ್ಟು ಮೀಸಲಾತಿಯನ್ನು ಲಕ್ಷ್ಮಣರೇಖೆಯಂತೆ ಪಾಲಿಸಬೇಕು; ಮರಾಠಾ ಮಿಸಲಾತಿ ಕುರಿತು ಹಿರಿಯ ವಕೀಲ ಅರವಿಂದ ದಾತಾರ್ ವಾದ

Maratha Reservation: ಮಹಾರಾಷ್ಟ್ರದ ಮರಾಠಾ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಒದಗಿಸಲು ಅನುವು ಮಾಡಿಕೊಟ್ಟಿದ್ದ ಮಹಾರಾಷ್ಟ್ರ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದ ವರ್ಗಗಳ ಕಾಯ್ದೆ 2018ರ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್​ ವಿಚಾರಣೆ ನಡೆಸುತ್ತಿದೆ.

ಶೇ.50ರಷ್ಟು ಮೀಸಲಾತಿಯನ್ನು ಲಕ್ಷ್ಮಣರೇಖೆಯಂತೆ ಪಾಲಿಸಬೇಕು; ಮರಾಠಾ ಮಿಸಲಾತಿ ಕುರಿತು ಹಿರಿಯ ವಕೀಲ ಅರವಿಂದ ದಾತಾರ್ ವಾದ
ಸುಪ್ರೀಂ ಕೋರ್ಟ್​
Follow us
guruganesh bhat
| Updated By: Skanda

Updated on: Mar 16, 2021 | 11:00 AM

ದೆಹಲಿ: ಶೇ 50 ರಷ್ಟು ಮೀಸಲಾತಿ ಲಕ್ಷ್ಮಣ ರೇಖೆಯಂತಿರಬೇಕು.ಯಾವುದೇ ಕಾರಣಕ್ಕೂ ಈ ಲಕ್ಷ್ಮಣರೇಖೆಯನ್ನು ಮೀರಿ ರಾಜ್ಯಗಳು‌ ಮೀಸಲಾತಿ‌ ನೀಡಬಾರದು ಎಂದು ಹಿರಿಯ ವಕೀಲ ಅರವಿಂದ ದಾತಾರ್ ಮರಾಠಾ ಮೀಸಲಾತಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿದ್ದಾರೆ. ಮಹಾರಾಷ್ಟ್ರದ ಮರಾಠಾ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಒದಗಿಸಲು ಅನುವು ಮಾಡಿಕೊಟ್ಟಿದ್ದ ಮಹಾರಾಷ್ಟ್ರ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದ ವರ್ಗಗಳ ಕಾಯ್ದೆ 2018ರ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್​ ವಿಚಾರಣೆ ನಡೆಸುತ್ತಿದೆ.

ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಲ್. ನಾಗೇಶ್ವರ ರಾವ್, ಎಸ್. ಅಬ್ದುಲ್ ನಝೀರ್, ಹೇಮಂತ್ ಗುಪ್ತಾ ಮತ್ತು ರವೀಂದ್ರ ಭಟ್ ಅವರುಗಳಿದ್ದ ನ್ಯಾಯಪೀಠ ಈ ಪ್ರಕರಣ ಆಲಿಸುತ್ತಿದ್ದು, ನಿನ್ನೆ (ಮಾರ್ಚ್ 15) ಬೆಳಗ್ಗಿನಿಂದ ಮಧ್ಯಾಹ್ನದವರೆಗೂ ವಾದವಿವಾದ ನಿರಂತರವಾಗಿ ಮುಂದುವರೆದಿತ್ತು. 1992ರಲ್ಲಿ ಇಂದ್ರಾ ಸಾಹ್ನೇ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪಿನಲ್ಲಿ ಎಸ್​ಸಿ, ಎಸ್​ಟಿ ಮತ್ತು ಹಿಂದುಳಿದ ಸಮುದಾಯಗಳಿಗೆ ಶೇ.50 ಮೀಸಲಾತಿ ಒದಗಿಸಿರುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು.

ಮರಾಠಾ ಸಮುದಾಯವು ಶೈಕ್ಷಣಿಕ, ಸಾಮಾಜಿಕ ಮತ್ತು ಉದ್ಯೋಗ ರಂಗಗಳಲ್ಲಿ ಹಿಂದುಳಿದಿದೆ ಎಂದು ಸಲ್ಲಿಸಲಾಗಿದ್ದ ಎಂ.ಜಿ.ಗಾಯಕ್​ವಾಡ್ ವರದಿಯು ದೋಷಪೂರಿತವಾಗಿದೆ ಎಂದು ಹಿರಿಯ ವಕೀಲ ಶ್ಯಾಮ್ ದಿವಾನ್ ವಾದಿಸಿದರು. ಎಂ.ಜಿ.ಗಾಯಕ್​ವಾಡ್ ವರದಿ ಮರಾಠಾ ಸಮುದಾಯ ರಾಜಕೀಯ ಪ್ರಾಬಲ್ಯ ಹೊಂದಿರುವುದನ್ನು ಗುರುತಿಸುವಲ್ಲಿ ವಿಫಲವಾಗಿದೆ ಎಂದು ಅವರು ಪ್ರಸ್ತಾಪಿಸಿದರು. ಮರಾಠ ಸಮುದಾಯದಲ್ಲಿ ನಾಗರಿಕರು ಮುಖ್ಯಮಂತ್ರಿ, ಸಚಿವರು ಸಹ ಆಗಿದ್ದಾರೆ. ಅಷ್ಟೇ ಅಲ್ಲದೇ ಐಎಎಸ್, ಐಎಫ್​ಎಸ್​ನಂತಹ ಆಡಳಿತಾತ್ಮಕ ಉನ್ನತ ಶ್ರೇಣಿಯ ಹುದ್ದೆಗಳನ್ನು ಸಹ ಅಲಂಕರಿಸಿದ್ದಾರೆ. ಕಲ್ಕೇಕರ್ ವರದಿಯು ಮರಾಠಾ ಸಮುದಾಯವು ಆಡಳಿತದಲ್ಲಿ ಪ್ರಾಬಲ್ಯ ಹೊಂದಿದ ಸಮುದಾಯವಾಗಿದೆ ಎಂದು ವರದಿ ನೀಡಿದೆ ಎಂಬ ಮಾಹಿತಿಯನ್ನು ಹಿರಿಯ ವಕೀಲ ಶ್ಯಾಮ್ ದಿವಾನ್ ಪ್ರಸ್ತಾಪಿಸಿದರು. ಈ ಪ್ರಕರಣದ ವಾದ ವಿವಾದಗಳು ನಿನ್ನೆಯಿಡೀ ಸುಪ್ರೀಂ ಕೋರ್ಟ್​ನ ಅಂಗಳದಲ್ಲಿ ನಡೆದಿದ್ದು, ಮುಂದಿನ ಬೆಳವಣಿಗೆಗಳಿಗಾಗಿ ಕಾದುಕೂರುವಂತಾಗಿದೆ.

ಕರ್ನಾಟಕದಲ್ಲಿ ನಡೆಯುತ್ತಿರುವ ಪಂಚಮಸಾಲಿ ಮೀಸಲು ಹೋರಾಟದ ಹಿನ್ನೆಲೆಯಲ್ಲಿ ಈ ವಾದ ವಿವಾದಗಳಿಂದ ಹೊರಹೊಮ್ಮುವ ಸುಪ್ರಿಂ ಕೋರ್ಟ್​ನ ತೀರ್ಪು ಕುತೂಹಲ ಹುಟ್ಟಿಸಿದೆ.

ಇದನ್ನೂ ಓದಿ: ಚುನಾವಣಾ ಆಯುಕ್ತರಾಗಿ ಸರ್ಕಾರಿ ಅಧಿಕಾರಿಗಳ ನೇಮಕ ಸಲ್ಲ; ಸುಪ್ರೀಂ ಕೋರ್ಟ್

ಪಂಚಮಸಾಲಿ ಮೀಸಲಾತಿ ನೀಡಲು ಪೂರಕ ದಾಖಲೆ ಸಲ್ಲಿಸಬೇಕು: ಹಿಂದುಳಿದ ವರ್ಗಗಳ ಆಯೋಗದಿಂದ ಸ್ವಾಮೀಜಿಗೆ ನೋಟಿಸ್

ಶೇಂಗಾ ಹೋಳಿಗೆ ತಿಂದು ಮೀಸಲಾತಿ ಹೋರಾಟ ನಿಲ್ಲಿಸಿದ ಪಂಚಮಸಾಲಿ ಜಗದ್ಗುರು ಬಸವ ಜಯಮೃತ್ಯುಂಜಯ ಶ್ರೀ

ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ