AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪರಾಷ್ಟ್ರಪತಿ ಚುನಾವಣೆಗೆ ಯುಪಿಎ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಆಯ್ಕೆ

ಉಪರಾಷ್ಟ್ರಪತಿ ಚುನಾವಣೆಗೆ ಯುಪಿಎ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಆಯ್ಕೆಯಾಗಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಗೆ ಯುಪಿಎ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಆಯ್ಕೆ
ಉಪರಾಷ್ಟ್ರಪತಿ ಚುನಾವಣೆಗೆ ಯುಪಿಎ ಅಭ್ಯರ್ಥಿ ಮಾರ್ಗರೇಟ್ ಆಳ್ವಾ
TV9 Web
| Edited By: ವಿವೇಕ ಬಿರಾದಾರ|

Updated on:Jul 17, 2022 | 8:38 PM

Share

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ (Vice President Election) ಯುಪಿಎ (UPA) ಅಭ್ಯರ್ಥಿಯಾಗಿ ಕರ್ನಾಟಕದ (Karnataka)  ಮಾರ್ಗರೇಟ್ ಆಳ್ವ (Margaret Alva) ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ವಿಪಕ್ಷಗಳ ಸಭೆ ಬಳಿಕ ಶರದ್ ಪವಾರ್ ಮಾರ್ಗರೇಟ್ ಆಳ್ವ ಅವರ ಹೆಸರು ಘೋಷಿಸಿದ್ದಾರೆ. ರಾಜಸ್ಥಾನ, ಗೋವಾ, ಗುಜರಾತ್ ಮತ್ತು ಉತ್ತರಾಖಂಡ್​​ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.

ನನ್ನ ಆಯ್ಕೆ ಹೆಮ್ಮೆ ಮತ್ತು ಗೌರವ ತಂದಿದೆ. ನನ್ನ ಮೇಲೆ ನಂಬಿಕೆ ಇಟ್ಟ ಎಲ್ಲಾ ವಿಪಕ್ಷ ನಾಯಕರಿಗೆ ವಂದನೆಗಳು ಎಂದು ಮಾರ್ಗರೆಟ್ ಆಳ್ವ ಟ್ವಿಟ್​​ ಮಾಡಿದ್ದಾರೆ

ಭಾರತದ ಉಪ ರಾಷ್ಟ್ರಪತಿ ಸ್ಥಾನಕ್ಕೆ  ಅಭ್ಯರ್ಥಿಯಾಗಿ ವು ಪಶ್ಚಿಮ ಬಂಗಾಳ ರಾಜ್ಯಪಾಲರಾಗಿರುವ ಜಗದೀಪ್ ಧನ್ಖರ್ ಅವರನ್ನು ಆಯ್ಕೆ ಮಾಡಿದೆ. ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದ್ದು, ಆಗಸ್ಟ್ 6 ರಂದು ಚುನಾವಣೆ ನಿಗದಿಯಾಗಿದೆ.

ನವದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆಯ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್​ಡಿಎ ಅಭ್ಯರ್ಥಿಯಾಗಿ ಪ್ರಸ್ತುತ ಪಶ್ಚಿಮ ಬಂಗಾಳ ರಾಜ್ಯಪಾಲರಾಗಿರುವ ಜಗದೀಪ್​ ಧನ್ಖರ್ ಅವರ ಹೆಸರನ್ನು ಪ್ರಕಟಿಸಿದರು.

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ ಮತ್ತು ರಾಜನಾಥ್ ಸಿಂಗ್ ಸೇರಿದಂತೆ ಇತರೆ ಪ್ರಮುಖ ನಾಯಕರು ಪಕ್ಷದ ಪ್ರಧಾನ ಕಚೇರಿಯಲ್ಲಿ ಶನಿವಾರ ಭೇಟಿಯಾಗಿ ಸಭೆ ನಡೆಸಿದರು.

ಎನ್​ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧನ್ಖರ್‌ ಅವರಿಗೆ YSRCP ಬೆಂಬಲ ನೀಡುತ್ತದೆ ಎಂದು  ಆಂಧ್ರಪ್ರದೇಶ ಮುಖ್ಯಮಂತ್ರಿ ವೈ. ಎಸ್. ಜಗನ್ಮೋಹನ್ ರೆಡ್ಡಿ​​​ ಹೇಳಿದ್ದಾರೆ. ಹಾಗೇ ಬಿಜು ಜನತಾದಳ ಮತ್ತು  ಎಐಎಡಿಎಂಕೆ ಕೂಡ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

Published On - 4:59 pm, Sun, 17 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ