AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿ ಅವಾಂತರದಿಂದ ಮಾರುಕಟ್ಟೆಗೆ ಬೆಂಕಿ, 200 ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಸ್ಥಳೀಯ ಮಾರುಕಟ್ಟೆಯಲ್ಲಿ ಇಂದು ಮುಂಜಾನೆ ಭಾರೀ ಬೆಂಕಿ ಕಾಣಿಸಿಕೊಂಡಿರುವ ಘಟನೆಯು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸಂಭವಿಸಿದೆ. ಸುಮಾರು 200 ಅಂಗಡಿಗಳು ಬೂದಿಯಾಗಿವೆ.

ಪಟಾಕಿ ಅವಾಂತರದಿಂದ ಮಾರುಕಟ್ಟೆಗೆ ಬೆಂಕಿ, 200 ಕ್ಕೂ ಹೆಚ್ಚು ಅಂಗಡಿಗಳು ಭಸ್ಮ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 25, 2022 | 3:50 PM

Share

ಇಟಾನಗರ: ಸ್ಥಳೀಯ ಮಾರುಕಟ್ಟೆಯಲ್ಲಿ ಇಂದು ಮುಂಜಾನೆ ಭಾರೀ ಬೆಂಕಿ ಕಾಣಿಸಿಕೊಂಡಿರುವ ಘಟನೆಯು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸಂಭವಿಸಿದೆ. ಸುಮಾರು 200 ಅಂಗಡಿಗಳು ಬೂದಿಯಾಗಿವೆ. ಬೆಳಗಿನ ಜಾವ 3:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇಟಾನಗರ ಸಮೀಪದ ನಹರ್ಲಗುನ್ ಡೈಲಿ ಮಾರ್ಕೆಟ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿಯಲ್ಲಿ 3 ಕೋಟಿ ರೂ.ಗಿಂತಲೂ ಹೆಚ್ಚು ಆಸ್ತಿ ಮತ್ತು ಸರಕುಗಳು ನಾಶವಾಗಿವೆ, ಈ ಪಟಾಕಿ ಸಿಡಿಸಿದ ಮತ್ತು ದೀಪದಿಂದ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಬಿದಿರು ಮತ್ತು ಮರದಿಂದ ತಯಾರಿಸಿದ ಒಣ ವಸ್ತುಗಳನ್ನು ಮಾರುಕಟ್ಟೆಯಲ್ಲಿ ಹೇರಳವಾಗಿ ಸಂಗ್ರಹಿಸಿಟ್ಟಿದ್ದರಿಂದ ಬೆಂಕಿಯು ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ಠಾಣೆ ಸಮೀಪವೇ ಮಾರುಕಟ್ಟೆ ಇದ್ದರೂ ಅಗ್ನಿಶಾಮಕ ಅಧಿಕಾರಿಗಳು ಸಕಾಲಕ್ಕೆ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಅಗ್ನಿಶಾಮಕ ಠಾಣೆಗೆ ಬಂದು ಮಾಹಿತಿ ನೀಡಿದರು. ಕಛೇರಿಯಲ್ಲಿ ಯಾವುದೇ ಸಿಬ್ಬಂದಿ ಪತ್ತೆಯಾಗಿಲ್ಲ ಎಂದು ಅಂಗಡಿಕಾರರು ತಿಳಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬರುವರೆಗೆ ನಾವೇ ಬೆಂಕಿ ನಂದಿಸಲು ಪ್ರಯತ್ನ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪೊಲೀಸರೂ ಯಾವುದೇ ಕ್ರಮಕೈಗೊಂಡಿಲ್ಲ. ಇವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ನಹರ್ಲಗುನ್ ಬಜಾರ್ ಕಲ್ಯಾಣ ಸಮಿತಿ ಅಧ್ಯಕ್ಷ ಕಿಪಾ ನಾಯ್ ಅವರು ಸುದ್ದಿ ಸಂಸ್ಥೆ ಪಿಟಿಐಗೆ ಉಲ್ಲೇಖಿಸಿದ್ದಾರೆ. ಅರುಣಾಚಲ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ (ಎಸಿಸಿ ಮತ್ತು ಐ) ಅಧ್ಯಕ್ಷ ತರ್ಹ್ ನಾಚುಂಗ್ ಕರ್ತವ್ಯದಲ್ಲಿರುವ ಎಲ್ಲಾ ಅಗ್ನಿಶಾಮಕ ಸಿಬ್ಬಂದಿಯನ್ನು ನಿರ್ಲಕ್ಷ್ಯಕ್ಕಾಗಿ ಅವರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಎಸಿಸಿ ಮತ್ತು ಐ ಸಹಕಾರದೊಂದಿಗೆ ರಾಜ್ಯ ಸರ್ಕಾರವು ಮಾರುಕಟ್ಟೆಯನ್ನು ಮರುನಿರ್ಮಿಸಲಿದೆ ಎಂದು ಇಟಾನಗರ ಶಾಸಕ ಟೆಚಿ ಕಾಸೊ ಸುದ್ದಿಗಾರರಿಗೆ ತಿಳಿಸಿದರು.

Published On - 3:47 pm, Tue, 25 October 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ