AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿ ಅವಾಂತರದಿಂದ ಮಾರುಕಟ್ಟೆಗೆ ಬೆಂಕಿ, 200 ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಸ್ಥಳೀಯ ಮಾರುಕಟ್ಟೆಯಲ್ಲಿ ಇಂದು ಮುಂಜಾನೆ ಭಾರೀ ಬೆಂಕಿ ಕಾಣಿಸಿಕೊಂಡಿರುವ ಘಟನೆಯು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸಂಭವಿಸಿದೆ. ಸುಮಾರು 200 ಅಂಗಡಿಗಳು ಬೂದಿಯಾಗಿವೆ.

ಪಟಾಕಿ ಅವಾಂತರದಿಂದ ಮಾರುಕಟ್ಟೆಗೆ ಬೆಂಕಿ, 200 ಕ್ಕೂ ಹೆಚ್ಚು ಅಂಗಡಿಗಳು ಭಸ್ಮ
TV9 Web
| Edited By: |

Updated on:Oct 25, 2022 | 3:50 PM

Share

ಇಟಾನಗರ: ಸ್ಥಳೀಯ ಮಾರುಕಟ್ಟೆಯಲ್ಲಿ ಇಂದು ಮುಂಜಾನೆ ಭಾರೀ ಬೆಂಕಿ ಕಾಣಿಸಿಕೊಂಡಿರುವ ಘಟನೆಯು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸಂಭವಿಸಿದೆ. ಸುಮಾರು 200 ಅಂಗಡಿಗಳು ಬೂದಿಯಾಗಿವೆ. ಬೆಳಗಿನ ಜಾವ 3:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇಟಾನಗರ ಸಮೀಪದ ನಹರ್ಲಗುನ್ ಡೈಲಿ ಮಾರ್ಕೆಟ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿಯಲ್ಲಿ 3 ಕೋಟಿ ರೂ.ಗಿಂತಲೂ ಹೆಚ್ಚು ಆಸ್ತಿ ಮತ್ತು ಸರಕುಗಳು ನಾಶವಾಗಿವೆ, ಈ ಪಟಾಕಿ ಸಿಡಿಸಿದ ಮತ್ತು ದೀಪದಿಂದ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಬಿದಿರು ಮತ್ತು ಮರದಿಂದ ತಯಾರಿಸಿದ ಒಣ ವಸ್ತುಗಳನ್ನು ಮಾರುಕಟ್ಟೆಯಲ್ಲಿ ಹೇರಳವಾಗಿ ಸಂಗ್ರಹಿಸಿಟ್ಟಿದ್ದರಿಂದ ಬೆಂಕಿಯು ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ಠಾಣೆ ಸಮೀಪವೇ ಮಾರುಕಟ್ಟೆ ಇದ್ದರೂ ಅಗ್ನಿಶಾಮಕ ಅಧಿಕಾರಿಗಳು ಸಕಾಲಕ್ಕೆ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಅಗ್ನಿಶಾಮಕ ಠಾಣೆಗೆ ಬಂದು ಮಾಹಿತಿ ನೀಡಿದರು. ಕಛೇರಿಯಲ್ಲಿ ಯಾವುದೇ ಸಿಬ್ಬಂದಿ ಪತ್ತೆಯಾಗಿಲ್ಲ ಎಂದು ಅಂಗಡಿಕಾರರು ತಿಳಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬರುವರೆಗೆ ನಾವೇ ಬೆಂಕಿ ನಂದಿಸಲು ಪ್ರಯತ್ನ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪೊಲೀಸರೂ ಯಾವುದೇ ಕ್ರಮಕೈಗೊಂಡಿಲ್ಲ. ಇವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ನಹರ್ಲಗುನ್ ಬಜಾರ್ ಕಲ್ಯಾಣ ಸಮಿತಿ ಅಧ್ಯಕ್ಷ ಕಿಪಾ ನಾಯ್ ಅವರು ಸುದ್ದಿ ಸಂಸ್ಥೆ ಪಿಟಿಐಗೆ ಉಲ್ಲೇಖಿಸಿದ್ದಾರೆ. ಅರುಣಾಚಲ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ (ಎಸಿಸಿ ಮತ್ತು ಐ) ಅಧ್ಯಕ್ಷ ತರ್ಹ್ ನಾಚುಂಗ್ ಕರ್ತವ್ಯದಲ್ಲಿರುವ ಎಲ್ಲಾ ಅಗ್ನಿಶಾಮಕ ಸಿಬ್ಬಂದಿಯನ್ನು ನಿರ್ಲಕ್ಷ್ಯಕ್ಕಾಗಿ ಅವರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಎಸಿಸಿ ಮತ್ತು ಐ ಸಹಕಾರದೊಂದಿಗೆ ರಾಜ್ಯ ಸರ್ಕಾರವು ಮಾರುಕಟ್ಟೆಯನ್ನು ಮರುನಿರ್ಮಿಸಲಿದೆ ಎಂದು ಇಟಾನಗರ ಶಾಸಕ ಟೆಚಿ ಕಾಸೊ ಸುದ್ದಿಗಾರರಿಗೆ ತಿಳಿಸಿದರು.

Published On - 3:47 pm, Tue, 25 October 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!