AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ವಿವಾಹ ಕಾಯ್ದೆಯಡಿ ಹಿಂದೂ-ಮುಸ್ಲಿಂ ವಿವಾಹ ಮುಸ್ಲಿಂ ಕಾನೂನಿನ ಅಡಿಯಲ್ಲಿ ಮಾನ್ಯವಲ್ಲ: ನ್ಯಾಯಾಲಯ

"ಮಹಮದೀಯನ್ ಕಾನೂನಿನ ಪ್ರಕಾರ, ವಿಗ್ರಹಾರಾಧಕ ಅಥವಾ ಅಗ್ನಿಯನ್ನು ಪೂಜಿಸುನ ಹುಡುಗಿಯೊಂದಿಗೆ ಮುಸ್ಲಿಂ ಹುಡುಗನ ವಿವಾಹವು ಮಾನ್ಯ ವಿವಾಹವಲ್ಲ, ವಿಶೇಷ ವಿವಾಹ ಕಾಯಿದೆಯಡಿಯಲ್ಲಿ ವಿವಾಹವನ್ನು ನೋಂದಾಯಿಸಿದರೂ, ವಿವಾಹವು ಮಾನ್ಯತೆ ಪಡೆಯುವುದಿಲ್ಲ. ಇದು ಸರಿಯಾದ ಮದುವೆ ಅಲ್ಲ ಎಂದು ಹೈಕೋರ್ಟ್ ಮೇ 27 ರಂದು ತನ್ನ ಆದೇಶದಲ್ಲಿ ಹೇಳಿದೆ.

ವಿಶೇಷ ವಿವಾಹ ಕಾಯ್ದೆಯಡಿ ಹಿಂದೂ-ಮುಸ್ಲಿಂ ವಿವಾಹ ಮುಸ್ಲಿಂ ಕಾನೂನಿನ ಅಡಿಯಲ್ಲಿ ಮಾನ್ಯವಲ್ಲ: ನ್ಯಾಯಾಲಯ
ಮದುವೆ
ರಶ್ಮಿ ಕಲ್ಲಕಟ್ಟ
|

Updated on: May 30, 2024 | 8:52 PM

Share

ದೆಹಲಿ ಮೇ 30: ಮುಸ್ಲಿಂ ವ್ಯಕ್ತಿ ಮತ್ತು ಹಿಂದೂ (Hindu) ಮಹಿಳೆಯ ನಡುವಿನ ವಿವಾಹವು ಮುಸ್ಲಿಂ ವೈಯಕ್ತಿಕ ಕಾನೂನಿನ ಅಡಿಯಲ್ಲಿ ಮಾನ್ಯವಾಗಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ (Madhya Pradesh High Court) ತೀರ್ಪು ನೀಡಿದೆ. ವಿಶೇಷ ವಿವಾಹ ಕಾಯಿದೆ (Special Marriage Act), 1954 ರ ಅಡಿಯಲ್ಲಿ ಅಂತರ್ ಧರ್ಮೀಯ ವಿವಾಹವನ್ನು ನೋಂದಾಯಿಸಲು ಪೊಲೀಸ್ ರಕ್ಷಣೆಗಾಗಿ ಸಲ್ಲಿಸಲಾದ ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ನ್ಯಾಯಮೂರ್ತಿ ಗುರ್ಪಾಲ್ ಸಿಂಗ್ ಅಹ್ಲುವಾಲಿಯಾ ಅವರು, ವಿಶೇಷ ವಿವಾಹ ಕಾಯ್ದೆಯಡಿಯಲ್ಲಿ ವಿವಾಹವಾಗಿದ್ದರೂ ಸಹ ಮುಸ್ಲಿಂ ವ್ಯಕ್ತಿ ಮತ್ತು ಹಿಂದೂ ಮಹಿಳೆಯ ನಡುವಿನ ವಿವಾಹವನ್ನು ಮುಸ್ಲಿಂ ಕಾನೂನಿನ ಅಡಿಯಲ್ಲಿ “ಸರಿಯಾದ ವಿವಾಹವಲ್ಲ” ಎಂದು ಪರಿಗಣಿಸಲಾಗುತ್ತದೆ ಎಂದು ಹೇಳಿರುವುದಾಗಿ ಬಾರ್ ಆ್ಯಂಡ್ ಬೆಂಚ್ ವರದಿ ಮಾಡಿದೆ.

“ಮಹಮದೀಯನ್ ಕಾನೂನಿನ ಪ್ರಕಾರ, ವಿಗ್ರಹಾರಾಧಕ ಅಥವಾ ಅಗ್ನಿಯನ್ನು ಪೂಜಿಸುವ ಹುಡುಗಿಯೊಂದಿಗೆ ಮುಸ್ಲಿಂ ಹುಡುಗನ ವಿವಾಹವು ಮಾನ್ಯ ವಿವಾಹವಲ್ಲ, ವಿಶೇಷ ವಿವಾಹ ಕಾಯಿದೆಯಡಿಯಲ್ಲಿ ವಿವಾಹವನ್ನು ನೋಂದಾಯಿಸಿದರೂ, ವಿವಾಹವು ಮಾನ್ಯತೆ ಪಡೆಯುವುದಿಲ್ಲ. ಇದು ಸರಿಯಾದ ಮದುವೆ ಅಲ್ಲ ಎಂದು ಹೈಕೋರ್ಟ್ ಮೇ 27 ರಂದು ತನ್ನ ಆದೇಶದಲ್ಲಿ ಹೇಳಿದೆ.

ಮುಸ್ಲಿಂ ಪುರುಷ ಮತ್ತು ಹಿಂದೂ ಮಹಿಳೆ ದಂಪತಿಗಳು ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಮಹಿಳೆಯ ಮನೆಯವರು ಅಂತರ್ ಧರ್ಮೀಯ ಸಂಬಂಧವನ್ನು ವಿರೋಧಿಸಿದ್ದು, ಮದುವೆ ಮಾನ್ಯವಾದರೆ ಸಮಾಜದಿಂದ ದೂರವಿರಿಸಲಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಮಹಿಳೆ ತನ್ನ ಮುಸ್ಲಿಂ ಸಂಗಾತಿಯನ್ನು ಮದುವೆಯಾಗಲು ಹೊರಡುವ ಮೊದಲು ತಮ್ಮ ಮನೆಯಿಂದ ಆಭರಣಗಳನ್ನು ತೆಗೆದುಕೊಂಡಿದ್ದಳು ಎಂದು ಕುಟುಂಬ ಹೇಳಿಕೊಂಡಿದೆ. ಅವರ ವಕೀಲರ ಪ್ರಕಾರ, ದಂಪತಿಗಳು ವಿಶೇಷ ವಿವಾಹ ಕಾಯ್ದೆಯಡಿಯಲ್ಲಿ ಮದುವೆಯಾಗಲು ಬಯಸಿದ್ದರು ಆದರೆ ಮದುವೆಗಾಗಿ ಮಹಿಳೆ ಬೇರೆ ಧರ್ಮಕ್ಕೆ ಮತಾಂತರಗೊಳ್ಳಲು ಇಷ್ಟವಿರಲಿಲ್ಲ. ಮತ್ತೊಂದೆಡೆ, ಆ ವ್ಯಕ್ತಿ ಕೂಡ ತನ್ನ ಧರ್ಮವನ್ನು ಬದಲಾಯಿಸಲು ಬಯಸುವುದಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಭಾರತದ ಮೇಲೆ ಚೀನಾ ಆಕ್ರಮಣದ ಆರೋಪ; ವಿವಾದಕ್ಕೀಡಾದ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್

ವಿಶೇಷ ವಿವಾಹ ಕಾಯಿದೆಯಡಿ ವಿವಾಹ ನೋಂದಣಿ ಮಾಡಿಕೊಳ್ಳಲು ವಿವಾಹ ಅಧಿಕಾರಿಯ ಮುಂದೆ ಹಾಜರುಪಡಿಸುವಾಗ ದಂಪತಿಗೆ ಪೊಲೀಸ್ ರಕ್ಷಣೆ ನೀಡಬೇಕು ವಕೀಲರು ಹೇಳಿದ್ದಾಗಿ ಬಾರ್  ಆ್ಯಂಡ್ ಬೆಂಚ್ ವರದಿ ಮಾಡಿದೆ.

ವಿಶೇಷ ವಿವಾಹ ಕಾಯ್ದೆಯಡಿ ಅಂತರ್-ಧರ್ಮೀಯ ವಿವಾಹವು ಮಾನ್ಯವಾಗಿರುತ್ತದೆ ಮತ್ತು ಮುಸ್ಲಿಂ ವೈಯಕ್ತಿಕ ಕಾನೂನನ್ನು ಉಲ್ಲಂಘಿಸುತ್ತದೆ ಎಂದು ವಕೀಲರು ವಾದಿಸಿದರು.

“ವಿಶೇಷ ವಿವಾಹ ಕಾಯಿದೆಯಡಿ ವಿವಾಹವು ವಿವಾಹವನ್ನು ಕಾನೂನುಬದ್ಧಗೊಳಿಸುವುದಿಲ್ಲ, ಇಲ್ಲದಿದ್ದರೆ ವೈಯಕ್ತಿಕ ಕಾನೂನಿನಡಿಯಲ್ಲಿ ನಿಷೇಧಿಸಲಾಗಿದೆ. ವಿಶೇಷ ವಿವಾಹ ಕಾಯಿದೆಯ ಸೆಕ್ಷನ್ 4 ಕಕ್ಷಿದಾರರು ನಿಷೇಧಿತ ಸಂಬಂಧದಲ್ಲಿಲ್ಲದಿದ್ದರೆ, ಮಾತ್ರ ಮದುವೆಯನ್ನು ಮಾಡಬಹುದು ಎಂದು ಹೈಕೋರ್ಟ್ ಗಮನಿಸಿದೆ. ತಮ್ಮ ಧರ್ಮವನ್ನು ಬದಲಾಯಿಸಲು ಅಥವಾ ಲಿವ್-ಇನ್ ಸಂಬಂಧವನ್ನು ಹೊಂದಲು ಸಿದ್ಧರಿಲ್ಲ ಎಂಬ ದಂಪತಿಗಳ ಮನವಿಯನ್ನು ಅದು ತಳ್ಳಿಹಾಕಿದೆ ಎಂದು ಬಾರ್ ಆ್ಯಂಡ್ ಬೆಂಚ್ ವರದಿ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ