AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗು ದತ್ತು ಪಡೆಯಲು ಮದುವೆ ಪ್ರಮಾಣಪತ್ರ ಕಡ್ಡಾಯವಲ್ಲ ಎಂದ ಅಲಹಾಬಾದ್​ ಹೈಕೋರ್ಟ್; ಮಂಗಳಮುಖಿಗೆ ಸಿಕ್ಕ ಸಮ್ಮತಿ !

ತೃತೀಯಲಿಂಗಿ ಹೆಸರು ರೀನಾ.  ಇವರು  2000ನೇ ಇಸ್ವಿಯ  ಡಿಸೆಂಬರ್ 16 ರಂದು ವಾರಣಾಸಿಯ ಅರ್ದಾಲಿ ಬಜಾರ್‌ನ ಮಹಾಬೀರ್ ಮಂದಿರದಲ್ಲಿ ವ್ಯಕ್ತಿಯೊಬ್ಬರನ್ನು ವಿವಾಹವಾದರು.

ಮಗು ದತ್ತು ಪಡೆಯಲು ಮದುವೆ ಪ್ರಮಾಣಪತ್ರ ಕಡ್ಡಾಯವಲ್ಲ ಎಂದ ಅಲಹಾಬಾದ್​ ಹೈಕೋರ್ಟ್; ಮಂಗಳಮುಖಿಗೆ ಸಿಕ್ಕ ಸಮ್ಮತಿ !
ಅಲಹಾಬಾದ್​ ಹೈಕೋರ್ಟ್​
TV9 Web
| Edited By: |

Updated on:Feb 22, 2022 | 11:02 AM

Share

ಮಗುವನ್ನು ದತ್ತು (Child Adopt) ತೆಗೆದುಕೊಳ್ಳಲು ಮದುವೆ ಪ್ರಮಾಣ ಪತ್ರ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್​ ಹೇಳಿದೆ. ಮಗುವನ್ನು ದತ್ತು ತೆಗೆದುಕೊಳ್ಳಲು ಮದುವೆಯಾಗಿರಬೇಕು ಎಂದೇನೂ ಇಲ್ಲ. ಹಿಂದೂ ದತ್ತು ಮತ್ತು ನಿರ್ವಹಣೆ ಕಾಯಿದೆ, 1956ರಡಿಯಲ್ಲಿ ಒಂಟಿ ಪೋಷಕರೂ (Single Parent) ಕೂಡ ಮಗುವನ್ನು ದತ್ತು ಪಡೆಯಬಹುದು ಎಂದು ಸ್ಪಷ್ಟಪಡಿಸಿದೆ. ಮಂಗಳಮುಖಿಯೊಬ್ಬರು ಮಗುವನ್ನು ದತ್ತು ತೆಗೆದುಕೊಳ್ಳುವ ಸಂಬಂಧ ಸಲ್ಲಿಸಿದ್ದ ಅರ್ಜಿ ವಿಚಾಚರಣೆ ಮಾಡಿದ ನ್ಯಾಯಮೂರ್ತಿಗಳಾದ ಡಾ. ಕೌಶಲ್​ ಜಯೇಂದ್ರ ಠಾಕೆ ಮತ್ತು ನ್ಯಾ. ವಿವೇಕ್​ ವರ್ಮಾರ ಪೀಠ ಈ ತೀರ್ಪು ನೀಡಿದೆ.

ಈ ತೃತೀಯಲಿಂಗಿ ಹೆಸರು ರೀನಾ.  ಇವರು  2000ನೇ ಇಸ್ವಿಯ  ಡಿಸೆಂಬರ್ 16 ರಂದು ವಾರಣಾಸಿಯ ಅರ್ದಾಲಿ ಬಜಾರ್‌ನ ಮಹಾಬೀರ್ ಮಂದಿರದಲ್ಲಿ ವ್ಯಕ್ತಿಯೊಬ್ಬರನ್ನು ವಿವಾಹವಾದರು. ನಂತರ ದಂಪತಿ ಮಗುವೊಂದನ್ನು ದತ್ತು ತೆಗೆದುಕೊಳ್ಳಲು ನಿರ್ಧರಿಸಿ, ಪ್ರಕ್ರಿಯೆ ಶುರು ಮಾಡಿದರು. ಆದರೆ ದತ್ತು ತೆಗೆದುಕೊಳ್ಳಬೇಕು ಎಂದರೆ, ಹಿಂದು ವಿವಾಹ ಕಾಯ್ದೆಯಡಿ ವಿವಾಹ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಹೇಳಲಾಯಿತು. ಹೀಗಾಗಿ ದಂಪತಿ ವಾರಾಣಸಿಯ ಸಬ್​ ರಿಜಿಸ್ಟ್ರಾರ್​ ಕಚೇರಿಗೆ 2021ರಲ್ಲಿ ಆನ್​​ಲೈನ್​​ನಲ್ಲಿ ಅರ್ಜಿ ಸಲ್ಲಿಸಿ, ತಮ್ಮ ವಿವಾಹವನ್ನು ನೋಂದಣಿ ಮಾಡಿ, ಅದರ ಪ್ರಮಾಣ ಪತ್ರ ನೀಡುವಂತೆ ಕೋರಿದ್ದರು.  ತೃತೀಯಲಿಂಗಿ ವಿವಾಹವಾಗಿದ್ದರಿಂದ ಅದನ್ನು ನೋಂದಾಯಿಸಲು ಸಾಧ್ಯವಿಲ್ಲ, ಕಾನೂನು ಪ್ರಕಾರ ವಿವಾಹ ಸರ್ಟಿಫಿಕೇಟ್​ ನೀಡಲು ಸಾಧ್ಯವಿಲ್ಲ ಎಂದು ಹೇಳಲಾಯಿತು.

ಅದಾದ ನಂತರ ದಂಪತಿ ಹೈಕೋರ್ಟ್​ ಮೆಟ್ಟಿಲೇರಿ, ತಮಗೆ ಮಗುವನ್ನು ದತ್ತು ತೆಗೆದುಕೊಳ್ಳಬೇಕಾಗಿದೆ. ಹೀಗಾಗಿ ಅದಕ್ಕೆ ಸಂಬಂಧಪಟ್ಟಂತೆ ಮ್ಯಾರೇಜ್​ ಸರ್ಟಿಫಿಕೇಟ್​ ಕೊಡುವಂತೆ ವಾರಾಣಸಿ ಸಬ್​ ರಿಜಿಸ್ಟ್ರಾರ್​ ಕಚೇರಿಗೆ ಸೂಚಿಸಬೇಕು ಎಂದು ಮನವಿ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​, ಹಿಂದು ದತ್ತು ಮತ್ತು ನಿರ್ವಹಣಾ ಕಾಯ್ದೆ 1956ರ ಸೆಕ್ಷನ್​ 7 (ದತ್ತು ತೆಗೆದುಕೊಳ್ಳಲು ಹಿಂದು ಪುರುಷನ ಸಾಮರ್ಥ್ಯ) ಮತ್ತು ಸೆಕ್ಷನ್​ 8 (ದತ್ತು ಸ್ವೀಕರಿಸಲು ಹಿಂದೂ ಮಹಿಳೆಯ ಸಾಮರ್ಥ್ಯ)ಗಳಡಿ ಮಕ್ಕಳನ್ನು ದತ್ತು ಪಡೆಯಲು ವಿವಾಹ ಪ್ರಮಾಣ ಪತ್ರ ಅಗತ್ಯವಿಲ್ಲ ಎಂದು ತೀರ್ಪು ನೀಡಿದೆ.

ಇದನ್ನೂ ಓದಿ: ಅಮಾರೈಟ್ : ‘ಇದು ಗೆಳೆತನದ ಗಣಿತ ಸಾಹೇಬ್‌, ಇಲ್ಲಿ ಎರಡರಲ್ಲಿ ಒಂದು ಕಳೆದರೆ ಏನೂ ಉಳಿಯುವುದಿಲ್ಲ’

Published On - 9:56 am, Tue, 22 February 22

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ