AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ವರ್ಷದ ಮಗುವಾಗಿದ್ದಾಗ ಆಗಿದ್ದ ಮದುವೆಯನ್ನು 20 ವರ್ಷದ ಬಳಿಕ ವಜಾಗೊಳಿಸಿದ ನ್ಯಾಯಾಲಯ

ತನಗೆ 1 ವರ್ಷವಿದ್ದಾಗ ಮದುವೆಯಾಗಿದ್ದು, ತನ್ನ ಗಂಡನೆಂದು ಹೇಳಲಾಗುವ ವ್ಯಕ್ತಿಯೊಂದಿಗೆ ತನಗೆ ಬದುಕಲು ಇಷ್ಟವಿಲ್ಲ ಎಂದು ಆ ಯುವತಿ ಎನ್​ಜಿಓವೊಂದನ್ನು ಸಂಪರ್ಕಿಸಿದ್ದರು. ಆ ಎನ್​ಜಿಓ ಸಲಹೆಯಂತೆ ಆಕೆ ಕೋರ್ಟ್​ ಮೆಟ್ಟಿಲೇರಿದ್ದಳು.

1 ವರ್ಷದ ಮಗುವಾಗಿದ್ದಾಗ ಆಗಿದ್ದ ಮದುವೆಯನ್ನು 20 ವರ್ಷದ ಬಳಿಕ ವಜಾಗೊಳಿಸಿದ ನ್ಯಾಯಾಲಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 09, 2022 | 9:14 AM

Share

ಜೋಧ್‌ಪುರ: ಒಂದು ವರ್ಷದ ಮಗುವಾಗಿದ್ದಾಗಲೇ ವಿವಾಹವಾಗಿದ್ದ 21 ವರ್ಷದ ಯುವತಿಯ ಮದುವೆಯನ್ನು 20 ರ್ಷಗಳ ಬಳಿಕ ಇದೀಗ ರಾಜಸ್ಥಾನದ (Rajasthan) ಕೌಟುಂಬಿಕ ನ್ಯಾಯಾಲಯ ಅನೂರ್ಜಿತಗೊಳಿಸಿದೆ. ಮಗುವಿಗೆ 1 ವರ್ಷವಾಗಿದ್ದಾಗ ಆಕೆಯ ಪೋಷಕರು ತೊಟ್ಟಿಲಿನಲ್ಲೇ ಮದುವೆ (Marriage) ಶಾಸ್ತ್ರ ನೆರವೇರಿಸಿದ್ದರು. ಇಷ್ಟವಿಲ್ಲದ ಈ ಬಾಲ್ಯ ವಿವಾಹದಿಂದ ನೊಂದಿದ್ದ ಯುವತಿಗೆ ಈಗ 21 ವರ್ಷವಾಗಿದ್ದು, ತನಗೆ ನ್ಯಾಯ ಕೊಡಿಸಬೇಕೆಂದು ಕೋರ್ಟ್​ ಮೆಟ್ಟಿಲೇರಿದ್ದಳು.

ತನಗೆ 1 ವರ್ಷವಿದ್ದಾಗ ಮದುವೆಯಾಗಿದ್ದು, ತನ್ನ ಗಂಡನೆಂದು ಹೇಳಲಾಗುವ ವ್ಯಕ್ತಿಯೊಂದಿಗೆ ತನಗೆ ಬದುಕಲು ಇಷ್ಟವಿಲ್ಲ ಎಂದು ಆ ಯುವತಿ ಎನ್​ಜಿಓವೊಂದನ್ನು ಸಂಪರ್ಕಿಸಿದ್ದರು. ಆ ಎನ್​ಜಿಓ ಸಲಹೆಯಂತೆ ಆಕೆ ಕೋರ್ಟ್​ ಮೆಟ್ಟಿಲೇರಿದ್ದಳು. ಈ ಬಗ್ಗೆ ಸಾರಥಿ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಕೀರ್ತಿ ಭಾರತಿ ಮಾತನಾಡಿ, ರೇಖಾ ಎಂಬ ಯುವತಿಯ ಅಜ್ಜನ ನಿಧನದ ನಂತರ ತಮ್ಮ ಹಳ್ಳಿಯ ಹುಡುಗನೊಂದಿಗೆ ಆಕೆಗೆ ಒಂದು ವರ್ಷವಾಗಿದ್ದಾಗಲೇ ಮದುವೆ ಮಾಡಲಾಗಿತ್ತು ಎಂದಿದ್ದಾರೆ.

ಇದನ್ನೂ ಓದಿ: ಲಕ್ನೋ ಹೋಟೆಲ್ ಬೆಂಕಿ ದುರಂತ; ಮದುವೆ ನಿಶ್ಚಯವಾಗಿದ್ದ ಜೋಡಿ ಸಾವಿನಲ್ಲಿ ಒಂದಾದರು!

ಕೆಲವು ವರ್ಷಗಳ ಹಿಂದೆ ‘ಗೌನ’ (ಮದುವೆಯ ನೆರವೇರಿಕೆಗೆ ಸಂಬಂಧಿಸಿದ ಆಚರಣೆ)ಗಾಗಿ ರೇಖಾಳ ಅತ್ತೆಯಂದಿರು ಒತ್ತಡ ಹೇರಿದ್ದರು. ಆಗ ನರ್ಸ್​ ಆಗಲು ತಯಾರಿ ನಡೆಸುತ್ತಿದ್ದ ಆಕೆ ತನ್ನ ಕನಸು ಭಗ್ನಗೊಳ್ಳಲು ಬಯಸಲಿಲ್ಲ. ಹಾಗಾಗಿ ಮದುವೆ ಸಂಪ್ರದಾಯವನ್ನು ನೆರವೇರಿಸಲು ಆಕೆ ನಿರಾಕರಿಸಿದಳು. ಆ ಮದುವೆಯ ಶಾಸ್ತ್ರಗಳಿಗೆ ಒಪ್ಪದ ಆಕೆಯ ಸಂಬಂಧಿಕರು ಜಾತಿ ಪಂಚಾಯತಿ ನಡೆಸಿ ಆಕೆಗೆ 10 ಲಕ್ಷ ರೂ. ದಂಡ ವಿಧಿಸಿ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ ಎಂದು ಕೀರ್ತಿ ಭಾರತಿ ಹೇಳಿದ್ದಾರೆ.

ಗುರುವಾರ ಕೌಟುಂಬಿಕ ನ್ಯಾಯಾಲಯದ ಅಧ್ಯಕ್ಷ ಪ್ರದೀಪ್ ಕುಮಾರ್ ಮೋದಿ ಅವರು ಈ ವಿಚಿತ್ರ ವಿವಾಹವನ್ನು ರದ್ದುಗೊಳಿಸುವಂತೆ ಆದೇಶಿಸಿದ್ದಾರೆ. ಶತಮಾನದಿಂದ ಬಾಲ್ಯವಿವಾಹದ ಅನಿಷ್ಟ ನಿರ್ಮೂಲನೆ ಆಗಿಲ್ಲ. ಈಗ ಎಲ್ಲರೂ ಒಟ್ಟಾಗಿ ಬಾಲ್ಯವಿವಾಹ ನಿರ್ಮೂಲನೆಗೆ ಪಣ ತೊಡಬೇಕು ಎಂದು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ಬಾಲ್ಯ ವಿವಾಹ ಪ್ರಶ್ನಿಸಿದ್ದಕ್ಕೆ ಚಾಕು ಇರಿತ; ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ

ನ್ಯಾಯಾಲಯದ ಆದೇಶದ ನಂತರ ಭಾವುಕರಾದ ರೇಖಾ, ಇಂದು ನನ್ನ ಕನಸು ನನಸಾಗಿದೆ. ಈಗ ನಾನು ನರ್ಸ್ ಆಗುವತ್ತ ಗಮನ ಹರಿಸುವೆ. ಇಂದು ನನ್ನ ಜನ್ಮದಿನ. ನನಗೆ ಇಂದು 21 ವರ್ಷವಾಗಿದೆ. 20 ವರ್ಷ ಹಿಂದಿನ ನನ್ನ ಮದುವೆಯ ರದ್ದುಗೊಳಿಸುವಿಕೆಯು ನನಗೆ ಮತ್ತು ನನ್ನ ಕುಟುಂಬಕ್ಕೆ ಹುಟ್ಟುಹಬ್ಬದ ಉಡುಗೊರೆಯಾಗಿ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ