AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಿ 15 ವರ್ಷಗಳಾದರೂ ಮಕ್ಕಳಿಲ್ಲ; ಗಂಡು ಕರುವನ್ನು ದತ್ತು ಪಡೆದ ದಂಪತಿ

ಗಂಡುಕರುವನ್ನು ದತ್ತು ಪಡೆದ ರೈತ ದಂಪತಿ ಮುಂಡನ (ಕೇಶಮುಂಡನ ಕಾರ್ಯಕ್ರಮ) ಆಯೋಜಿಸಿದ್ದು, ಅತಿಥಿಗಳಿಗೆ ಆಹ್ವಾನ ನೀಡಿದ್ದಾರೆ.ಮುಂಡನ ಕಾರ್ಯಕ್ರಮದಲ್ಲಿ ಸುಮಾರು 500 ಅತಿಥಿಗಳು ಭಾಗಿಯಾಗಿದ್ದರು

ಮದುವೆಯಾಗಿ 15 ವರ್ಷಗಳಾದರೂ ಮಕ್ಕಳಿಲ್ಲ; ಗಂಡು ಕರುವನ್ನು ದತ್ತು ಪಡೆದ ದಂಪತಿ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Dec 18, 2020 | 1:43 PM

Share

ಲಕ್ನೋ: ಉತ್ತರ ಪ್ರದೇಶದ ಶಹಜಾನ್​ಪುರ್​ದ ರೈತ ದಂಪತಿ ವಿಜಯ್ ಪಾಲ್ ಮತ್ತು ರಾಜೇಶ್ವರಿ ದೇವಿ ಅವರಿಗೆ ಮದುವೆಯಾಗಿ 15 ವರ್ಷಗಳಾದರೂ ಮಕ್ಕಳಾಗಿಲ್ಲ. ಹಾಗಾಗಿ ಅವರು ದತ್ತು ಪಡೆಯಲು ತೀರ್ಮಾನಿಸಿದ್ದರು. ವಿಶೇಷವೇನೆಂದರೆ ಅವರು ದತ್ತು ಪಡೆದಿದ್ದು ಗಂಡು ಕರುವನ್ನು!

ಗುರುವಾರ ಗಂಡು ಕರುವನ್ನು ದತ್ತು ಪಡೆದ ಈ ದಂಪತಿ ಅದಕ್ಕೆ ‘ಲಾಲ್ತೂ ಬಾಬಾ’ ಎಂದು ನಾಮಕರಣ ಮಾಡಿದ್ದಾರೆ. ವಿಜಯ್ ಪಾಲ್ ಅವರ ಅಪ್ಪ ಅವರ ಮನೆಯಲ್ಲಿ ಸಾಕಿದ್ದ ಹಸುವಿನ ಕರು ಇದಾಗಿದೆ. ವಿಜಯ್ ಪಾಲ್ ಅವರ ಹೆತ್ತವರು ತೀರಿಕೊಂಡಾಗ ಹಸು ಕೂಡಾ ಸಾವಿಗೀಡಾಗಿತ್ತು.

ಗಂಡು ಕರುವನ್ನು ದತ್ತು ಪಡೆದ ಈ ದಂಪತಿ ಮುಂಡನ (ಕೇಶಮುಂಡನ ಕಾರ್ಯಕ್ರಮ) ಆಯೋಜಿಸಿದ್ದು, ಅತಿಥಿಗಳಿಗೆ ಆಹ್ವಾನ ನೀಡಿದ್ದಾರೆ. ಮುಂಡನ ಕಾರ್ಯಕ್ರಮದಲ್ಲಿ ಸುಮಾರು 500 ಅತಿಥಿಗಳು ಭಾಗಿಯಾಗಿದ್ದರು. ಈ ಕರು ಹುಟ್ಟಿದಾಗಿನಿಂದ ನಮ್ಮ ಜೀವನದ ಜತೆ ಉತ್ತಮ ನಂಟು ಬೆಸೆದು ಕೊಂಡಿದ್ದು, ನಮ್ಮ ಮಗನಂತೆ ನಾವು ಇವನನ್ನು ಸ್ವೀಕರಿಸಿದ್ದೇವೆ. ನಾವು ಗೋವನ್ನು ಅಮ್ಮ ಎಂದು ಪರಿಗಣಿಸುವಾಗ ಗಂಡು ಕರುವನ್ನು ಮಗ ಎಂದು ಯಾಕೆ ಸ್ವೀಕರಿಸಬಾರದು ಎಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯ್ ಪಾಲ್ ಹೇಳಿದ್ದಾರೆ.

ಉತ್ತರ ಪ್ರದೇಶ ಸರ್ಕಾರ ಕಳೆದ ವರ್ಷ ‘ನಿರಾಶ್ರಿತ್/ ಬೇಸಹಾರಾ ಗೋವಂಶ್ ಸಹಭಾಗಿತಾ ಯೋಜನಾ’ ಎಂಬ ಯೋಜನೆಯೊಂದನ್ನು ಜಾರಿಗೆ ತಂದಿತ್ತು. ಈ ಯೋಜನೆ ಪ್ರಕಾರ, ಯಾವುದೇ ವ್ಯಕ್ತಿ ಹಸುವನ್ನು ದತ್ತು ಪಡೆದರೆ ಅದ ಪಾಲನೆ-ಪೋಷಣೆಗಾಗಿ ದಿನಕ್ಕೆ 30 ರೂಪಾಯಿ ನೀಡಲಾಗುತ್ತದೆ.

ಗೋವಿನ ಮೇಲೆ ಕ್ರೌರ್ಯ ಆರೋಪ: ಯೂಟ್ಯೂಬ್, ಫೇಸ್​​ಬುಕ್​​ನಲ್ಲಿರುವ ವಿಡಿಯೊ ತೆಗೆಯಲು ಅಮೂಲ್ ಒತ್ತಾಯ

Published On - 1:36 pm, Fri, 18 December 20

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!