AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಇಚ್ಛೆಯ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ಯುವತಿಯನ್ನು ಕೊಂದು ಸುಟ್ಟು ಹಾಕಿದ ಕುಟುಂಬಸ್ಥರು

ತಮ್ಮ ಇಚ್ಛೆಯ ವಿರುದ್ಧವಾಗಿ ಮಗಳು ಮದುವೆಯಾಗಿದ್ದಾಳೆ ಎನ್ನುವ ಕಾರಣಕ್ಕೆ ಕುಟುಂಬದವರು ಯುವತಿಯನ್ನು ಕೊಂದು, ಸುಟ್ಟು ಹಾಕಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ತಮ್ಮ ಇಚ್ಛೆಯ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ಯುವತಿಯನ್ನು ಕೊಂದು ಸುಟ್ಟು ಹಾಕಿದ ಕುಟುಂಬಸ್ಥರು
ಸಾವು
ನಯನಾ ರಾಜೀವ್
|

Updated on: Jul 05, 2024 | 12:03 PM

Share

ತಮಗೆ ಇಷ್ಟವಿಲ್ಲದಿದ್ದರೂ ಮದುವೆ(Marriage)ಯಾಗಿದ್ದಾಳೆ ಎನ್ನುವ ಕೋಪದಲ್ಲಿ ಕುಟುಂಬದವರು ಮನೆಯ ಮಗಳನ್ನೇ ಕೊಂದು, ಸುಟ್ಟು ಹಾಕಿರುವ ಘಟನೆ ರಾಜಸ್ಥಾನದ ಜಲಾವರ್​ ಜಿಲ್ಲೆಯಲ್ಲಿ ನಡೆದಿದೆ. 20 ವರ್ಷದ ಯುವತಿ ತಮ್ಮ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಳು. ಇದಾದ ಒಂದು ವರ್ಷದ ಬಳಿಕ ಆಕೆಯನ್ನು ಹತ್ಯೆ ಮಾಡಲಾಗಿದೆ.

ಇತ್ತೀಚಿನ ದಿನಗಳಲ್ಲಿ ಮರ್ಯಾದಾ ಹತ್ಯೆಗಳು ಹೆಚ್ಚಾಗಿ ನಡೆಯುತ್ತಿದೆ, ಮಗಳ ಸಂತೋಷವನ್ನು ಧಿಕ್ಕರಿಸಿ, ಕೇವಲ ಗೌರವದ ಬಗ್ಗೆ ಮಾತ್ರ ಆಲೋಚನೆ ಮಾಡಿ ತಪ್ಪು ದಾರಿ ಹಿಡಿಯುವವರ ಸಂಖ್ಯೆ ಹೆಚ್ಚಾಗಿದೆ.

ಎಟಿಎಂನಿಂದ ಹಣ ತೆಗೆಯುತ್ತಿದ್ದಾಗ ಆಕೆಯನ್ನು ಅಪಹರಿಸಿ ನಂತರ ಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಪತಿ ರವೀಂದ್ರ ಭಿಲ್ ಆರೋಪಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ, ಅದರಲ್ಲಿ ಯುವತಿಯನ್ನು ಕೊಂದು ಆಕೆಯ ಅಂತ್ಯಸಂಸ್ಕಾರ ಮಾಡಿರುವುದು ತಿಳಿದುಬಂದಿದೆ. ಸಿಸಿಟಿವಿ ಫೂಟೇಜ್​ನಲ್ಲಿ ನಾಲ್ವರು ವ್ಯಕ್ತಿಗಳು ಈ ಅಪರಾಧದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.

ಮತ್ತಷ್ಟು ಓದಿ: Crime News: 10 ಜನರಿಂದ ಸಾಮೂಹಿಕ ಅತ್ಯಾಚಾರ; ಗರ್ಭಿಣಿಯಾದ 10 ವರ್ಷದ ಬಾಲಕಿ

ಕೊಲೆಯ ಹಿಂದಿನ ಉದ್ದೇಶದ ಬಗ್ಗೆ ತನಿಖೆ ನಡೆಸಲಾಗುತ್ತಿದೆ, ಒಂದು ವರ್ಷದ ಹಿಂದೆ ಭಿಲ್ ತನ್ನ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಶಿಮ್ಲಾ ಕುಶ್ವಾಹಳನ್ನು ವಿವಾಹವಾದರು, ಅಲ್ಲಿಂದ ಮಧ್ಯಪ್ರದೇಶಕ್ಕೆ ತೆರಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್