Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಂತ ವಾಹನದಲ್ಲಿ ಮಾಸ್ಕ್​ ಹಾಕದಿದ್ದರೆ ದಂಡ ಹಾಕುವಂತಿಲ್ಲ! ಮುಂಬೈನಲ್ಲಿ ಜಾರಿಗೆ ಬಂತು ಹೊಸ ನಿಯಮ; ಬೆಂಗಳೂರಿನಲ್ಲಿ ಯಾವಾಗ?

ಮುಂಬೈನಲ್ಲಿ ಭಾನುವಾರದಿಂದಲೇ ಈ ಹೊಸ ನಿಯಮ ಜಾರಿಗೆ ಬಂದಿದೆ. ಸ್ವಂತ ವಾಹನದಲ್ಲಿ ಸಂಚಾರ ಮಾಡುವವರು ಮುಖಕ್ಕೆ ಮಾಸ್ಕ್​ ಹಾಕುವುದು ಕಡ್ಡಾಯವಲ್ಲ ಎಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ ಹೇಳಿದೆ.

ಸ್ವಂತ ವಾಹನದಲ್ಲಿ ಮಾಸ್ಕ್​ ಹಾಕದಿದ್ದರೆ ದಂಡ ಹಾಕುವಂತಿಲ್ಲ! ಮುಂಬೈನಲ್ಲಿ ಜಾರಿಗೆ ಬಂತು ಹೊಸ ನಿಯಮ; ಬೆಂಗಳೂರಿನಲ್ಲಿ ಯಾವಾಗ?
ಪ್ರಾತಿನಿಧಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on:Jan 18, 2021 | 7:02 PM

ಮುಂಬೈ: ಸ್ವಂತ ವಾಹನದಲ್ಲಿ ಸಂಚಾರ ಮಾಡುವಾಗ ಮಾಸ್ಕ್​ ಹಾಕುವ ಅವಶ್ಯಕತೆ ಏನು? ಸಾಮಾನ್ಯವಾಗಿ ಸ್ವಂತ ವಾಹನದಲ್ಲಿ ಕುಟುಂಬದವರು ಹಾಗೂ ಆಪ್ತರೇ ಸಂಚಾರ ಮಾಡುತ್ತಾರೆ. ಹೀಗಾಗಿ, ಸ್ವಂತ ವಾಹನದಲ್ಲಿ ತೆರಳುವಾಗ ಮಾಸ್ಕ್​ ಅವಶ್ಯತೆ ಇಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದರು. ಈ ವಿಚಾರವನ್ನು ಮನಗಂಡ ಬೃಹತ್​ ಮುಂಬೈ ಮಹಾನಗರ ಪಾಲಿಕೆ, ಖಾಸಗಿ ವಾಹನದಲ್ಲಿ ತೆರಳುವವರಿಗೆ ಮುಖ ಧಿರಿಸು ಕಡ್ಡಾಯವಲ್ಲ ಎಂದು ಹೇಳಿದೆ.

ಮುಂಬೈನಲ್ಲಿ ಭಾನುವಾರದಿಂದಲೇ ಈ ಹೊಸ ನಿಯಮ ಜಾರಿಗೆ ಬಂದಿದೆ. ಸ್ವಂತ ವಾಹನದಲ್ಲಿ ಸಂಚಾರ ಮಾಡುವವರು ಮುಖಕ್ಕೆ ಮಾಸ್ಕ್​ ಹಾಕುವುದು ಕಡ್ಡಾಯವಲ್ಲ ಎಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ ಹೇಳಿದೆ. ಉಳಿದಂತೆ ಟ್ಯಾಕ್ಸಿ, ಬಸ್​, ರಿಕ್ಷಾ ಸೇರಿ ಇತರ ಸಾರ್ವಜನಿಕ ಸಾರಿಗೆಯಲ್ಲಿ ಮಾಸ್ಕ್​ ಹಾಕುವುದು ಕಡ್ಡಾಯವಾಗಿದೆ.

ಬೆಂಗಳೂರಲ್ಲೂ ಇದೇ ವಾದ: ಕಾರು ಮತ್ತಿತ್ಯಾದಿ ಸ್ವಂತ ವಾಹನದಲ್ಲಿ ಸಾಗುತ್ತಿರುವ ವೇಳೆ ಮಾಸ್ಕ್​ ಹಾಕಿಲ್ಲ ಎನ್ನುವ ಕಾರಣಕ್ಕೆ ಪೊಲೀಸರು ದಂಡ ಹಾಕಿದ ಸಾಕಷ್ಟು ಉದಾಹರಣೆಗಳು ಬೆಂಗಳೂರಿನಲ್ಲಿ ನಡೆದಿವೆ. ಇದು ಸರಿಯಲ್ಲ ಎನ್ನುವುದು ಸಾರ್ವಜನಿಕರ ವಾದ. ಏಕೆಂದರೆ, ಮನೆ ಮಂದಿಯೇ ಕಾರಿನಲ್ಲಿ ಕೂತಿರುತ್ತಾರೆ. ಅಷ್ಟೇ ಅಲ್ಲ, ಹೊರ ಜಗತ್ತಿನೊಂದಿಗೆ ಇವರು ಸಂಪರ್ಕ ಹೊಂದಿರುವುದಿಲ್ಲ. ಹೀಗಾಗಿ, ಮಾಸ್ಕ್​ ಅವಶ್ಯಕತೆ ಇಲ್ಲ ಎನ್ನುವುದು ಅನೇಕರ ಹೇಳುತ್ತಾ ಬಂದಿದ್ದಾರೆ. ಕೊರೊನಾ ಹಾಟ್​ ಸ್ಪಾಟ್​ ಎನಿಸಿಕೊಂಡ ಮುಂಬೈನಲ್ಲೇ ಈ ನಿಯಮ ಜಾರಿಗೆ ಬಂದಿದೆ. ಹೀಗಿರುವಾಗ ಕರ್ನಾಟಕದಲ್ಲಿ ಈ ನಿಯಮ ಜಾರಿಗೆ ತರಲು ಸಮಸ್ಯೆ ಏನು ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ತಗ್ಗಿಲ್ಲ ಕೊರೊನಾ ಪ್ರಕರಣ ಕರ್ನಾಟಕದಲ್ಲಿ ಈ ಮೊದಲು ನಿತ್ಯ 5 ಸಾವಿರ ಕೊರೊನಾ ಪ್ರಕರಣಗಳು ಬೆಳಕಿಗೆ ಬರುತ್ತಿದ್ದವು. ರಾಜ್ಯದಲ್ಲಿ ಕೊರೊನಾ ಸದ್ಯ ನಿಯಂತ್ರಣಕ್ಕೆ ಬಂದಿದ್ದು, ನಿತ್ಯ ಬರುವ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಮೂರಂಕಿಗೆ ಇಳಿಕೆ ಆಗಿದೆ. ಆದರೆ, ಮಹಾರಾಷ್ಟ್ರದಲ್ಲಿ ಮಾತ್ರ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಭಾನುವಾರ ಹೊಸದಾಗಿ 2,910 ಕೊರೊನಾ ಕೇಸ್​ ಪತ್ತೆ ಆಗಿದ್ದು, ಈ ಮೂಲಕ ಪ್ರಕರಣಗಳ ಸಂಖ್ಯೆ 19,87,678ಕ್ಕೆ ಏರಿಕೆ ಆಗಿದೆ. ಕೊರೊನಾದಿಂದ 50,388 ಜನರು ಮೃತಪಟ್ಟಿದ್ದಾರೆ.

ಕೊರೊನಾ ಬಂದಮೇಲೆ ಪತ್ನಿಯನ್ನು ತಬ್ಬಿಕೊಳ್ಳಲು, ಚುಂಬಿಸಲು ಸಾಧ್ಯವಾಗಿಲ್ಲ: ಫಾರುಕ್​ ಅಬ್ದುಲ್ಲಾ ಬೇಸರ

Published On - 6:08 pm, Mon, 18 January 21

ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್