AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಂತ ವಾಹನದಲ್ಲಿ ಮಾಸ್ಕ್​ ಹಾಕದಿದ್ದರೆ ದಂಡ ಹಾಕುವಂತಿಲ್ಲ! ಮುಂಬೈನಲ್ಲಿ ಜಾರಿಗೆ ಬಂತು ಹೊಸ ನಿಯಮ; ಬೆಂಗಳೂರಿನಲ್ಲಿ ಯಾವಾಗ?

ಮುಂಬೈನಲ್ಲಿ ಭಾನುವಾರದಿಂದಲೇ ಈ ಹೊಸ ನಿಯಮ ಜಾರಿಗೆ ಬಂದಿದೆ. ಸ್ವಂತ ವಾಹನದಲ್ಲಿ ಸಂಚಾರ ಮಾಡುವವರು ಮುಖಕ್ಕೆ ಮಾಸ್ಕ್​ ಹಾಕುವುದು ಕಡ್ಡಾಯವಲ್ಲ ಎಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ ಹೇಳಿದೆ.

ಸ್ವಂತ ವಾಹನದಲ್ಲಿ ಮಾಸ್ಕ್​ ಹಾಕದಿದ್ದರೆ ದಂಡ ಹಾಕುವಂತಿಲ್ಲ! ಮುಂಬೈನಲ್ಲಿ ಜಾರಿಗೆ ಬಂತು ಹೊಸ ನಿಯಮ; ಬೆಂಗಳೂರಿನಲ್ಲಿ ಯಾವಾಗ?
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Jan 18, 2021 | 7:02 PM

Share

ಮುಂಬೈ: ಸ್ವಂತ ವಾಹನದಲ್ಲಿ ಸಂಚಾರ ಮಾಡುವಾಗ ಮಾಸ್ಕ್​ ಹಾಕುವ ಅವಶ್ಯಕತೆ ಏನು? ಸಾಮಾನ್ಯವಾಗಿ ಸ್ವಂತ ವಾಹನದಲ್ಲಿ ಕುಟುಂಬದವರು ಹಾಗೂ ಆಪ್ತರೇ ಸಂಚಾರ ಮಾಡುತ್ತಾರೆ. ಹೀಗಾಗಿ, ಸ್ವಂತ ವಾಹನದಲ್ಲಿ ತೆರಳುವಾಗ ಮಾಸ್ಕ್​ ಅವಶ್ಯತೆ ಇಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದರು. ಈ ವಿಚಾರವನ್ನು ಮನಗಂಡ ಬೃಹತ್​ ಮುಂಬೈ ಮಹಾನಗರ ಪಾಲಿಕೆ, ಖಾಸಗಿ ವಾಹನದಲ್ಲಿ ತೆರಳುವವರಿಗೆ ಮುಖ ಧಿರಿಸು ಕಡ್ಡಾಯವಲ್ಲ ಎಂದು ಹೇಳಿದೆ.

ಮುಂಬೈನಲ್ಲಿ ಭಾನುವಾರದಿಂದಲೇ ಈ ಹೊಸ ನಿಯಮ ಜಾರಿಗೆ ಬಂದಿದೆ. ಸ್ವಂತ ವಾಹನದಲ್ಲಿ ಸಂಚಾರ ಮಾಡುವವರು ಮುಖಕ್ಕೆ ಮಾಸ್ಕ್​ ಹಾಕುವುದು ಕಡ್ಡಾಯವಲ್ಲ ಎಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ ಹೇಳಿದೆ. ಉಳಿದಂತೆ ಟ್ಯಾಕ್ಸಿ, ಬಸ್​, ರಿಕ್ಷಾ ಸೇರಿ ಇತರ ಸಾರ್ವಜನಿಕ ಸಾರಿಗೆಯಲ್ಲಿ ಮಾಸ್ಕ್​ ಹಾಕುವುದು ಕಡ್ಡಾಯವಾಗಿದೆ.

ಬೆಂಗಳೂರಲ್ಲೂ ಇದೇ ವಾದ: ಕಾರು ಮತ್ತಿತ್ಯಾದಿ ಸ್ವಂತ ವಾಹನದಲ್ಲಿ ಸಾಗುತ್ತಿರುವ ವೇಳೆ ಮಾಸ್ಕ್​ ಹಾಕಿಲ್ಲ ಎನ್ನುವ ಕಾರಣಕ್ಕೆ ಪೊಲೀಸರು ದಂಡ ಹಾಕಿದ ಸಾಕಷ್ಟು ಉದಾಹರಣೆಗಳು ಬೆಂಗಳೂರಿನಲ್ಲಿ ನಡೆದಿವೆ. ಇದು ಸರಿಯಲ್ಲ ಎನ್ನುವುದು ಸಾರ್ವಜನಿಕರ ವಾದ. ಏಕೆಂದರೆ, ಮನೆ ಮಂದಿಯೇ ಕಾರಿನಲ್ಲಿ ಕೂತಿರುತ್ತಾರೆ. ಅಷ್ಟೇ ಅಲ್ಲ, ಹೊರ ಜಗತ್ತಿನೊಂದಿಗೆ ಇವರು ಸಂಪರ್ಕ ಹೊಂದಿರುವುದಿಲ್ಲ. ಹೀಗಾಗಿ, ಮಾಸ್ಕ್​ ಅವಶ್ಯಕತೆ ಇಲ್ಲ ಎನ್ನುವುದು ಅನೇಕರ ಹೇಳುತ್ತಾ ಬಂದಿದ್ದಾರೆ. ಕೊರೊನಾ ಹಾಟ್​ ಸ್ಪಾಟ್​ ಎನಿಸಿಕೊಂಡ ಮುಂಬೈನಲ್ಲೇ ಈ ನಿಯಮ ಜಾರಿಗೆ ಬಂದಿದೆ. ಹೀಗಿರುವಾಗ ಕರ್ನಾಟಕದಲ್ಲಿ ಈ ನಿಯಮ ಜಾರಿಗೆ ತರಲು ಸಮಸ್ಯೆ ಏನು ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ತಗ್ಗಿಲ್ಲ ಕೊರೊನಾ ಪ್ರಕರಣ ಕರ್ನಾಟಕದಲ್ಲಿ ಈ ಮೊದಲು ನಿತ್ಯ 5 ಸಾವಿರ ಕೊರೊನಾ ಪ್ರಕರಣಗಳು ಬೆಳಕಿಗೆ ಬರುತ್ತಿದ್ದವು. ರಾಜ್ಯದಲ್ಲಿ ಕೊರೊನಾ ಸದ್ಯ ನಿಯಂತ್ರಣಕ್ಕೆ ಬಂದಿದ್ದು, ನಿತ್ಯ ಬರುವ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಮೂರಂಕಿಗೆ ಇಳಿಕೆ ಆಗಿದೆ. ಆದರೆ, ಮಹಾರಾಷ್ಟ್ರದಲ್ಲಿ ಮಾತ್ರ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಭಾನುವಾರ ಹೊಸದಾಗಿ 2,910 ಕೊರೊನಾ ಕೇಸ್​ ಪತ್ತೆ ಆಗಿದ್ದು, ಈ ಮೂಲಕ ಪ್ರಕರಣಗಳ ಸಂಖ್ಯೆ 19,87,678ಕ್ಕೆ ಏರಿಕೆ ಆಗಿದೆ. ಕೊರೊನಾದಿಂದ 50,388 ಜನರು ಮೃತಪಟ್ಟಿದ್ದಾರೆ.

ಕೊರೊನಾ ಬಂದಮೇಲೆ ಪತ್ನಿಯನ್ನು ತಬ್ಬಿಕೊಳ್ಳಲು, ಚುಂಬಿಸಲು ಸಾಧ್ಯವಾಗಿಲ್ಲ: ಫಾರುಕ್​ ಅಬ್ದುಲ್ಲಾ ಬೇಸರ

Published On - 6:08 pm, Mon, 18 January 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!