AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿನ್ನು ಕಾರಿನಲ್ಲಿ ಒಬ್ಬರೇ ಹೋಗುವಾಗ ಮಾಸ್ಕ್ ಧರಿಸಬೇಕಾಗಿಲ್ಲ

ದೆಹಲಿಯಲ್ಲಿ ತಮ್ಮ ಕಾರಿನಲ್ಲಿ ಏಕಾಂಗಿಯಾಗಿ ಚಾಲನೆ ಮಾಡುವವರು ಇನ್ನು ಮುಂದೆ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ರಾಷ್ಟ್ರೀಯ ರಾಜಧಾನಿಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಇಂದು ಕೋವಿಡ್ ನಿರ್ಬಂಧಗಳನ್ನು ಪರಿಶೀಲಿಸುವ ಸಭೆಯಲ್ಲಿ ನಿರ್ಧರಿಸಿದೆ.

ದೆಹಲಿಯಲ್ಲಿನ್ನು ಕಾರಿನಲ್ಲಿ ಒಬ್ಬರೇ ಹೋಗುವಾಗ ಮಾಸ್ಕ್ ಧರಿಸಬೇಕಾಗಿಲ್ಲ
ಮಾಸ್ಕ್
TV9 Web
| Edited By: |

Updated on: Feb 04, 2022 | 5:56 PM

Share

ನವದೆಹಲಿ: ದೆಹಲಿಯಲ್ಲಿ ಇನ್ನುಮುಂದೆ ಕಾರಿನಲ್ಲಿ ಒಬ್ಬರೇ ಇದ್ದಾಗ ಮಾಸ್ಕ್​ ಧರಿಸುವ ಅಗತ್ಯವಿಲ್ಲ. ದೆಹಲಿಯಲ್ಲಿ ಮಾಸ್ಕ್ ಧರಿಸುವುದರಿಂದ ವಿನಾಯಿತಿ ನೀಡಲಾಗಿದೆ. ದೆಹಲಿ ಹೈಕೋರ್ಟ್ (Delhi High Court) ಅಭಿಪ್ರಾಯದಂತೆ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ನಿರ್ಧಾರ ಮಾಡಿದೆ. ದೆಹಲಿಯಲ್ಲಿ ತಮ್ಮ ಕಾರಿನಲ್ಲಿ ಏಕಾಂಗಿಯಾಗಿ ಚಾಲನೆ ಮಾಡುವವರು ಇನ್ನು ಮುಂದೆ ಮಾಸ್ಕ್ (Mask) ಧರಿಸುವ ಅಗತ್ಯವಿಲ್ಲ ಎಂದು ರಾಷ್ಟ್ರೀಯ ರಾಜಧಾನಿಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಇಂದು ಕೋವಿಡ್ ನಿರ್ಬಂಧಗಳನ್ನು ಪರಿಶೀಲಿಸುವ ಸಭೆಯಲ್ಲಿ ನಿರ್ಧರಿಸಿದೆ. ದೆಹಲಿ ಹೈಕೋರ್ಟ್ ನಿರ್ದೇಶನವನ್ನು “ಅಸಂಬದ್ಧ” ಎಂದು ಕರೆದ ಕೆಲವು ದಿನಗಳ ಬಳಿಕ ಇದೀಗ ಈ ನಿರ್ಧಾರಕ್ಕೆ ಬರಲಾಗಿದೆ.

ತನ್ನ ತಾಯಿಯೊಂದಿಗೆ ಕಾರಿನಲ್ಲಿ ಕುಳಿತು ಕಿಟಕಿಗಳನ್ನು ಮೇಲಕ್ಕೆತ್ತಿ ಕಾಫಿ ಕುಡಿಯುತ್ತಿದ್ದಾಗ ಮಾಸ್ಕ್ ಧರಿಸದ ವ್ಯಕ್ತಿಯೊಬ್ಬನಿಗೆ ದಂಡ ವಿಧಿಸಿದ ಘಟನೆ ದೆಹಲಿಯಲ್ಲಿ ನಡೆದಿತ್ತು. “ಇದು ದೆಹಲಿ ಸರ್ಕಾರದ ಆದೇಶ, ನೀವು ಅದನ್ನು ಏಕೆ ಹಿಂತೆಗೆದುಕೊಳ್ಳಬಾರದು? ಇದು ಅಸಂಬದ್ಧವಾಗಿದೆ. ನಾವು ನಮ್ಮ ಸ್ವಂತ ಕಾರಿನಲ್ಲಿ ಕುಳಿತಾಗ ನಾವು ಏಕೆ ಮಾಸ್ಕ್ ಧರಿಸಬೇಕು?” ಎಂದು ಹೈಕೋರ್ಟ್​ ನ್ಯಾಯಪೀಠ ಪ್ರಶ್ನಿಸಿತ್ತು.

ವಿಚಾರಣೆಯ ಸಂದರ್ಭದಲ್ಲಿ ದೆಹಲಿ ಸರ್ಕಾರವನ್ನು ಪ್ರತಿನಿಧಿಸುವ ಹಿರಿಯ ವಕೀಲ ರಾಹುಲ್ ಮೆಹ್ರಾ, 2021ರ ಏಪ್ರಿಲ್ 7ರ ಹೈಕೋರ್ಟ್‌ನ ಏಕ ಸದಸ್ಯರ ನ್ಯಾಯಪೀಠದ ಆದೇಶವು ಖಾಸಗಿ ಕಾರು ಚಾಲನೆ ಮಾಡುವಾಗ ಮಾಸ್ಕ್ ಧರಿಸದಿದ್ದಕ್ಕಾಗಿ ಚಲನ್‌ಗಳನ್ನು ವಿಧಿಸುವ ದೆಹಲಿ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿರುವುದು ಬಹಳ ದುರದೃಷ್ಟಕರ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸೋಮವಾರ ದೆಹಲಿಗೆ ಹಾರಲಿರುವ ಸಿಎಂ ಬೊಮ್ಮಾಯಿ; ಬಜೆಟ್ ಕುರಿತು ವರಿಷ್ಠರ ಜೊತೆ ಚರ್ಚೆ

Rain Updates: ದೆಹಲಿ, ಪಂಜಾಬ್, ಹರಿಯಾಣದಲ್ಲಿ ಫೆಬ್ರವರಿ ಮೊದಲ ವಾರದಲ್ಲಿ ಭಾರೀ ಮಳೆ ಸಾಧ್ಯತೆ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ