AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿನ್ನು ಕಾರಿನಲ್ಲಿ ಒಬ್ಬರೇ ಹೋಗುವಾಗ ಮಾಸ್ಕ್ ಧರಿಸಬೇಕಾಗಿಲ್ಲ

ದೆಹಲಿಯಲ್ಲಿ ತಮ್ಮ ಕಾರಿನಲ್ಲಿ ಏಕಾಂಗಿಯಾಗಿ ಚಾಲನೆ ಮಾಡುವವರು ಇನ್ನು ಮುಂದೆ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ರಾಷ್ಟ್ರೀಯ ರಾಜಧಾನಿಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಇಂದು ಕೋವಿಡ್ ನಿರ್ಬಂಧಗಳನ್ನು ಪರಿಶೀಲಿಸುವ ಸಭೆಯಲ್ಲಿ ನಿರ್ಧರಿಸಿದೆ.

ದೆಹಲಿಯಲ್ಲಿನ್ನು ಕಾರಿನಲ್ಲಿ ಒಬ್ಬರೇ ಹೋಗುವಾಗ ಮಾಸ್ಕ್ ಧರಿಸಬೇಕಾಗಿಲ್ಲ
ಮಾಸ್ಕ್
TV9 Web
| Updated By: ಸುಷ್ಮಾ ಚಕ್ರೆ|

Updated on: Feb 04, 2022 | 5:56 PM

Share

ನವದೆಹಲಿ: ದೆಹಲಿಯಲ್ಲಿ ಇನ್ನುಮುಂದೆ ಕಾರಿನಲ್ಲಿ ಒಬ್ಬರೇ ಇದ್ದಾಗ ಮಾಸ್ಕ್​ ಧರಿಸುವ ಅಗತ್ಯವಿಲ್ಲ. ದೆಹಲಿಯಲ್ಲಿ ಮಾಸ್ಕ್ ಧರಿಸುವುದರಿಂದ ವಿನಾಯಿತಿ ನೀಡಲಾಗಿದೆ. ದೆಹಲಿ ಹೈಕೋರ್ಟ್ (Delhi High Court) ಅಭಿಪ್ರಾಯದಂತೆ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ನಿರ್ಧಾರ ಮಾಡಿದೆ. ದೆಹಲಿಯಲ್ಲಿ ತಮ್ಮ ಕಾರಿನಲ್ಲಿ ಏಕಾಂಗಿಯಾಗಿ ಚಾಲನೆ ಮಾಡುವವರು ಇನ್ನು ಮುಂದೆ ಮಾಸ್ಕ್ (Mask) ಧರಿಸುವ ಅಗತ್ಯವಿಲ್ಲ ಎಂದು ರಾಷ್ಟ್ರೀಯ ರಾಜಧಾನಿಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಇಂದು ಕೋವಿಡ್ ನಿರ್ಬಂಧಗಳನ್ನು ಪರಿಶೀಲಿಸುವ ಸಭೆಯಲ್ಲಿ ನಿರ್ಧರಿಸಿದೆ. ದೆಹಲಿ ಹೈಕೋರ್ಟ್ ನಿರ್ದೇಶನವನ್ನು “ಅಸಂಬದ್ಧ” ಎಂದು ಕರೆದ ಕೆಲವು ದಿನಗಳ ಬಳಿಕ ಇದೀಗ ಈ ನಿರ್ಧಾರಕ್ಕೆ ಬರಲಾಗಿದೆ.

ತನ್ನ ತಾಯಿಯೊಂದಿಗೆ ಕಾರಿನಲ್ಲಿ ಕುಳಿತು ಕಿಟಕಿಗಳನ್ನು ಮೇಲಕ್ಕೆತ್ತಿ ಕಾಫಿ ಕುಡಿಯುತ್ತಿದ್ದಾಗ ಮಾಸ್ಕ್ ಧರಿಸದ ವ್ಯಕ್ತಿಯೊಬ್ಬನಿಗೆ ದಂಡ ವಿಧಿಸಿದ ಘಟನೆ ದೆಹಲಿಯಲ್ಲಿ ನಡೆದಿತ್ತು. “ಇದು ದೆಹಲಿ ಸರ್ಕಾರದ ಆದೇಶ, ನೀವು ಅದನ್ನು ಏಕೆ ಹಿಂತೆಗೆದುಕೊಳ್ಳಬಾರದು? ಇದು ಅಸಂಬದ್ಧವಾಗಿದೆ. ನಾವು ನಮ್ಮ ಸ್ವಂತ ಕಾರಿನಲ್ಲಿ ಕುಳಿತಾಗ ನಾವು ಏಕೆ ಮಾಸ್ಕ್ ಧರಿಸಬೇಕು?” ಎಂದು ಹೈಕೋರ್ಟ್​ ನ್ಯಾಯಪೀಠ ಪ್ರಶ್ನಿಸಿತ್ತು.

ವಿಚಾರಣೆಯ ಸಂದರ್ಭದಲ್ಲಿ ದೆಹಲಿ ಸರ್ಕಾರವನ್ನು ಪ್ರತಿನಿಧಿಸುವ ಹಿರಿಯ ವಕೀಲ ರಾಹುಲ್ ಮೆಹ್ರಾ, 2021ರ ಏಪ್ರಿಲ್ 7ರ ಹೈಕೋರ್ಟ್‌ನ ಏಕ ಸದಸ್ಯರ ನ್ಯಾಯಪೀಠದ ಆದೇಶವು ಖಾಸಗಿ ಕಾರು ಚಾಲನೆ ಮಾಡುವಾಗ ಮಾಸ್ಕ್ ಧರಿಸದಿದ್ದಕ್ಕಾಗಿ ಚಲನ್‌ಗಳನ್ನು ವಿಧಿಸುವ ದೆಹಲಿ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿರುವುದು ಬಹಳ ದುರದೃಷ್ಟಕರ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸೋಮವಾರ ದೆಹಲಿಗೆ ಹಾರಲಿರುವ ಸಿಎಂ ಬೊಮ್ಮಾಯಿ; ಬಜೆಟ್ ಕುರಿತು ವರಿಷ್ಠರ ಜೊತೆ ಚರ್ಚೆ

Rain Updates: ದೆಹಲಿ, ಪಂಜಾಬ್, ಹರಿಯಾಣದಲ್ಲಿ ಫೆಬ್ರವರಿ ಮೊದಲ ವಾರದಲ್ಲಿ ಭಾರೀ ಮಳೆ ಸಾಧ್ಯತೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ