AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಬೇಗುಸರಾಯ್​​ನಲ್ಲಿ ಪಾದಚಾರಿಗಳ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು; ಒಬ್ಬ ಸಾವು, 11 ಮಂದಿಗೆ ಗಾಯ

ಬಿಹಾರದ ರಾಷ್ಟ್ರೀಯ ಹೆದ್ದಾರಿ 31 ಮತ್ತು 28 ರ ಉದ್ದಕ್ಕೂ ಅಮಾಯಕ ಪಾದಚಾರಿಗಳ ಮೇಲೆ ಗುಂಡಿನ ಸುರಿಮಳೆಗೈದ ದುಷ್ಕರ್ಮಿಗಳು

ಬಿಹಾರ: ಬೇಗುಸರಾಯ್​​ನಲ್ಲಿ ಪಾದಚಾರಿಗಳ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು; ಒಬ್ಬ ಸಾವು, 11 ಮಂದಿಗೆ ಗಾಯ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Sep 13, 2022 | 9:52 PM

ಬೇಗುಸರಾಯ್: ಇಂದು(ಮಂಗಳವಾರ) ಸಂಜೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಹಾರದ (Bihar) ರಾಷ್ಟ್ರೀಯ ಹೆದ್ದಾರಿ 31 ಮತ್ತು 28 ರ ಉದ್ದಕ್ಕೂ ಅಮಾಯಕ ಪಾದಚಾರಿಗಳ ಮೇಲೆ ಗುಂಡಿನ ಸುರಿಮಳೆಗೈದ  (Mass Shooting) ಘಟನೆ ವರದಿ ಆಗಿದೆ. ಈ ಗುಂಡು ಹಾರಾಟದಲ್ಲಿ ಒಬ್ಬರು ಸಾವಿಗೀಡಾಗಿದ್ದು ಹನ್ನೊಂದು ಮಂದಿ  ಗಾಯಗೊಂಡಿದ್ದಾರೆ. ಬರೌನಿ ಥರ್ಮಲ್ ಪವರ್ ಸ್ಟೇಷನ್ ಬಳಿ ಎನ್ಎಚ್ 31 ರಿಂದ ಹಿಡಿದು ಎನ್ಎಚ್ 28 ರ ಬಚ್ವಾರಾವರೆಗೆ ತಮ್ಮ ಬೈಕ್‌ನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ ಈ ದುಷ್ಕರ್ಮಿಗಳು ಗುಂಡುಗಳನ್ನು ಹಾರಿಸಿದ್ದಾರೆ. ನಾಲ್ಕು ವಿವಿಧ ಸ್ಥಳಗಳಲ್ಲಿ ಗುಂಡಿನ ಚಕಮಕಿ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಬೇಗುಸರಾಯ್ (Begusarai) ಪೊಲೀಸ್ ವರಿಷ್ಠಾಧಿಕಾರಿ ಯೋಗೇಂದ್ರ ಕುಮಾರ್ ತಿಳಿಸಿದ್ದಾರೆ.”ಜಿಲ್ಲೆಯಾದ್ಯಂತ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಬಚ್ವಾರಾ ಪ್ರದೇಶದ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು ವ್ಯಕ್ತಿಗಳು ಬೈಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಪೊಲೀಸರು ಅವರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಕುಮಾರ್ ಹೇಳಿದರು. ಗುಂಡಿನ ದಾಳಿಯಲ್ಲಿ ಗಾಯಗೊಂಡವರನ್ನು ಬೇಗುಸರಾಯ್ ಸದರ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಬಿಹಾರದಲ್ಲಿ ಯಾವುದೇ ಸರ್ಕಾರವಿಲ್ಲ. ಇಲ್ಲಿ ಅಪರಾಧಿಗಳಲ್ಲಿ ಕಾನೂನಿನ ಭಯವಿಲ್ಲ. ಅಪರಾಧಿಗಳು ನಿರ್ಭೀತಿಯಿಂದ ಹಲವಾರು ಜನರ ಮೇಲೆ ಗುಂಡು ಹಾರಿಸಿದರು. ಅವರು 4 ಪೊಲೀಸ್ ಠಾಣೆ ಪ್ರದೇಶಗಳಲ್ಲಿ 30 ಕಿಮೀ ಪ್ರಯಾಣಿಸಿದರು, ಆದರೆ ಅವರು ಪೊಲೀಸರಿಗೆ ಸಿಕ್ಕಿಬೀಳಲಿಲ್ಲ. ಈ ಬಗ್ಗೆ ಸಿಎಂ ಹೇಳಿಕೆ ನೀಡಬೇಕು ಎಂದು ಬೇಗುಸರಾಯ್‌ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯ ಕುರಿತು ಕೇಂದ್ರ ಸಚಿವ ಹಾಗೂ ಬೇಗುಸರಾಯ್ ಸಂಸದ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ರಾಜ್ಯ ಸರ್ಕಾರವು ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕನಿಷ್ಠ 1 ಕೋಟಿ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದಿದ್ದಾರೆ ಸಿಂಗ್.

Published On - 9:23 pm, Tue, 13 September 22

ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ