AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಬೇಗುಸರಾಯ್​​ನಲ್ಲಿ ಪಾದಚಾರಿಗಳ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು; ಒಬ್ಬ ಸಾವು, 11 ಮಂದಿಗೆ ಗಾಯ

ಬಿಹಾರದ ರಾಷ್ಟ್ರೀಯ ಹೆದ್ದಾರಿ 31 ಮತ್ತು 28 ರ ಉದ್ದಕ್ಕೂ ಅಮಾಯಕ ಪಾದಚಾರಿಗಳ ಮೇಲೆ ಗುಂಡಿನ ಸುರಿಮಳೆಗೈದ ದುಷ್ಕರ್ಮಿಗಳು

ಬಿಹಾರ: ಬೇಗುಸರಾಯ್​​ನಲ್ಲಿ ಪಾದಚಾರಿಗಳ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು; ಒಬ್ಬ ಸಾವು, 11 ಮಂದಿಗೆ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Sep 13, 2022 | 9:52 PM

Share

ಬೇಗುಸರಾಯ್: ಇಂದು(ಮಂಗಳವಾರ) ಸಂಜೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಹಾರದ (Bihar) ರಾಷ್ಟ್ರೀಯ ಹೆದ್ದಾರಿ 31 ಮತ್ತು 28 ರ ಉದ್ದಕ್ಕೂ ಅಮಾಯಕ ಪಾದಚಾರಿಗಳ ಮೇಲೆ ಗುಂಡಿನ ಸುರಿಮಳೆಗೈದ  (Mass Shooting) ಘಟನೆ ವರದಿ ಆಗಿದೆ. ಈ ಗುಂಡು ಹಾರಾಟದಲ್ಲಿ ಒಬ್ಬರು ಸಾವಿಗೀಡಾಗಿದ್ದು ಹನ್ನೊಂದು ಮಂದಿ  ಗಾಯಗೊಂಡಿದ್ದಾರೆ. ಬರೌನಿ ಥರ್ಮಲ್ ಪವರ್ ಸ್ಟೇಷನ್ ಬಳಿ ಎನ್ಎಚ್ 31 ರಿಂದ ಹಿಡಿದು ಎನ್ಎಚ್ 28 ರ ಬಚ್ವಾರಾವರೆಗೆ ತಮ್ಮ ಬೈಕ್‌ನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ ಈ ದುಷ್ಕರ್ಮಿಗಳು ಗುಂಡುಗಳನ್ನು ಹಾರಿಸಿದ್ದಾರೆ. ನಾಲ್ಕು ವಿವಿಧ ಸ್ಥಳಗಳಲ್ಲಿ ಗುಂಡಿನ ಚಕಮಕಿ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಬೇಗುಸರಾಯ್ (Begusarai) ಪೊಲೀಸ್ ವರಿಷ್ಠಾಧಿಕಾರಿ ಯೋಗೇಂದ್ರ ಕುಮಾರ್ ತಿಳಿಸಿದ್ದಾರೆ.”ಜಿಲ್ಲೆಯಾದ್ಯಂತ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಬಚ್ವಾರಾ ಪ್ರದೇಶದ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು ವ್ಯಕ್ತಿಗಳು ಬೈಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಪೊಲೀಸರು ಅವರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಕುಮಾರ್ ಹೇಳಿದರು. ಗುಂಡಿನ ದಾಳಿಯಲ್ಲಿ ಗಾಯಗೊಂಡವರನ್ನು ಬೇಗುಸರಾಯ್ ಸದರ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಬಿಹಾರದಲ್ಲಿ ಯಾವುದೇ ಸರ್ಕಾರವಿಲ್ಲ. ಇಲ್ಲಿ ಅಪರಾಧಿಗಳಲ್ಲಿ ಕಾನೂನಿನ ಭಯವಿಲ್ಲ. ಅಪರಾಧಿಗಳು ನಿರ್ಭೀತಿಯಿಂದ ಹಲವಾರು ಜನರ ಮೇಲೆ ಗುಂಡು ಹಾರಿಸಿದರು. ಅವರು 4 ಪೊಲೀಸ್ ಠಾಣೆ ಪ್ರದೇಶಗಳಲ್ಲಿ 30 ಕಿಮೀ ಪ್ರಯಾಣಿಸಿದರು, ಆದರೆ ಅವರು ಪೊಲೀಸರಿಗೆ ಸಿಕ್ಕಿಬೀಳಲಿಲ್ಲ. ಈ ಬಗ್ಗೆ ಸಿಎಂ ಹೇಳಿಕೆ ನೀಡಬೇಕು ಎಂದು ಬೇಗುಸರಾಯ್‌ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯ ಕುರಿತು ಕೇಂದ್ರ ಸಚಿವ ಹಾಗೂ ಬೇಗುಸರಾಯ್ ಸಂಸದ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ರಾಜ್ಯ ಸರ್ಕಾರವು ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕನಿಷ್ಠ 1 ಕೋಟಿ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದಿದ್ದಾರೆ ಸಿಂಗ್.

Published On - 9:23 pm, Tue, 13 September 22

Follow Us
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ