AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಬೇಗುಸರಾಯ್​​ನಲ್ಲಿ ಪಾದಚಾರಿಗಳ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು; ಒಬ್ಬ ಸಾವು, 11 ಮಂದಿಗೆ ಗಾಯ

ಬಿಹಾರದ ರಾಷ್ಟ್ರೀಯ ಹೆದ್ದಾರಿ 31 ಮತ್ತು 28 ರ ಉದ್ದಕ್ಕೂ ಅಮಾಯಕ ಪಾದಚಾರಿಗಳ ಮೇಲೆ ಗುಂಡಿನ ಸುರಿಮಳೆಗೈದ ದುಷ್ಕರ್ಮಿಗಳು

ಬಿಹಾರ: ಬೇಗುಸರಾಯ್​​ನಲ್ಲಿ ಪಾದಚಾರಿಗಳ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು; ಒಬ್ಬ ಸಾವು, 11 ಮಂದಿಗೆ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 13, 2022 | 9:52 PM

Share

ಬೇಗುಸರಾಯ್: ಇಂದು(ಮಂಗಳವಾರ) ಸಂಜೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಹಾರದ (Bihar) ರಾಷ್ಟ್ರೀಯ ಹೆದ್ದಾರಿ 31 ಮತ್ತು 28 ರ ಉದ್ದಕ್ಕೂ ಅಮಾಯಕ ಪಾದಚಾರಿಗಳ ಮೇಲೆ ಗುಂಡಿನ ಸುರಿಮಳೆಗೈದ  (Mass Shooting) ಘಟನೆ ವರದಿ ಆಗಿದೆ. ಈ ಗುಂಡು ಹಾರಾಟದಲ್ಲಿ ಒಬ್ಬರು ಸಾವಿಗೀಡಾಗಿದ್ದು ಹನ್ನೊಂದು ಮಂದಿ  ಗಾಯಗೊಂಡಿದ್ದಾರೆ. ಬರೌನಿ ಥರ್ಮಲ್ ಪವರ್ ಸ್ಟೇಷನ್ ಬಳಿ ಎನ್ಎಚ್ 31 ರಿಂದ ಹಿಡಿದು ಎನ್ಎಚ್ 28 ರ ಬಚ್ವಾರಾವರೆಗೆ ತಮ್ಮ ಬೈಕ್‌ನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ ಈ ದುಷ್ಕರ್ಮಿಗಳು ಗುಂಡುಗಳನ್ನು ಹಾರಿಸಿದ್ದಾರೆ. ನಾಲ್ಕು ವಿವಿಧ ಸ್ಥಳಗಳಲ್ಲಿ ಗುಂಡಿನ ಚಕಮಕಿ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಬೇಗುಸರಾಯ್ (Begusarai) ಪೊಲೀಸ್ ವರಿಷ್ಠಾಧಿಕಾರಿ ಯೋಗೇಂದ್ರ ಕುಮಾರ್ ತಿಳಿಸಿದ್ದಾರೆ.”ಜಿಲ್ಲೆಯಾದ್ಯಂತ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಬಚ್ವಾರಾ ಪ್ರದೇಶದ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು ವ್ಯಕ್ತಿಗಳು ಬೈಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಪೊಲೀಸರು ಅವರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಕುಮಾರ್ ಹೇಳಿದರು. ಗುಂಡಿನ ದಾಳಿಯಲ್ಲಿ ಗಾಯಗೊಂಡವರನ್ನು ಬೇಗುಸರಾಯ್ ಸದರ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಬಿಹಾರದಲ್ಲಿ ಯಾವುದೇ ಸರ್ಕಾರವಿಲ್ಲ. ಇಲ್ಲಿ ಅಪರಾಧಿಗಳಲ್ಲಿ ಕಾನೂನಿನ ಭಯವಿಲ್ಲ. ಅಪರಾಧಿಗಳು ನಿರ್ಭೀತಿಯಿಂದ ಹಲವಾರು ಜನರ ಮೇಲೆ ಗುಂಡು ಹಾರಿಸಿದರು. ಅವರು 4 ಪೊಲೀಸ್ ಠಾಣೆ ಪ್ರದೇಶಗಳಲ್ಲಿ 30 ಕಿಮೀ ಪ್ರಯಾಣಿಸಿದರು, ಆದರೆ ಅವರು ಪೊಲೀಸರಿಗೆ ಸಿಕ್ಕಿಬೀಳಲಿಲ್ಲ. ಈ ಬಗ್ಗೆ ಸಿಎಂ ಹೇಳಿಕೆ ನೀಡಬೇಕು ಎಂದು ಬೇಗುಸರಾಯ್‌ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯ ಕುರಿತು ಕೇಂದ್ರ ಸಚಿವ ಹಾಗೂ ಬೇಗುಸರಾಯ್ ಸಂಸದ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ರಾಜ್ಯ ಸರ್ಕಾರವು ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕನಿಷ್ಠ 1 ಕೋಟಿ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದಿದ್ದಾರೆ ಸಿಂಗ್.

Published On - 9:23 pm, Tue, 13 September 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್