AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​ನ ಹೋಶಿಯಾರ್‌ಪುರ್​​ನಲ್ಲಿ ಪೊಲೀಸ್ ಕಾರ್ಯಾಚರಣೆ: ಅಮೃತಪಾಲ್ ಸಿಂಗ್ ಶರಣಾಗುವ ಸಾಧ್ಯತೆ

PB10 CK 0527 ನೋಂದಣಿ ಸಂಖ್ಯೆಯನ್ನು ಹೊಂದಿರುವ ಬಿಳಿ ಬಣ್ಣದ ಇನ್ನೋವಾ ಕಾರು ಹೋಶಿಯಾರ್‌ಪುರದಲ್ಲಿ ಬ್ಯಾರಿಕೇಡ್‌ಗಳನ್ನು ಮುರಿದು ಪರಾರಿಯಾಗಿದ್ದು ಮೆಹ್ತಿಯಾನಾ ಗ್ರಾಮದ ಗುರುದ್ವಾರದ ಬಳಿ ಅದನ್ನು ಬಿಟ್ಟು ಹೋದ ಸ್ಥಿತಿಯಲ್ಲಿ ಪತ್ತೆಯಾಗಿತ್ತು

ಪಂಜಾಬ್​​ನ ಹೋಶಿಯಾರ್‌ಪುರ್​​ನಲ್ಲಿ ಪೊಲೀಸ್ ಕಾರ್ಯಾಚರಣೆ: ಅಮೃತಪಾಲ್ ಸಿಂಗ್ ಶರಣಾಗುವ ಸಾಧ್ಯತೆ
ಅಮೃತಪಾಲ್ ಸಿಂಗ್
ರಶ್ಮಿ ಕಲ್ಲಕಟ್ಟ
|

Updated on:Mar 29, 2023 | 1:25 PM

Share

ಪರಾರಿಯಾಗಿರುವ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ (Amritpal Singh) ಮತ್ತು ಆತನ ಆಪ್ತ ಪಾಪಲ್​​ಪ್ರೀತ್ ಮಂಗಳವಾರ ಸಂಜೆ ಕಾರ್ ಚೇಸ್‌ನಲ್ಲಿ ಪೊಲೀಸರಿಂದ ತಪ್ಪಿಸಿಕೊಂಡ ನಂತರ ಪಂಜಾಬ್​​ನ (Punjab) ಹೋಶಿಯಾರ್‌ಪುರ್ ಜಿಲ್ಲೆಯ ಮರ್ನಾಯನ್ ಗ್ರಾಮದಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಅರೆಸೈನಿಕ ಸಿಬ್ಬಂದಿಯನ್ನು ಸಹ ಆ ಪ್ರದೇಶದಲ್ಲಿ ನಿಯೋಜಿಸಲಾಗಿದ್ದು, ಅಮೃತಪಾಲ್ ಸಿಂಗ್ ಶರಣಾಗುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿರುವುದಾಗಿ ಟಿವಿ9 ಭಾರತ್​​ವರ್ಷ್ ವರದಿ ಮಾಡಿದೆ. ಪರಾರಿಯಾಗಿರುವ ಅಮೃತಪಾಲ್ ಮತ್ತು ಅವರ ಸಹಾಯಕರು ಆ ವಾಹನದಲ್ಲಿ ಇರಬಹುದೆಂದು ಶಂಕಿಸಿ ಮಂಗಳವಾರ ಸಂಜೆ ಪಂಜಾಬ್ ಪೊಲೀಸ್‌ನ ಕೌಂಟರ್ ಇಂಟೆಲಿಜೆನ್ಸ್ ವಿಭಾಗದ ತಂಡವು ಫಗ್ವಾರಾದಿಂದ ಕಾರನ್ನು ಹಿಂಬಾಲಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

PB10 CK 0527 ನೋಂದಣಿ ಸಂಖ್ಯೆಯನ್ನು ಹೊಂದಿರುವ ಬಿಳಿ ಬಣ್ಣದ ಇನ್ನೋವಾ ಕಾರು ಹೋಶಿಯಾರ್‌ಪುರದಲ್ಲಿ ಬ್ಯಾರಿಕೇಡ್‌ಗಳನ್ನು ಮುರಿದು ಪರಾರಿಯಾಗಿದ್ದು ಮೆಹ್ತಿಯಾನಾ ಗ್ರಾಮದ ಗುರುದ್ವಾರದ ಬಳಿ ಅದನ್ನು ಬಿಟ್ಟು ಹೋದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಕಾರಿನಲ್ಲಿ ಅಮೃತಪಾಲ್ ಮತ್ತು ಪಾಪಲ್ ಪ್ರೀತ್ ಮತ್ತು ಇತರ ಕೆಲವು ಸಹಚರರು ಇದ್ದರು ಎಂದು ಶಂಕಿಸಲಾಗಿದೆ.

ಮಾರ್ಚ್ 18 ರಂದು ಜಲಂಧರ್‌ನಲ್ಲಿ ಸಿಂಗ್ ಮತ್ತು ಆತನ ಸಹಚರರನ್ನು ಬಂಧಿಸಲು ಪಂಜಾಬ್ ಪೊಲೀಸರು ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಅಮೃತಪಾಲ್ ಸಿಂಗ್ ಕಳೆದ 12 ದಿನಗಳಿಂದ ಪರಾರಿಯಾಗಿದ್ದಾನೆ. ಅಮೃತಪಾಲ್ ಪೊಲೀಸರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ ಮತ್ತು ಅಂದಿನಿಂದ ಪಂಜಾಬ್, ಹರಿಯಾಣ ಮತ್ತು ದೆಹಲಿ ಸೇರಿದಂತೆ ಅನೇಕ ಸ್ಥಳಗಳಲ್ಲಿ ವೇಷ ಮರೆಸಿ ಸುತ್ತಾಡುತ್ತಿರುವುದು ಕಂಡು ಬಂದಿದೆ.

ಇದನ್ನೂ ಓದಿ: Disqualification Removed: ಲಕ್ಷದ್ವೀಪ ಸಂಸದ ಫೈಜಲ್ ಅನರ್ಹತೆ ರದ್ದು

ಪೂರ್ವ ದೆಹಲಿಯ ಮಧು ವಿಹಾರ್‌ನ ಬೀದಿಯಲ್ಲಿ ಅಮೃತಪಾಲ್ ಸಿಂಗ್ ಮತ್ತು ಪಾಪಲ್ ಪ್ರೀತ್ ತಿರುಗುತ್ತಿರುವುದನ್ನು ತೋರಿಸುವ ಸಿಸಿಟಿವಿ ದೃಶ್ಯಾವಳಿ ಮಂಗಳವಾರ ಕಾಣಿಸಿಕೊಂಡಿತ್ತು. ಇವರಿಬ್ಬರು ಮಾಸ್ಕ್ ಧರಿಸಿದ್ದು ಅಮೃತಪಾಲ್ ಸನ್ ಗ್ಲಾಸ್, ಡೆನಿಮ್ ಜಾಕೆಟ್ ಮತ್ತು ಪೇಟ ಧರಿಸದೆ ಸುತ್ತಾಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:44 pm, Wed, 29 March 23

ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು