AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar: ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಸ್ಪೋಟ; 7 ಜನರ ದುರ್ಮರಣ

ಸ್ಫೋಟಕ್ಕೆ ಪ್ರಾಥಮಿಕ ಕಾರಣವೆಂದರೆ ಗನ್‌ಪೌಡರ್, ಅಕ್ರಮ ಪಟಾಕಿಗಳು ಮತ್ತು ಕಟ್ಟಡದಲ್ಲಿ ಸಂಗ್ರಹಿಸಲಾದ ದೇಶ ನಿರ್ಮಿತ ಬಾಂಬ್‌ಗಳು ಎಂದು ಭಾಗಲ್ಪುರ ರೇಂಜ್ ಡಿಐಜಿ ಸುಜಿತ್ ಕುಮಾರ್ ಹೇಳಿದ್ದಾರೆ.

Bihar: ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಸ್ಪೋಟ; 7 ಜನರ ದುರ್ಮರಣ
ಸ್ಪೋಟದಿಂದ ಕುಸಿದ ಮೂರು ಅಂತಸ್ತಿನ ಕಟ್ಟಡ
TV9 Web
| Edited By: |

Updated on:Mar 04, 2022 | 10:00 AM

Share

ಬಿಹಾರ: ಇಲ್ಲಿನ ಭಾಗಲ್ಪುರ್​ದಲ್ಲಿ ಗುರುವಾರ ರಾತ್ರಿ ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿರುವ ಜಿಲ್ಲೆಯ ಕಜ್ವಾಲಿಚಕ್ ಪ್ರದೇಶದ ಅನಾಥಾಶ್ರಮದ ಪಕ್ಕದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಮತ್ತು ತುರ್ತು ಸೇವೆಗಳು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.

ಕುಸಿದ ಕಟ್ಟಡದ ಅವಶೇಷಗಳಡಿ ಸುಮಾರು 10 ರಿಂದ 15 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಗಾಯಾಳುಗಳನ್ನು ಮಾಯಗಂಜ್‌ನ ಜೆಎಲ್‌ಎನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಬಲ ಸ್ಫೋಟದಲ್ಲಿ ಅಕ್ಕಪಕ್ಕದ ಎರಡರಿಂದ ಮೂರು ಮನೆಗಳಿಗೂ ಹಾನಿಯಾಗಿದೆ.

ಮೊಹಮ್ಮದ್ ಯೂಸುಫ್ ಎನ್ನುವ ನೆರೆಹೊರೆಯವರ ಪ್ರಕಾರ, ನಾಶವಾದ ಕಟ್ಟಡದ ನಿವಾಸಿಗಳು ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದರು ಎಂದು ಹೇಳಿದ್ದಾರೆ. ಸ್ಫೋಟಕ್ಕೆ ಪ್ರಾಥಮಿಕ ಕಾರಣವೆಂದರೆ ಗನ್‌ಪೌಡರ್, ಅಕ್ರಮ ಪಟಾಕಿಗಳು ಮತ್ತು ಕಟ್ಟಡದಲ್ಲಿ ಸಂಗ್ರಹಿಸಲಾದ ದೇಶ ನಿರ್ಮಿತ ಬಾಂಬ್‌ಗಳು ಎಂದು ಭಾಗಲ್ಪುರ ರೇಂಜ್ ಡಿಐಜಿ ಸುಜಿತ್ ಕುಮಾರ್ ಹೇಳಿದ್ದಾರೆ. ಸದ್ಯ ತನಿಖೆಯನ್ನು ಪ್ರಾರಂಭಿಸಲಾಗಿದ್ದು, ಫೋರೆನ್ಸಿಕ್ಸ್ ತಂಡವು ಘಟನಾ ಸ್ಥಳವನ್ನು ಪರೀಕ್ಷಿಸಿದ ನಂತರ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:

Ukraine Crisis: ಕೀವ್​ನಿಂದ ಆಗಮಿಸುತ್ತಿದ್ದ ಭಾರತದ ವಿದ್ಯಾರ್ಥಿಗೆ ಗುಂಡು; ಆಸ್ಪತ್ರೆಗೆ ದಾಖಲು: ವಿಕೆ ಸಿಂಗ್ ಮಾಹಿತಿ

Published On - 10:00 am, Fri, 4 March 22

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು