AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar: ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಸ್ಪೋಟ; 7 ಜನರ ದುರ್ಮರಣ

ಸ್ಫೋಟಕ್ಕೆ ಪ್ರಾಥಮಿಕ ಕಾರಣವೆಂದರೆ ಗನ್‌ಪೌಡರ್, ಅಕ್ರಮ ಪಟಾಕಿಗಳು ಮತ್ತು ಕಟ್ಟಡದಲ್ಲಿ ಸಂಗ್ರಹಿಸಲಾದ ದೇಶ ನಿರ್ಮಿತ ಬಾಂಬ್‌ಗಳು ಎಂದು ಭಾಗಲ್ಪುರ ರೇಂಜ್ ಡಿಐಜಿ ಸುಜಿತ್ ಕುಮಾರ್ ಹೇಳಿದ್ದಾರೆ.

Bihar: ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಸ್ಪೋಟ; 7 ಜನರ ದುರ್ಮರಣ
ಸ್ಪೋಟದಿಂದ ಕುಸಿದ ಮೂರು ಅಂತಸ್ತಿನ ಕಟ್ಟಡ
TV9 Web
| Edited By: |

Updated on:Mar 04, 2022 | 10:00 AM

Share

ಬಿಹಾರ: ಇಲ್ಲಿನ ಭಾಗಲ್ಪುರ್​ದಲ್ಲಿ ಗುರುವಾರ ರಾತ್ರಿ ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿರುವ ಜಿಲ್ಲೆಯ ಕಜ್ವಾಲಿಚಕ್ ಪ್ರದೇಶದ ಅನಾಥಾಶ್ರಮದ ಪಕ್ಕದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಮತ್ತು ತುರ್ತು ಸೇವೆಗಳು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.

ಕುಸಿದ ಕಟ್ಟಡದ ಅವಶೇಷಗಳಡಿ ಸುಮಾರು 10 ರಿಂದ 15 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಗಾಯಾಳುಗಳನ್ನು ಮಾಯಗಂಜ್‌ನ ಜೆಎಲ್‌ಎನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಬಲ ಸ್ಫೋಟದಲ್ಲಿ ಅಕ್ಕಪಕ್ಕದ ಎರಡರಿಂದ ಮೂರು ಮನೆಗಳಿಗೂ ಹಾನಿಯಾಗಿದೆ.

ಮೊಹಮ್ಮದ್ ಯೂಸುಫ್ ಎನ್ನುವ ನೆರೆಹೊರೆಯವರ ಪ್ರಕಾರ, ನಾಶವಾದ ಕಟ್ಟಡದ ನಿವಾಸಿಗಳು ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದರು ಎಂದು ಹೇಳಿದ್ದಾರೆ. ಸ್ಫೋಟಕ್ಕೆ ಪ್ರಾಥಮಿಕ ಕಾರಣವೆಂದರೆ ಗನ್‌ಪೌಡರ್, ಅಕ್ರಮ ಪಟಾಕಿಗಳು ಮತ್ತು ಕಟ್ಟಡದಲ್ಲಿ ಸಂಗ್ರಹಿಸಲಾದ ದೇಶ ನಿರ್ಮಿತ ಬಾಂಬ್‌ಗಳು ಎಂದು ಭಾಗಲ್ಪುರ ರೇಂಜ್ ಡಿಐಜಿ ಸುಜಿತ್ ಕುಮಾರ್ ಹೇಳಿದ್ದಾರೆ. ಸದ್ಯ ತನಿಖೆಯನ್ನು ಪ್ರಾರಂಭಿಸಲಾಗಿದ್ದು, ಫೋರೆನ್ಸಿಕ್ಸ್ ತಂಡವು ಘಟನಾ ಸ್ಥಳವನ್ನು ಪರೀಕ್ಷಿಸಿದ ನಂತರ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:

Ukraine Crisis: ಕೀವ್​ನಿಂದ ಆಗಮಿಸುತ್ತಿದ್ದ ಭಾರತದ ವಿದ್ಯಾರ್ಥಿಗೆ ಗುಂಡು; ಆಸ್ಪತ್ರೆಗೆ ದಾಖಲು: ವಿಕೆ ಸಿಂಗ್ ಮಾಹಿತಿ

Published On - 10:00 am, Fri, 4 March 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ